ತ್ರಿವಳಿ ತಲಾಖ್ ಮಸೂದೆ ಮಂಡನೆ : ಬಿಸಿ-ಬಿಸಿ ಚರ್ಚೆ
ನವದೆಹಲಿ, ಡಿಸೆಂಬರ್ 28 : ತ್ರಿವಳಿ ತಲಾಖ್ ನಿಷೇಧ ಮಸೂದೆಯನ್ನು ಗುರುವಾರ ಲೋಕಸಭೆಯಲ್ಲಿ ಮಂಡನೆ ಮಾಡಲಾಗಿದೆ. ಸಂಸತ್ತಿನಲ್ಲಿ ಮಸೂದೆ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.
ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಗುರುವಾರ ಲೋಕಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಮಂಡನೆ ಮಾಡಿದರು. 'ಮಹಿಳೆಯರು ಮತ್ತು ಅವರಿಗೆ ನ್ಯಾಯ ಒದಗಿಸಲು ಮಸೂದೆ ಸಹಾಯಕವಾಗಲಿದೆ' ಎಂದರು.

ಮುಸ್ಲಿಂ ಪುರುಷ ತನ್ನ ಪತ್ನಿಗೆ ತ್ರಿವಳಿ ತಲಾಖ್ ನೀಡುವುದನ್ನು ಅಪರಾಧ ಎಂದು ಪರಿಗಣಿಸುವ 'ಮುಸ್ಲಿಂ ಮಹಿಳೆಯರ ವೈವಾಹಿಕ ಹಕ್ಕುಗಳ ರಕ್ಷಣೆ ಮಸೂದೆ 2017' ಇದಾಗಿದೆ. ಈ ಬಗ್ಗೆ ದೇಶಾದ್ಯಂತ ಭಾರೀ ಚರ್ಚೆ ನಡೆಯುತ್ತಿದೆ.
ಮಸೂದೆ ಮಂಡನೆಯಾಗುತ್ತಿದ್ದಂತೆ ಸಂಸದ ಅಸಾದುದ್ದೀನ್ ಓವೈಸಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. 'ಮಸೂದೆ ಸಂಸತ್ತಿನಲ್ಲಿ ಅಂಗೀಕಾರವಾದರೆ ಮುಸ್ಲಿಂ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುತ್ತದೆ' ಎಂದರು.
This bill is flawed, there are many internal contradictions in the Bill :BJD MP Bhartruhari Mahtab in Lok Sabha #TripleTalaqBill pic.twitter.com/525aKIKrpD
— ANI (@ANI) December 28, 2017
ಮಸೂದೆ ಬಗ್ಗೆ ಮಾತನಾಡಿದ ರವಿಶಂಕರ್ ಪ್ರಸಾದ್, 'ಇಂದು ನಾವು ಇತಿಹಾಸ ನಿರ್ಮಾಣ ಮಾಡಿದ್ದೇವೆ. ಈ ಮಸೂದೆ ಮಹಿಳೆಯರ ಹಕ್ಕು ಮತ್ತು ನ್ಯಾಯಕ್ಕೆ ಸಂಬಂಧಿಸಿದ್ದು. ಇದು ಯಾವುದೇ ಮತ, ಪಂಥಕ್ಕೆ ಸಂಬಂಧಿಸಿದ್ದಲ್ಲ' ಎಂದು ಸ್ಪಷ್ಟಪಡಿಸಿದರು.
ತ್ರಿವಳಿ ತಲಾಖ್ ಮಸೂದೆಯನ್ನು ಬಿಜೆಪಿ ಪ್ರತಿಷ್ಠೆಯ ವಿಷಯವಾಗಿ ತೆಗೆದುಕೊಂಡಿದೆ. ಲೋಕಸಭೆಯಲ್ಲಿ ಇದನ್ನು ಅಂಗೀಕಾರ ಮಾಡಲು ಎಲ್ಲಾ ಸದಸ್ಯರಿಗೆ ಕಲಾಪದಲ್ಲಿ ಹಾಜರಿರಬೇಕು ಎಂದು ವಿಪ್ ಜಾರಿ ಮಾಡಲಾಗಿದೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications