ನಾನು ಸಿಎಂ ಆಗಿರಬೇಕೋ ಬೇಡವೋ, ಜನರೇ ಹೇಳಲಿ: ಬಿಜೆಪಿ ಸರ್ಕಾರದಲ್ಲಿ ಮತ್ತೆ ಸಂಘರ್ಷ
ಅಗರ್ತಲಾ, ಡಿಸೆಂಬರ್ 9: ಎರಡು ತಿಂಗಳ ಹಿಂದೆ ತ್ರಿಪುರಾ ಬಿಜೆಪಿಯಲ್ಲಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ವಿರುದ್ಧ ಉಂಟಾಗಿರುವ ಅಸಮಾಧಾನ ಮತ್ತೆ ಸ್ಫೋಟಗೊಂಡಿದ್ದು, ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅಳಿವು ಉಳಿವಿನ ಬಗ್ಗೆ ಹಲವು ಪ್ರಶ್ನೆಗಳು ಉದ್ಭವವಾಗಿವೆ.
ತಾವು ಅಧಿಕಾರದಲ್ಲಿ ಇರಬೇಕೇ ಅಥವಾ ಬೇಡವೇ ಎಂಬುದನ್ನು ಜನರೇ ತೀರ್ಮಾನಿಸಲಿ ಎಂದು ಬಿಪ್ಲಬ್ ಕುಮಾರ್ ಹೇಳಿದ್ದಾರೆ. ಪಕ್ಷದಲ್ಲಿನ ಬಂಡಾಯವನ್ನು ಸರಿಪಡಿಸಲು ಹೈಕಮಾಂಡ್ ಸಾಹಸಪಡುತ್ತಿದೆ. ಪಕ್ಷದೊಳಗಿನ ಭಿನ್ನಾಭಿಪ್ರಾಯಗಳನ್ನು ಸರಿಪಡಿಸುವುದನ್ನು ಪಕ್ಷದ ನಾಯಕರಿಗೆ ಬಿಟ್ಟುಬಿಡಿ. ನೀವು ಜನರ ಸೇವೆಯನ್ನು ಮುಂದುವರಿಸಿ ಎಂದು ಬಿಜೆಪಿಯ ತ್ರಿಪುರಾ ಉಸ್ತುವಾರಿ ವಿನೋದ್ ಸೋಂಕರ್ ಹೇಳಿದ್ದಾರೆ.
ಮಂಗಳವಾರ ಮಾಧ್ಯಮದ ಮುಂದೆ ಮಾತನಾಡಿದ್ದ ಬಿಪ್ಲಬ್ ಕುಮಾರ್ ದೇಬ್, ತಾವು ಡಿಸೆಂಬರ್ 13ರಂದು ಅಗರ್ತಲಾದ ವಿವೇಕಾನಂದ ಮೈದಾನಕ್ಕೆ ಹೋಗಲಿದ್ದು, ತಾವು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂದು ಅಲ್ಲಿ ನೆರೆಯುವ ತ್ರಿಪುರಾದ ಜನತೆಯನ್ನು ಕೇಳುವುದಾಗಿ ತಿಳಿಸಿದ್ದಾರೆ. 'ಒಂದು ವೇಳೆ ಜನರು ನನಗೆ ಬೆಂಬಲ ನೀಡದೆ ಹೋದರೆ ನಾನು ಪಕ್ಷದ ಹೈಕಮಾಂಡ್ಗೆ ಮಾಹಿತಿ ನೀಡುತ್ತೇನೆ' ಎಂದು ಹೇಳಿದ್ದಾರೆ.

ತ್ರಿಪುರಾದ ಬಿಜೆಪಿ ಉಸ್ತುವಾರಿಯಾಗಿ ಹೊಸದಾಗಿ ಆಯ್ಕೆಯಾಗಿರುವ ಸೋಂಕರ್ ಅವರು ಇತ್ತೀಚೆಗಷ್ಟೇ ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರ ಗುಂಪೊಂದು ಮುಖ್ಯಮಂತ್ರಿ ಬಿಪ್ಲಬ್ ದೇಬ್ ಅವರನ್ನು ಕಿತ್ತುಹಾಕುವಂತೆ ಒತ್ತಾಯಿಸಿ 'ಬಿಪ್ಲಬ್ ಹಠಾವೋ, ಬಿಜೆಪಿ ಬಚಾವೊ' ಎಂಬ ಘೋಷಣೆ ಕೂಗಿದ್ದರು ಎನ್ನಲಾಗಿದೆ.
ಸಾರ್ವಜನಿಕರನ್ನು ಭೇಟಿ ಮಾಡಿ ಅವರ ನಿರ್ಧಾರ ಕೇಳುವುದಾಗಿ ನೀಡಿರುವ ಹೇಳಿಕೆ ಕುರಿತು ಬಿಪ್ಲಬ್ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಇಬ್ಬರೊಂದಿಗೂ ಮಾತನಾಡಿದ್ದೇನೆ. ಮುಖ್ಯಮಂತ್ರಿಗಳು ತ್ರಿಪುರಾ ಜನತೆಯ ಸೇವೆಯನ್ನು ಮುಂದುವರಿಸಬೇಕು. ಪಕ್ಷದೊಳಗೆ ಏನೇ ಸಮಸ್ಯೆ ಇದ್ದರೂ ಅದನ್ನು ಪಕ್ಷ ನೋಡಿಕೊಳ್ಳಲಿದೆ ಎಂದು ಸೋಂಕರ್ ಹೇಳಿದ್ದಾರೆ.
ಬಿಪ್ಲಬ್ ವಿರುದ್ಧ ಸಿಡಿದೆದ್ದಿದ್ದ ಬಿಜೆಪಿಯ ಶಾಸಕರ ತಂಡವೊಂದು ಅಕ್ಟೋಬರ್ 13ರಂದು ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಕುರಿತು ಅನೇಕ ಆರೋಪಗಳನ್ನು ಮಾಡಿತ್ತು. ಕಳಪೆ ನಾಯಕತ್ವ ಮತ್ತು ಅಧಿಕಾರ ದುರುಪಯೋಗ ಮಾಡುತ್ತಿದ್ದಾರೆ ಎಂದು ಶಾಸಕರು ದೂರಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications