ಭಾನುವಾರ ತ್ರಿಪುರಾ ವಿಧಾನಭೆಗೆ ಚುನಾವಣೆ, ಬಿಜೆಪಿ-ಎಡಪಕ್ಷದ ನಡುವೆ ಫೈಟ್
ಅಗರ್ತಲಾ, ಫೆಬ್ರವರಿ 17: 25 ವರ್ಷಗಳಿಂದ ಎಡಪಕ್ಷಗಳ ಆಳ್ವಿಕೆಯಲ್ಲಿರುವ ತ್ರಿಪುರಾದಲ್ಲಿ ನಾಳೆ ಅಂದರೆ ಫೆಬ್ರವರಿ 18ರಂದು ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದೆ.
ಇಲ್ಲಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ನೇತೃತ್ವದ ಎಡಪಕ್ಷಗಳಿಗೆ ಭಾರತೀಯ ಜನತಾ ಪಕ್ಷ ಸವಾಲು ಒಡ್ಡಿದೆ. 60ರಲ್ಲಿ 59 ಕ್ಷೇತ್ರಗಳಿಗೆ ಭಾನುವಾರ ಮತದಾನ ನಡೆಯಲಿದೆ. ಚಾರಿಲಿಮ್ ಕ್ಷೇತ್ರದ ಸಿಪಿಐಎಂ ಅಬ್ಯರ್ಥಿ ಸಾವಿಗೀಡಾಗಿದ್ದರಿಂದ ಇಲ್ಲಿ ಮಾತ್ರ ಮಾರ್ಚ್ 12ರಂದು ಮತದಾನ ನಡೆಯಲಿದೆ.
ಇಲ್ಲಿ 20 ಕ್ಷೇತ್ರಗಳು ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾಗಿದೆ. ಈ ಬಾರಿ ತ್ರಿಪುರಾದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅರುಣ್ ಜೇಟ್ಲಿ, ನಿತಿನ್ ಗಡ್ಕರಿ, ಸ್ಮೃತಿ ಇರಾನಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಬಿಜೆಪಿ ಪಾಳಯದ ನಾಯಕರು ಬಿರುಸಿನ ಪ್ರಚಾರ ನಡೆಸಿದ್ದಾರೆ.

ಎಡಪಕ್ಷಗಳ ಪರವಾಗಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಬರೋಬ್ಬರಿ 50 ಸಮಾವೇಶಗಳಲ್ಲಿ ಭಾಗವಹಿಸಿದ್ದರೆ, ಇವರಿಗೆ ಸೀತಾರಾಮ್ ಯೆಚೂರಿ ಮತ್ತು ಬೃಂದಾ ಕಾರಟ್ ಉತ್ತಮ ಬೆಂಬಲ ನೀಡಿದ್ದಾರೆ. ಇನ್ನು ಕಾಂಗ್ರೆಸ್ ನಿಂದ ರಾಹುಲ್ ಗಾಂಧಿ ಕೂಡ ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ.
ಸಿಪಿಐಎಂ 57 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದೆ. ಮಿತ್ರ ಪಕ್ಷಗಳು ಮೂರು ಕ್ಷೇತ್ರಗಳಲ್ಲಿ ಕಣಕ್ಕಿಳಿದಿವೆ. ಬಿಜೆಪಿ 51 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದರೆ, ಅದರ ಮಿತ್ರ ಪಕ್ಷ ಐಪಿಎಫ್ ಟಿ 9 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದೆ. ಇನ್ನು ಕಾಂಗ್ರೆಸ್ 59 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದು ಒಂದು ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ನಿಲ್ಲಿಸಿಲ್ಲ. ಒಟ್ಟು 60 ಕ್ಷೇತ್ರಗಳಿಗೆ 307 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ತ್ರಿಪುರಾದಲ್ಲಿ ಒಟ್ಟು 25,73,413 ಜನರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. ಇದರಲ್ಲಿ 13,05,375 ಪುರುಷರು ಮತ್ತು 12,68,027 ಮಹಿಳೆಯರಾಗಿದ್ದಾರೆ. 11 ಜನ ತೃತೀಯ ಲಿಂಗಿಗಳೂ ಮತದಾನದ ಹಕ್ಕು ಹೊಂದಿದ್ದಾರೆ.
ಬೆಳಿಗ್ಗೆ 7 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. 3,214 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು ಇವುಗಳಲ್ಲಿ 47 ಮತಗಟ್ಟೆಗಳನ್ನು ಮಹಿಳೆಯರೇ ನಿರ್ವಹಿಸಲಿದ್ದಾರೆ.
ಮತದಾನದ ಹಿನ್ನಲೆಯಲ್ಲಿ ಎಲ್ಲಾ ಅಗತ್ಯ ಏರ್ಪಾಟುಗಳನ್ನು ಮಾಡಿಕೊಳ್ಳಲಾಗಿದೆ. ರಾಜ್ಯದಾದ್ಯಂತ ಯಾವುದೇ ಅಹಿತಕರ ಘಟನೆಗಳ ನಡೆಯದಂತೆ ಬಿಗಿ ಭದ್ರತೆ ವಹಿಸಲಾಗಿದೆ. ಇದೇ ಮಾರ್ಚ್ 3ರಂದು ಇಲ್ಲಿ ಮತ ಎಣಿಕೆ ನಡೆಯಲಿದೆ.
2013ರ ಫಲಿತಾಂಶ
2013ರಲ್ಲಿ ಇಲ್ಲಿ ವಿಧಾನಸಭೆ ಚುನಾವಣೆ ನಡೆದಾಗ ಸಿಪಿಐಎಂ 49 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಸಿಪಿಐ 1 ಮತ್ತು ಕಾಂಗ್ರೆಸ್ 10 ಕ್ಷೇತ್ರಗಳನ್ನು ತನ್ನ ವಶಕ್ಕೆ ಪಡೆದುಕೊಂಡಿತ್ತು.
2013ರಲ್ಲಿ ತ್ರಿಪುರಾದಲ್ಲಿ ಬಿಜೆಪಿ ಖಾತೆ ತೆರೆಯುವಲ್ಲಿ ವಿಫಲವಾಗಿತ್ತು. ಮಾತ್ರವಲ್ಲ 60ರಲ್ಲಿ 50 ಕ್ಷೇತ್ರಗಳಲ್ಲಿ ಠೇವಣಿಯನ್ನೇ ಕಳೆದುಕೊಂಡು ಮುಖಭಂಗ ಅನುಭವಿಸಿತ್ತು. ಈ ಚುನಾವಣೆಯಲ್ಲಿ ಬಿಜೆಪಿ ಪಡೆದ ಮತಗಳು ಕೇವಲ ಶೇಕಡಾ 1.5. ಹೀಗಿರುವ ಬಿಜೆಪಿ ಈ ಬಾರಿ ನಾವೇ ಅಧಿಕಾರಕ್ಕೇರುತ್ತೇವೆ ಎಂದು ಹೇಳುತ್ತಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications