ಮಣಿಪುರ ಹಿಂಸಾಚಾರ: ಸಂಸದೀಯ ಸಮಿತಿಯ 'ತುರ್ತು' ಸಭೆಗೆ ಒತ್ತಾಯಿಸಿದ ತೃಣಮೂಲ ಕಾಂಗ್ರೆಸ್
ಇಂಫಾಲ, ಜೂನ್. 16: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒಬ್ರಿಯಾನ್ ಗೃಹ ವ್ಯವಹಾರಗಳ ಸ್ಥಾಯಿ ಸಮಿತಿಯ ಅಧ್ಯಕ್ಷರಿಗೆ ಪತ್ರ ಬರೆದು ಮಣಿಪುರದಲ್ಲಿ ಹಿಂಸಾಚಾರದ ಪರಿಸ್ಥಿತಿಯ ಬಗ್ಗೆ ತುರ್ತಾಗಿ ಚರ್ಚೆಗೆ ಒತ್ತಾಯಿಸಿದ್ದಾರೆ. ಸಂಸದೀಯ ಸಮಿತಿಯ ಅಧ್ಯಕ್ಷರಿಗೆ ಎಐಟಿಸಿ ನಾಯಕ ಪತ್ರ ಬರೆದಿದ್ದಾರೆ.
ಸಂಸದೀಯ ಸಮಿತಿಯ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ, ಮಣಿಪುರದಲ್ಲಿ ಇತ್ತೀಚಿನ ಹಿಂಸಾಚಾರದ ಘಟನೆಗಳು ಈ ಪ್ರದೇಶದಲ್ಲಿ ವಾಸಿಸುವ ಜನರ ಸುರಕ್ಷತೆ ಮತ್ತು ಯೋಗಕ್ಷೇಮದ ಬಗ್ಗೆ ಕಳವಳ ವ್ಯಕ್ತಪಡಿಸಿವೆ. ವರದಿಯ ಪ್ರಕಾರ ಮಣಿಪುರ ಹೀಮಸಾಚಾರದಲ್ಲಿ ಅನೇಕರು ಸತ್ತಿದ್ದಾರೆ ಮತ್ತು ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ.

" ಒಮ್ಮೆ ನೋಡಿದರೂ ಗುಂಡಿಕ್ಕುವ ಆದೇಶಗಳು ರಾಜ್ಯದಲ್ಲಿ ಭಯದ ವಾತಾವರಣವನ್ನು ಮತ್ತಷ್ಟು ಹೆಚ್ಚಿಸಿವೆ. ಹೀಗಾಗಿ ನಾವು ಅಲ್ಲಿನ ವಾಸ್ತವತೆಯನ್ನು ಅರ್ಥಮಾಡಿಕೊಳ್ಳುವುದು ಮತ್ತು ಹಿಂಸಾಚಾರದ ವ್ಯಾಪ್ತಿಯನ್ನು ನಿರ್ಣಯಿಸುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ, ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಚರ್ಚಿಸಲು ಸ್ಥಾಯಿ ಸಮಿತಿ ಸಭೆ ನಡೆಸುವುದು ಅತ್ಯಗತ್ಯ" ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಿದೆ ಮತ್ತು ಎಟಿಎಂಗಳ ಮುಂದೆ ಉದ್ದನೆಯ ಸರತಿ ಸಾಲುಗಳು ನಿಂತಿವೆ. ಮಣಿಪುರ ರಾಜ್ಯವು ಮೇ 3 ರಿಂದ ಮೈತೇಯಿ ಮತ್ತು ಕುಕಿ ಎರಡು ಸಮುದಾಯಗಳ ನಡುವೆ ಜನಾಂಗೀಯ ಹಿಂಸಾತ್ಮಕ ಘರ್ಷಣೆಗೆ ಸಾಕ್ಷಿಯಾಗಿದೆ. ಮೈತೇಯಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ (ಎಸ್ಟಿ) ಸ್ಥಾನಮಾನವನ್ನು ಪರಿಗಣಿಸುವ ನ್ಯಾಯಾಲಯದ ಆದೇಶದ ವಿರುದ್ಧ ಪ್ರತಿಭಟನೆಯ ಸಂದರ್ಭದಲ್ಲಿ ಘರ್ಷಣೆಗಳು ಉಂಟಾಗಿವೆ.
ಬಹುಸಂಖ್ಯಾತ ಮೈತೇಯಿ ಸಮುದಾಯ ಮತ್ತು ಬುಡಕಟ್ಟು ಕುಕಿ ಸಮುದಾಯದ ನಡುವಿನ ಘರ್ಷಣೆಗಳು ಮೊದಲು ಮೇ 3 ರಂದು ಸ್ಫೋಟಗೊಂಡವು. ಅಂದಿನಿಂದ ಈವರೆಗೆ ರಾಜ್ಯದಲ್ಲಿ ಕನಿಷ್ಠ 115 ಜನರು ಕೊಲೆಯಾಗಿದ್ದಾರೆ. ಕನಿಷ್ಠ 300 ಜನರು ಗಾಯಗೊಂಡಿದ್ದಾರೆ ಮತ್ತು ಸುಮಾರು 40,000 ಜನರು ಸ್ಥಳಾಂತರಗೊಂಡಿದ್ದಾರೆ.
ಗುರುವಾರ ರಾತ್ರಿ ದುಷ್ಕರ್ಮಿಗಳ ಗುಂಪೊಂದು ಕೇಂದ್ರ ಸಚಿವ ಆರ್.ಕೆ.ರಂಜನ್ ಸಿಂಗ್ ಮನೆಗೆ ಬೆಂಕಿ ಹಚ್ಚಿದೆ. ಘಟನೆಯ ವೇಳೆ ಕೇಂದ್ರ ಸಚಿವ ಆರ್.ಕೆ.ರಂಜನ್ ಸಿಂಗ್ ಮನೆಯಲ್ಲಿ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂಫಾಲದಲ್ಲಿ ಕರ್ಫ್ಯೂ ಜಾರಿಯಲ್ಲಿದ್ದರೂ ಕೂಡ ಈ ಗುಂಪು ಸಚಿವರ ಮನೆ ತಲುಪುವಲ್ಲಿ ಯಶಸ್ವಿಯಾಗಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.












Click it and Unblock the Notifications