ತಲಾಖ್ ಪದ್ಧತಿ ಅಸಾಂವಿಧಾನಿಕ : ಅಲಹಾಬಾದ್ ಕೋರ್ಟ್
ಬೆಂಗಳೂರು, ಡಿಸೆಂಬರ್ 08 : ಮೂರು ಬಾರಿ ತಲಾಖ್ ಅಂತ ಹೇಳಿ ಮುಸ್ಲಿಂ ಮಹಿಳೆಗೆ ವಿಚ್ಛೇದನ ನೀಡುವ ಸಂಪ್ರದಾಯ ಅಸಂವಿಧಾನಕವಾದದ್ದು ಎಂದು ಅಲಹಾಬಾದ್ ಹೈಕೋರ್ಟ್ ಗುರುವಾರ ಐತಿಹಾಸಿಕ ತೀರ್ಮಾನ ನೀಡಿದೆ.
ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ಇರುವ ತಲಾಖ್ ತಲಾಖ್ ತಲಾಖ್ ಪದ್ಧತಿ ಅಸಂವಿಧಾನಕ ಮಾತ್ರವಲ್ಲ, ಮುಸ್ಲಿಂ ಮಹಿಳೆಯರ ಹಕ್ಕುಗಳ ನಿಯಮಗಳನ್ನು ಕೂಡ ಉಲ್ಲಂಘಿಸುತ್ತದೆ ಎಂದು ನ್ಯಾಯಮೂರ್ತಿಗಳು ನುಡಿದಿದ್ದಾರೆ.

ಸಂವಿಧಾನಕ್ಕಿಂತ ಯಾವ ವೈಯಕ್ತಿಕ ಕಾನೂನು ಕೂಡ ಮೇಲಿನದಲ್ಲ. ಹೀಗಾಗಿ, ಮೂರು ಬಾರಿ ತಲಾಖ್ ನೀಡಿ ಮಹಿಳೆಗೆ ವಿಚ್ಛೇದನ ನೀಡುವ ಪದ್ಧತಿಗೆ ಇತಿಶ್ರೀ ಹಾಡಲೇಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಮೂರು ಬಾರಿ ತಲಾಖ್ ನೀಡುವ ಪದ್ಧತಿಯನ್ನು ಕಿತ್ತುಹಾಕಬೇಕು ಎಂದು ಹಲವಾರು ಮಹಿಳೆಯರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಅಸಹ್ಯಕರ ಪದ್ಧತಿಯಿಂದ ಲಿಂಗ ತಾರತಮ್ಯವಾಗುತ್ತಿದ್ದು, ಮುಸ್ಲಿಂ ಪುರುಷ ಹಾಗು ಮಹಿಳೆಯರ ನಡುವಿನ ಸಮಾನತೆಯ ವಿರುದ್ಧವಾಗಿದೆ ಎಂದು ಕೇಂದ್ರ ಸಹ ಕೋರ್ಟಿಗೆ ತಿಳಿಸಿದೆ.
ಆದರೆ, ಈ ತೀರ್ಪನ್ನು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವಿರೋಧಿಸಿದ್ದು, ಬಲವಂತದ ಮದುವೆಯಿಂದ ಮಹಿಳೆಯನ್ನು ನರಕಕ್ಕೆ ತಳ್ಳುವ ಬದಲು ತಲಾಖ್ ನೀಡುವುದೇ ಉತ್ತಮ ಎಂದು ಅಭಿಪ್ರಾಯ ಮಂಡಿಸಿದೆ. ಧಾರ್ಮಿಕವಾಗಿ ನೀಡಲಾಗಿರುವ ಹಕ್ಕುಗಳನ್ನು ಪ್ರಶ್ನಿಸುವ ಹಕ್ಕು ಕಾನೂನಿಗೆ ಇಲ್ಲ ಎಂದೂ ಹೇಳಿದೆ.
ಇಂಥ ತೀರ್ಪು ಎಂದೋ ಆಗಬೇಕಿತ್ತು. ಈಗಲಾದರೂ ಮುಸ್ಲಿಂ ಸಹೋದರಿಯರಿಗೆ ಹೆಚ್ಚಿನ ಹಕ್ಕು, ಹೆಚ್ಚು ಭದ್ರತೆ, ಅವರ ಜೀವಕ್ಕೆ ಹೆಚ್ಚು ಗೌರವ ದೊರೆತಂತಾಗುತ್ತದೆ ಎಂದು ಕೇಂದ್ರದ ಮಾಜಿ ಸಚಿವೆ, ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಸಂತಸ ವ್ಯಕ್ತಪಡಿಸಿದ್ದಾರೆ.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications