ತ್ರಿವಳಿ ತಲಾಖ್ ನಲ್ಲಿ ರಾಜಕೀಯ ಬೇಡ- ಮುಸ್ಲಿಂ ಸಮುದಾಯಕ್ಕೆ ಮೋದಿ ಮನವಿ
"ವಿವಿಧತೆಯಲ್ಲಿ ಏಕತೆಯೇ ಭಾರತದ ವಿಶೇಷತೆ. ಮುಸ್ಲಿಂ ಸಮುದಾಯ ಯಾವುದೇ ಕಾರಣಕ್ಕೂ ತ್ರಿವಳಿ ತಲಾಖ್ ವಿಚಾರವನ್ನು ರಾಜಕೀಯಗೊಳಿಸಲು ಬಿಡಬಾರದು,” - ಪ್ರಧಾನಿ ನರೇಂದ್ರ ಮೋದಿ
ನವದೆಹಲಿ, ಮೇ 10: ತ್ರಿಪಲ್ ತಲಾಖ್ ವಿಷಯವನ್ನು ರಾಜಕೀಯಗೊಳಿಸಬೇಡಿ; ಹೀಗಂಥ ಮುಸ್ಲಿಂ ಸಮುದಾಯದ ಬಳಿ ಪ್ರಧಾನಿ ನರೇಂದ್ರ ಮೋದಿ ಕೇಳಿಕೊಂಡಿದ್ದಾರೆ. ಜಮಿಯತ್ ಉಲೇಮಾ ಇ ಹಿಂದ್ ನಾಯಕರ ಜತೆಗಿನ ಸಮಾಲೋಚನೆಯಲ್ಲಿ ಮೋದಿ ಈ ಅಭಿಪ್ರಾಯ ಹೊರಹಾಕಿದ್ದಾರೆ.
"ವಿವಿಧತೆಯಲ್ಲಿ ಏಕತೆಯೇ ಭಾರತದ ವಿಶೇಷತೆ. ಮುಸ್ಲಿಂ ಸಮುದಾಯ ಯಾವುದೇ ಕಾರಣಕ್ಕೂ ಈ ವಿಚಾರವನ್ನು ರಾಜಕೀಯಗೊಳಿಸಲು ಬಿಡಬಾರದು. ಈ ವಿಚಾರದ ಸುಧಾರಣೆಯಲ್ಲಿ ಮುಸ್ಲಿಂ ಸಮುದಾಯದ ನಿಯೋಗ ಜವಾಬ್ದಾರಿ ವಹಿಸಿಕೊಳ್ಳಬೇಕು," ಎಂದು ಪ್ರಧಾನಿ ಇದೇ ಸಂದರ್ಭದಲ್ಲಿ ಹೇಳಿದರು. ಇನ್ನು ನಿಯೋಗದ ಸದಸ್ಯರು ತ್ರಿವಳಿ ತಲಾಖ್ ವಿಚಾರದಲ್ಲಿ ಪ್ರಧಾನ ಮಂತ್ರಿಯವರ ನಿಲುವುಗಳನ್ನು ಮೆಚ್ಚಿಕೊಂಡಿದ್ದಾರೆ ಎಂದು ಪಿಎಂಒ ಕಚೇರಿ ಹೇಳಿದೆ.

ಇನ್ನು ಈ ಕುರಿತು ಹೇಳಿಕೆ ನೀಡಿರುವು ನಿಯೋಗವು, ಪ್ರಧಾನಿ ಮೇಲೆ ದೇಶದ ಜನ ಭರವಸೆ ಇಟ್ಟಿದ್ದಾರೆ. ಅವರು ಜನಪರ ನಿಲುವು ತೆಗೆದುಕೊಳ್ಳುತ್ತಾರೆ ಎಂದು ಭಾವಿಸಿದ್ದೇವೆ ಎಂದು ಹೇಳಿದೆ.
ಭೇಟಿ ವೇಳೆ ಪ್ರಧಾನಿ ನರೇಂದ್ರ ಮೋದಿ 'ನವ ಭಾರತ' ನಿರ್ಮಾಣದಲ್ಲಿ ಮುಸ್ಲಿಂ ಸಮುದಾಯ ಕೈಜೋಡಿಸಬೇಕು ಎಂದು ಕೋರಿಕೊಂಡರು.
ಇನ್ನು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ, ದೇಶದ ಭದ್ರತೆ ಹಾಗೂ ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ಸಂದರ್ಭದಲ್ಲೂ ಮುಸ್ಲಿಂ ಸಮುದಾಯ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು. ಈ ಸಂದರ್ಭದಲ್ಲಿ ಮುಸ್ಲಿಮರ ನಿಯೋಗ ದೇಶದ ವಿರುದ್ಧ ಯಾವುದೇ ಸಂಚು ನಡೆಸಲು ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿಯವರಿಗೆ ಭರವಸೆ ನೀಡಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications