Tripura Election Results 2023: ಇಂದು ತ್ರಿಪುರಾ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟ
ಅಗರ್ತಲ, ಮಾರ್ಚ್ 02: ಬಿಗಿ ಭದ್ರತೆಯ ನಡುವೆ 60 ಸದಸ್ಯ ಬಲದ ತ್ರಿಪುರಾ ವಿಧಾನಸಭೆಯ ಮತ ಎಣಿಕೆ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ರಾಜ್ಯದಲ್ಲಿ ಫೆಬ್ರವರಿ 16 ರಂದು ಮತದಾನ ನಡೆದಿತ್ತು. ಅಧಿಕಾರಿಯ ಪ್ರಕಾರ ಮತಗಳ ಎಣಿಕೆಯು ರಾಜ್ಯದಾದ್ಯಂತ 21 ಸ್ಥಳಗಳಲ್ಲಿ ನಡೆಯಲಿದ್ದು, ಸಂಜೆಯ ವೇಳೆಗೆ ಫಲಿತಾಂಶ ಹೊರ ಬೀಳಲಿದೆ.
ಬಿಜೆಪಿ ಆಡಳಿತವಿರುವ ತ್ರಿಪುರ ರಾಜ್ಯದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ರಾಜ್ಯ ಪೊಲೀಸರು ನೋಡಿಕೊಳ್ಳುತ್ತಿದ್ದು, ಮತ ಎಣಿಕೆ ದಿನದ ಮೊದಲು ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡಲು ಪರಿಶೀಲಿಸುತ್ತಿದ್ದಾರೆ. ತ್ರಿಪುರಾ ಜೊತೆಗೆ ಗುರುವಾರ (ಮಾರ್ಚ್ 02) ಮೇಘಾಲಯ ಮತ್ತು ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಗಳ ಫಲಿತಾಂಶ ಕೂಡ ಪ್ರಕಟವಾಗಲಿದೆ.

*ತ್ರಿಪುರಾ ಚುನಾವಣೆ 2023: ಫಲಿತಾಂಶಗಳನ್ನು ಪರಿಶೀಲಿಸುವುದು ಹೇಗೆ?*
* ತ್ರಿಪುರಾ ಚುನಾವಣಾ ಫಲಿತಾಂಶವನ್ನು https://kannada.oneindia.com/ ವೆಬ್ಸೈಟ್ ಮತ್ತು ಮೊಬೈಲ್ ಫೋನ್ ಅಪ್ಲಿಕೇಶನ್ ನಲ್ಲಿ ಪಡೆಯಬಹದು.
* ಭಾರತೀಯ ಚುನಾವಣಾ ಆಯೋಗವು (ಇಸಿಐ) ತನ್ನ ವೆಬ್ಸೈಟ್ನಲ್ಲಿ ಬೆಳಗ್ಗೆ 8 ರಿಂದ ಅಪ್ಡೇಟ್ಗಳನ್ನು ನೀಡುತ್ತದೆ. https://results.eci.gov.in/ ಮತ್ತು ಮೊಬೈಲ್ ಫೋನ್ ಅಪ್ಲಿಕೇಶನ್ಗಳಲ್ಲಿ ಎಇಸಲ್ಟ್ ನೋಡಬಹುದು.
* ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಆಪ್ ಸ್ಟೋರ್ನಿಂದ ಡೌನ್ಲೋಡ್ ಮಾಡಬಹುದಾದ ಮತದಾರರ ಸಹಾಯವಾಣಿ ಅಪ್ಲಿಕೇಶನ್ನಲ್ಲಿ ಫಲಿತಾಂಶಗಳನ್ನು ಟ್ರ್ಯಾಕ್ ಮಾಡಬಹುದು

*ಎಕ್ಸಿಟ್ ಪೋಲ್ಗಳು ಏನು ಹೇಳಿವೆ..?*
ಮೂರು ಚುನಾವಣಾ ಸಮೀಕ್ಷೆಗಳ ಪ್ರಕಾರ, ಬಿಜೆಪಿ ಮತ್ತು ಅದರ ಮಿತ್ರ ಪಕ್ಷವಾದ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ (ಐಪಿಎಫ್ಟಿ)ಬಹುಮತದ ಸಂಖೆಗೆ ಬಹಳ ಹತ್ತಿರದಲ್ಲಿದೆ ಅಥವಾ ಬಹುಮತಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ತನ್ನದಾಗಿಸಿಕೊಳ್ಳುತ್ತದೆ ಎಂದಿದೆ. ಟೈಮ್ಸ್ನೌ - ಇಟಿಜಿ ಸರವೆ ಬಿಜೆಪಿಯು ಏಕೈಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮುವ ಸಾಧ್ಯತೆಯಿದೆ ಎಂದು ಹೇಳಿದೆ.
ಎಲ್ಲಾ ಎಕ್ಸಿಟ್ ಪೋಲ್ಗಳ ಪ್ರಕಾರ ಟ್ರಿಪಾ ಮೋಥಾ ಬುಡಕಟ್ಟು ಪ್ರಾಬಲ್ಯವಿರುವ ಜಿಲ್ಲೆಗಳಲ್ಲಿ ಪ್ರಭಾವಶಾಲಿ ಮತ್ತು ದೊಡ್ಡ ಪ್ರಮಾಣದ ಸ್ಥಾನಗಳನ್ನು ಕಸಿದುಕೊಳ್ಳುವ ಸಾಧ್ಯತೆಯಿದೆ. ಈ ಸಮೀಕ್ಷೆಗಳನ್ನು ನೋಡಿದರೆ, 2018 ರಲ್ಲಿ 25 ವರ್ಷಗಳ ಎಡಪಂಥೀಯ ಆಡಳಿತವನ್ನು ಬೇರು ಸಮೇತ ಕಿತ್ತು ಹಾಕಿದ್ದ ಬಿಜೆಪಿಗೆ ಇದು ಸತತ ಎರಡನೇ ವಿಜಯವಾಗಲಿದೆ.
-
Samarth Shamanur: ದಾವಣಗೆರೆ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಫೈಟ್ ಅಂತ್ಯ: ಶಾಮನೂರು ಕುಟುಂಬದ ಕುಡಿ ಸಮರ್ಥ್ ಕಣಕ್ಕೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications