ತ್ರಿಪುರಾ ಪಾಲಿಕೆ ಚುನಾವಣೆ: ಬೂತ್ ಏಜೆಂಟ್ ಮೇಲೆ ಬಿಜೆಪಿ ದಾಳಿ, ಟಿಎಂಸಿ ಆರೋಪ
ಅಗರ್ತಲಾ, ನವೆಂಬರ್ 25: ಗುರುವಾರ ತ್ರಿಪುರಾ ಮುನ್ಸಿಪಲ್ ಚುನಾವಣೆಯ ಮತದಾನದ ನಡುವೆ, ಟಿಎಂಸಿ "ಬಿಜೆಪಿ ಗೂಂಡಾಗಳು" ತನ್ನ ಬೂತ್ ಏಜೆಂಟ್ ಮತ್ತು ಅಭ್ಯರ್ಥಿಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದೆ. ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಅವರ "ಗುಂಡಾ ರಾಜ್" ಅನ್ನು ಟಿಎಂಸಿ ಟೀಕಿಸಿದೆ.
ಅಗರ್ತಲಾ ಮುನ್ಸಿಪಲ್ ಕಾರ್ಪೊರೇಷನ್ (AMC) ಮತ್ತು ತ್ರಿಪುರಾದ ಇತರ ನಾಗರಿಕ ಸಂಸ್ಥೆಗಳ 200 ಕ್ಕೂ ಹೆಚ್ಚು ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆಯುತ್ತಿದೆ. 36 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದ ಹಿನ್ನೆಲೆಯಲ್ಲಿ 785 ಸ್ಪರ್ಧಿಗಳು ಕಣದಲ್ಲಿದ್ದಾರೆ. ಮತದಾನ ಪ್ರಾರಂಭವಾದ ತಕ್ಷಣ, ಟಿಎಂಸಿ ಇವಿಎಂ ಅಸಮರ್ಪಕ ಕಾರ್ಯ ಮತ್ತು ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿಯ ಸುಮಾರು 20 ವಿಷಯಗಳನ್ನು ಪ್ರಸ್ತಾಪಿಸಿದೆ. ಇವಿಎಂ ಅಸಮರ್ಪಕ ಕಾರ್ಯದ 20 ನಿದರ್ಶನಗಳಲ್ಲಿ ಇದುವರೆಗೆ ಎರಡನ್ನು ಮಾತ್ರ ಪರಿಹರಿಸಲಾಗಿದೆ ಎಂದು ಪಕ್ಷವು ಗುರುವಾರ ಬೆಳಿಗ್ಗೆ ರಾಜ್ಯ ಚುನಾವಣಾ ಆಯೋಗಕ್ಕೆ ಹೇಳಿಕೆಯಲ್ಲಿ ತಿಳಿಸಿದೆ.
ಜೊತೆಗೆ ಕೆಲವು "ಬಿಜೆಪಿ ಗೂಂಡಾಗಳು" ತನ್ನ ಕೆಲವು ಅಭ್ಯರ್ಥಿಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ. ಸರಣಿ ಟ್ವೀಟ್ಗಳಲ್ಲಿ ವಿರೂಪಗೊಂಡ ಮುಖವನ್ನು ಹೊಂದಿರುವ ವ್ಯಕ್ತಿಯನ್ನು ತೋರಿಸುವ ವಿಡಿಯೋವನ್ನು ಪಕ್ಷವು ಪೋಸ್ಟ್ ಮಾಡಿದೆ.

ಟ್ವಿಟ್ಟರ್ನಲ್ಲಿ ವೀಡಿಯೊವನ್ನು ಹಂಚಿಕೊಂಡಿರುವ ತ್ರಿಪುರಾ ಟಿಎಂಸಿ, "ವಾರ್ಡ್ ಸಂಖ್ಯೆ 51 ರ ನಮ್ಮ ಅಭ್ಯರ್ಥಿಯ ಮೇಲೆ ಕ್ರೂರವಾಗಿ ದಾಳಿ ಮಾಡಲಾಗಿದೆ. ಅವರ ಕಣ್ಣುಗಳು ಊದಿಕೊಂಡಿವೆ ಮತ್ತು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತ್ರಿಪುರ ಗೂಂಡಾಗಳು ಯಾರನ್ನೂ ಉಳಿಸುತ್ತಿಲ್ಲ. ಗೌರವಾನ್ವಿತ ಸುಪ್ರೀಂ ಕೋರ್ಟ್ ಮಾರ್ಗದರ್ಶನಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ" ಎಂದು ದೂರಲಾಗಿದೆ.
Our candidate from Ward Number 51 was BRUTALLY ATTACKED! His eyes are swollen and he is seriously injured!@BJP4Tripura goons are not sparing anyone! Complete disregard for the Hon'ble Supreme Court! pic.twitter.com/5WnsdXBOLy
— AITC Tripura (@AITC4Tripura) November 25, 2021
ಮತ್ತೊಂದು ಟ್ವೀಟ್ನಲ್ಲಿ, ತ್ರಿಪುರಾ ಟಿಎಂಸಿ, "ವಯಸ್ಸಾದವರಿಗೆ ಬಿಜೆಪಿ ಗೂಂಡಾಗಳು ತಮಗೆ ಮತ ಚಲಾಯಿಸುವಂತೆ ಒತ್ತಾಯಿಸಿ ಥಳಿಸುತ್ತಿದ್ದಾರೆ. ಮತ ಹಾಕಲು ಹೋದ ಕಾರಣ ಬಿಜೆಪಿ ಗೂಂಡಾಗಳು ಹೊಡೆದಿದ್ದರಿಂದ ಈ ಮಹಿಳೆಯ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಹೇಳಿದೆ.
The entire nation is witnessing the COMPLETE COLLAPSE OF LAW & ORDER in Tripura!
— All India Trinamool Congress (@AITCofficial) November 25, 2021
CM @BjpBiplab has FAILED to protect the state and @BJP4Tripura goons have launched merciless attacks on not only our candidates and our booth agents but also common people!
SHAME ON BJP. https://t.co/bM6pMriB5V
ಸಿಎಂ ಬಿಪ್ಲಬ್ ದೇಬ್ ಅವರ 'ಗುಂಡಾ ರಾಜ್' ಬಗ್ಗೆ ಮತ್ತು ತ್ರಿಪುರಾದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಕುಸಿದಿರುವುದನ್ನು ಇಡೀ ರಾಷ್ಟ್ರವೇ ನೋಡುತ್ತಿದೆ. ಸಿಎಂ ಬಿಪ್ಲಬ್ ದೇಬ್ ರಾಜ್ಯವನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಾರೆ. ತ್ರಿಪುರಾ BJP ಗೂಂಡಾಗಳು ನಮ್ಮ ಅಭ್ಯರ್ಥಿಗಳು ಮತ್ತು ನಮ್ಮ ಬೂತ್ ಏಜೆಂಟ್ಗಳು ಮಾತ್ರವಲ್ಲದೆ ಸಾಮಾನ್ಯ ಜನರ ಮೇಲೆ ದಯೆಯಿಲ್ಲದ ದಾಳಿ ನಡೆಸಿದ್ದಾರೆ. ಬಿಜೆಪಿಗೆ ನಾಚಿಕೆಯಾಗಬೇಕು. ಇದು ಪ್ರಜಾಪ್ರಭುತ್ವನಾ? ಅಥವಾ ಗುಂಡಾ ರಾಜ್? Bjp ದೇಶದ ಸರ್ವೋಚ್ಚ ನ್ಯಾಯಾಲಯವನ್ನು ಅಪಹಾಸ್ಯ ಮಾಡುತ್ತಿದೆ" ಎಂದು ಟಿಎಂಸಿ ಹೇಳಿದೆ.
ಜೊತೆಗೆ ಜನರ ಪರವಾಗಿ ಬಿಜೆಪಿ ಕಾರ್ಯಕರ್ತರು ಮತ ಹಾಕುತ್ತಿದ್ದಾರೆ. ಪ್ರಜಾಪ್ರಭುತ್ವದ ಹಕ್ಕುಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಸೋಲಿನ ಭಯದಿಂದ ಅವರ ಗೂಂಡಾಗಳು ಈಗ ಜನರ ಪರವಾಗಿ ಮತ ಹಾಕುತ್ತಿದ್ದಾರೆ. 30-40 ಜನರು ಮತಗಟ್ಟೆಗಳಿಗೆ ಬಂದಾಗ, ಅವರ ಮತಗಳು ಈಗಾಗಲೇ ಚಲಾವಣೆಯಾಗಿವೆ ಎಂದು ಹೇಳಿ ಅವರಿಗೂ ಬೆದರಿಕೆ ಹಾಕಲಾಗಿದೆ ಎಂದು ಟಿಎಂಸಿ ಆರೋಪಿಸಿದೆ.
"ಬಿಪ್ಲಬ್ ಅವರ ಗುಂಡಾಗಳು ಮತದಾರರನ್ನು ಮತಗಟ್ಟೆಗಳಿಂದ ದೂರ ಓಡಿಸಲಾಗುತ್ತಿದ್ದಾರೆ. ಅವರನ್ನು ಮನೆಯಲ್ಲಿಯೇ ಇರುವಂತೆ ಒತ್ತಾಯಿಸಲಾಗುತ್ತಿದೆ. ಜೊತೆಗೆ ಬಿಜೆಪಿ ಪರವಾಗಿ ಮಾತ್ರ ಮತ ಚಲಾಯಿಸುವಂತೆ ಒತ್ತಾಯಿಸಲಾಗುತ್ತಿದೆ. ಪ್ರಜಾಪ್ರಭುತ್ವವನ್ನು ಪದೇ ಪದೇ ಕತ್ತು ಹಿಸುಕಿದರೂ ರಾಜ್ಯ ಚುನಾವಣಾ ಆಯೋಗ ಮೌನವಾಗಿದೆ. ಇದು ಖಂಡನೀಯ" ಎಂದು ಪಕ್ಷ ಮತ್ತೊಂದು ಟ್ವೀಟ್ನಲ್ಲಿ ತಿಳಿಸಿದೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications