ಆಂಧ್ರದಲ್ಲಿ ರೈಲು ದುರಂತ : ನಾಲ್ವರು ಸಾವು, 40 ಮಂದಿಗೆ ಗಾಯ
ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಭಾನುವಾರ ರೈಲು ಹಳಿ ತಪ್ಪಿದ ಪರಿಣಾಮ ಎರಡು ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಪ್ರಯಾಣಿಕರು ಮೃತಪಟ್ಟು 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಆಂಧ್ರದ ವಿಜಯನಗರ ಜಿಲ್ಲೆಯ ಕೋತವಲಸ ಮಂಡಲದ ಅಲಮಂಡ-ಕಂಠಕಪಲ್ಲಿ ಎಂಬಲ್ಲಿ ರೈಲು ಅಪಘಾತ ಸಂಭವಿಸಿದೆ. ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲು ಹಳಿತಪ್ಪಿದೆ. ರಾಯಗಡ ಪ್ಯಾಸೆಂಜರ್ ರೈಲು ಓವರ್ ಹೆಡ್ ಕೇಬಲ್ ಕಟ್ ಆದ ಕಾರಣ ಹಳಿಗಳ ಮೇಲೆ ಸಿಲುಕಿಕೊಂಡಿತ್ತು, ಅದೇ ಸಮಯಕ್ಕೆ ಬಂದ ಪಲಾಸ ಎಕ್ಸ್ಪ್ರೆಸ್ ರಾಯಗಡ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ರಾಯಗಢ ಪ್ಯಾಸೆಂಜರ್ ರೈಲಿನ ಮೂರು ಬೋಗಿಗಳು ಹಳಿತಪ್ಪಿದ್ದು ಮಾತ್ರವಲ್ಲದೇ ಭಾರಿ ಹಾನಿ ಸಂಭವಿಸಿದೆ. ಈ ಅವಘಡದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಾಹಿತಿ ಪಡೆದ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಹಾರ ಕ್ರಮ ಕೈಗೊಂಡಿದ್ದಾರೆ. ಆದರೆ ಘಟನಾ ಸ್ಥಳದಲ್ಲಿ ವಿದ್ಯುತ್ ಇಲ್ಲದ ಕಾರಣ ರಕ್ಷಣಾ ಕಾರ್ಯದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. ಮತ್ತೊಂದೆಡೆ. ಬೋಗಿಗಳಲ್ಲಿ ಪ್ರಯಾಣಿಕರ ಸಂಖ್ಯೆ ಜಾಸ್ತಿ ಇರುವುದರಿಂದ. ಹಲವರು ಗಂಭೀರವಾಗಿ ಗಾಯಗೊಂಡಿರುವ ಆತಂಕ ಇದೆ.
ಎಲ್ಲಾ ಗಾಯಾಳುಗಳನ್ನು ಆದಷ್ಟು ಬೇಗ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಪ್ರಯತ್ನಿಸಲಾಗುತ್ತಿದೆ. ಗಾಯಾಳುಗಳನ್ನು ವಿಜಯನಗರದ ಸರ್ಕಾರಿ ಆಸ್ಪತ್ರೆ ಮತ್ತು ವಿಶಾಖಪಟ್ಟಣಂ ಕೆಜಿಎಚ್ಗೆ ರವಾನಿಸಲಾಗಿದೆ. ಮೊಬೈಲ್ ಫೋನ್ಗಳ ಬೆಳಕಿನಲ್ಲಿ ಪರಿಹಾರ ಕಾರ್ಯಗಳು ನಡೆಯುತ್ತಿವೆ.
ಸಹಾಯವಾಣಿ ಸಂಖ್ಯೆ.
08912746330
08912744619
8106053051
8106053052,
8500041670
8500041671
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications