ಲಾಕ್ ಡೌನ್; ಏ.15 ರಿಂದ ರೈಲು ಸೇವೆ ಆರಂಭವಾಗುವುದಿಲ್ಲ
ನವದೆಹಲಿ, ಏಪ್ರಿಲ್ 09 : ಕೊರೊನಾ ಹರಡದಂತೆ ತಡೆಯಲು ಘೋಷಣೆ ಮಾಡಿರುವ ಲಾಕ್ ಡೌನ್ ಏಪ್ರಿಲ್ 14ಕ್ಕೆ ಮುಕ್ತಾಯವಾಗಲಿದೆ. ಏಪ್ರಿಲ್ 15ರಿಂದಲೇ ರೈಲು ಸೇವೆ ಆರಂಭವಾಗಲಿದೆಯೇ? ಎಂಬ ಪ್ರಶ್ನೆ ಎದ್ದಿದೆ. ಆದರೆ, ಕೇಂದ್ರ ಸರ್ಕಾರದ ಮುಂದೆ ರೈಲು ಸೇವೆಯನ್ನು ತಕ್ಷಣ ಆರಂಭಿಸುವ ಪ್ರಸ್ತಾವನೆ ಇಲ್ಲ.
ಲಾಕ್ ಡೌನ್ ಮುಂದುವರೆಸುವ ಬಗ್ಗೆ ದೇಶಾದ್ಯಂತ ಚರ್ಚೆಗಳು ಆರಂಭವಾಗಿವೆ. ವಿವಿಧ ರಾಜ್ಯಗಳು ಲಾಕ್ ಡೌನ್ ಏಪ್ರಿಲ್ 30ರ ತನಕ ಮುಂದುವರೆಸಬೇಕು ಎಂಬ ಬೇಡಿಕೆ ಇಟ್ಟಿವೆ. ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 11ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಿದ್ದಾರೆ.
ಏಪ್ರಿಲ್ 12ರಂದು ಕೇಂದ್ರ ಸರ್ಕಾರ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಅಂತಿಮ ಆದೇಶ ಹೊರಡಿಸುವ ಸಾಧ್ಯತೆ ಇದೆ. ಏಪ್ರಿಲ್ 14ರಂದು ಲಾಕ್ ಡೌನ್ ಮುಗಿದರೂ ಏಪ್ರಿಲ್ 15ರಂದು ರೈಲು ಸೇವೆಗಳು ಆರಂಭವಾಗುವುದಿಲ್ಲ.

ವಿವಿಧ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. ಆದ್ದರಿಂದ, ರೈಲು ಸೇವೆ ಆರಂಭವಾದರೆ ಜನರ ಸಂಚಾರ ಆರಂಭವಾಗಿ ಕೊರೊನಾ ಹರಡಬಹುದು. ಅದರಲ್ಲೂ ಅಲ್ಲಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು ಒಂದೇ ಬಾರಿಗೆ ತವರಿನತ್ತ ಪ್ರಯಾಣಿಸಬಹುದು.
ಲಾಕ್ ಡೌನ್ ಪರಿಣಾಮ ರೈಲು ಸೇವೆ ಸಂಪೂರ್ಣವಾಗಿ ಸ್ಥಗಿತವಾಗಿದೆ. ಏಪ್ರಿಲ್ 14ರ ಬಳಿಕ ಲಾಕ್ ಡೌನ್ ವಿಸ್ತರಣೆಯಾಗದಿದ್ದರೂ ರೈಲು ಸೇವೆಯನ್ನು ಆರಂಭಿಸದಿರಲು ತೀರ್ಮಾನಿಸಲಾಗಿದೆ. ಕೇಂದ್ರ ಸರ್ಕಾರ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಕಾದು ನೋಡಬೇಕಿದೆ.
ಪ್ರಸ್ತುತ ಪ್ರಯಾಣಿಕ ರೈಲು ಸೇವೆ ಸಂಪೂರ್ಣ ಸ್ಥಗಿತಗೊಂಡಿದೆ. ಆದರೆ, ಅಗತ್ಯ ವಸ್ತುಗಳ ಸಾಗಾಟಕ್ಕಾಗಿ ಗೂಡ್ಸ್ ರೈಲುಗಳನ್ನು ಓಡಿಸಲಾಗುತ್ತಿದೆ.
-
Gold Price: ಸತತ 2ನೇ ದಿನವು ಬಂಗಾರದ ಬೆಲೆ ಭಾರೀ ಏರಿಕೆ, ದಾಖಲೆ ಬರೆದ ಬೆಳ್ಳಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
New Railway Line: 6000 ಕಿಮೀ ರೈಲ್ವೆ ಜಾಲ ವಿಸ್ತರಣೆ, 100 ಯೋಜನೆಗಳ ಜಾರಿಗೆ ₹1.53 ಲಕ್ಷ ಕೋಟಿ ಹೂಡಿಕೆ -
Gold Price Update: ಆಭರಣಪ್ರಿಯರೇ ಗಮನಿಸಿ, ಅಕ್ಷಯ ತೃತೀಯ ಮುನ್ನವೇ ಗಗನಕ್ಕೇರಿದ ಚಿನ್ನದ ದರ -
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ











Click it and Unblock the Notifications