ಕೇಬಲ್ ಟಿವಿ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ ಟ್ರಾಯ್
ನವದೆಹಲಿ, ಜನವರಿ 13 : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದ ಎನ್ಟಿಒ ಆದೇಶಕ್ಕೆ ತಿದ್ದುಪಡಿ ತಂದಿದೆ. ದೇಶದ ಪ್ರಮುಖ ಪ್ರಸಾರ ಕಂಪನಿಗಳು ಟ್ರಾಯ್ ತಂದಿರುವ ತಿದ್ದುಪಡಿಯನ್ನು ವಿರೋಧಿಸಿವೆ.
ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಟ್ರಾಯ್ ಅಧ್ಯಕ್ಷ ಆರ್. ಎಸ್. ಶರ್ಮಾ, "ನಾವು ಗ್ರಾಹಕರಿಗೆ ಹೆಚ್ಚಿನ ಚಾನಲ್ಗಳನ್ನು ಒದಗಿಸುವ ಹೊಸ ಸುಂಕದ ಆದೇಶ (ಎನ್ಟಿಒ) ನಿಬಂಧನೆಗಳಿಗೆ ತಿದ್ದುಪಡಿ ತರುತ್ತಿದ್ದೇವೆ" ಎಂದು ಹೇಳಿದರು.
ಟ್ರಾಯ್ ತಂದಿರುವ ತಿದ್ದುಪಡಿ ನಿಯಮದಿಂದಾಗಿ ಡಿಟಿಎಚ್ ಮತ್ತು ಕೇಬಲ್ ಬಿಲ್ಗಳು ಈಗಿನ ದರಕ್ಕೆ ಹೋಲಿಕೆ ಮಾಡಿದರೆ ಶೇ 14ರಷ್ಟು ಇಳಿಕೆಯಾಗುವ ನಿರೀಕ್ಷೆ ಇದೆ. ಕಡಿಮೆ ಶುಲ್ಕಕ್ಕೆ ಹೆಚ್ಚಿನ ಚಾನೆಲ್ಗಳನ್ನು ಗ್ರಾಹಕರು ಪಡೆಯಬಹುದಾಗಿದೆ.
ಜೀ, ಸೋನಿ ಪಿಕ್ಚರ್, ವಯಾಕಾಮ್ 18 ಸೇರಿದಂತೆ ಪ್ರಮುಖ ದೇಶದ ಪ್ರಮುಖ ಪ್ರಸಾರ ಕಂಪನಿಗಳು ಟ್ರಾಯ್ ತಂದಿರುವ ತಿದ್ದುಪಡಿಯನ್ನು ವಿರೋಧಿಸಿವೆ. ಮಾರ್ಚ್ 1ರಿಂದ ನೂತನ ದರಗಳು ಜಾರಿಗೆ ಬರಲಿದ್ದು, ದರ ಎಷ್ಟು ಕಡಿಮೆಯಾಗಲಿದೆ? ಎಂದು ಕಾದು ನೋಡಬೇಕಿದೆ.

19 ರಿಂದ 12 ರೂ. ಗೆ ಇಳಿಕೆ
ಟ್ರಾಯ್ ಅಧ್ಯಕ್ಷ ಆರ್. ಎಸ್. ಶರ್ಮಾ, "ಯಾವುದೇ ಚಾನೆಲ್ಗೆ ಗುಚ್ಛದಲ್ಲಿನ ಬೆಲೆಗಿಂತ ಹೆಚ್ಚಿನ ಬೆಲೆ ಇರಬಾರದು. ಚಾನೆಲ್ಗಳ ಗುಚ್ಛಕ್ಕೆ ಇದ್ದ ದರವನ್ನು ರೂ.19 ರಿಂದ 12ಕ್ಕೆ ಇಳಿಕೆ ಮಾಡಲಾಗಿದೆ. ಗುಚ್ಛವನ್ನು ರೂಪಿಸುವ ಚಾನೆಲ್ಗಳ ಎ-ಲಾ-ಕಾರ್ಟೆ ಬೆಲೆಯ ಮೊತ್ತವು ಗುಚ್ಛದ ಬೆಲೆಗಿಂತ 1.5 ಪಟ್ಟು ಹೆಚ್ಚಾಗಬಾರದು" ಎಂದರು.

200 ಚಾನೆಲ್ಗಳನ್ನು ಪಡೆಯಲಿದ್ದಾರೆ
ಇದುವರೆಗೂ 130 ರೂ.ಗಳಿಗೆ 100 ಚಾನೆಲ್ ನೀಡಲಾಗುತ್ತಿತ್ತು. ಇದು ಪ್ರಸಾರ ಭಾರತಿ ಕಡ್ಡಾಯಗೊಳಿಸಿದ ಚಾನೆಲ್ಗಳನ್ನು ಒಳಗೊಂಡಿತ್ತು. ಈಗ ಪ್ರಸಾರ ಭಾರತಿ ಚಾನೆಲ್ಗಳನ್ನು ಹೊರತುಪಡಿಸಿ 130 ರೂ.ಗಳಲ್ಲಿ 200 ಚಾನೆಲ್ಗಳನ್ನು ಗ್ರಾಹಕರಿಗೆ ನೀಡಬೇಕಿದೆ.

ಎನ್ಸಿಎಫ್ ಶುಲ್ಕ
ಟ್ರಾಯ್ ತಿದ್ದುಪಡಿ ಮಾಡಿರುವ ನಿಯಮಗಳ ಪ್ರಕಾರ ಒಬ್ಬ ಬಳಕೆದಾರನ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸಂಪರ್ಕವಿದ್ದರೆ ಆತನಿಗೆ 2 ಮತ್ತು ಆ ನಂತರ ಪಡೆಯುವ ಪ್ರತಿ ಮೊದಲ ಸಂಪರ್ಕಕ್ಕೆ ಶೇ 40ರಷ್ಟು ಮಾತ್ರ ಎನ್ಸಿಎಫ್ ಶುಲ್ಕವನ್ನು ವಿಧಿಸಲು ಅವಕಾಶವಿದೆ.

ಮಾರ್ಚ್ನಿಂದ ದರ ಜಾರಿ
ಕೇಬಲ್ ಮತ್ತು ಬ್ರಾಡ್ ಕಾಸ್ಟಿಂಗ್ ಸೇವೆಗಳಿಗೆ ಸಂಬಂಧಿಸಿದಂತೆ ಟ್ರಾಯ್ ತಿದ್ದುಪಡಿ ತಂದಿದೆ. ಇದರ ಅನ್ವಯ ಕೇಬಲ್ ಆಪರೇಟರ್ಗಳು ಬದಲಾವಣೆ ಮಾಡಿ ವೆಬ್ಸೈಟ್ನಲ್ಲಿ ಪ್ರಕಟಿಸಬೇಕು. ನೂತನ ದರಗಳು ಮಾರ್ಚ್ನಿಂದ ಜಾರಿಗೆ ಬರಲಿವೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications