Assembly Election Results 2023 Live : ತ್ರಿಪುರಾ, ನಾಗಾಲ್ಯಂಡ್ನಲ್ಲಿ ಬಿಜೆಪಿಗೆ ಮುನ್ನಡೆ, ಮೇಘಾಲಯದಲ್ಲಿ ಹಿನ್ನಡೆ
ಮಾರ್ಚ್ 2, 2023 ರಂದು ತ್ರಿಪುರ, ನಾಗಾಲ್ಯಾಂಡ್, ಮೇಘಾಲಯ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತಗಳ ಎಣಿಕೆ ನಡೆಯಲಿದೆ.
ತ್ರಿಪುರ, ನಾಗಾಲ್ಯಾಂಡ್, ಮೇಘಾಲಯ ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಮಾರ್ಚ್ 2, 2023 ರಂದು ಘೋಷಣೆ ಮಾಡಲಾಗುತ್ತದೆ. ತ್ರಿಪುರಾದಲ್ಲಿ ಫೆಬ್ರವರಿ 16 ರಂದು ಮತದಾನ ನಡೆದಿದ್ದರೆ, ಮೇಘಾಲಯ ಮತ್ತು ನಾಗಾಲ್ಯಾಂಡ್ ರಾಜ್ಯಗಳಲ್ಲಿ ಫೆಬ್ರವರಿ 27ರಂದು ಮತದಾನ ಪೂರ್ಣಗೊಂಡಿದೆ.
ಮೂರು ರಾಜ್ಯಗಳಲ್ಲಿ ಮತಗಳ ಎಣಿಕೆ ಮಾರ್ಚ್ 2 ರಂದು ಬೆಳಿಗ್ಗೆ 8 ರಿಂದ ಪ್ರಾರಂಭವಾಗಲಿದೆ. ಈ ಮೂರೂ ರಾಜ್ಯಗಳು ತಲಾ 60 ಸದಸ್ಯರ ಬಲವನ್ನು ಹೊಂದಿದ್ದು, ಒಂದೇ ಹಂತದಲ್ಲಿ ಮತದಾನ ನಡೆದಿದೆ. ವಿಧಾನಸಭೆಯಲ್ಲಿ ಸರ್ಕಾರ ರಚಿಸಲು ಪಕ್ಷಗಳು ಚುನಾವಣೆಯಲ್ಲಿ 31 ಸ್ಥಾನಗಳನ್ನು ಪಡೆಯಬೇಕು.
2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ತ್ರಿಪುರಾ ರಾಜ್ಯವನ್ನು ಗೆದ್ದುಕೊಂಡಿತ್ತು. ಹೀಗಾಗಿ ಈ ರಾಜ್ಯದ ಮೇಲೆ ಬಿಜೆಪಿ ವಿಶೇಷ ಗಮನ ಹರಿಸಿದೆ. ಅದರಂತೆ ಮೇಘಾಲಯದಲ್ಲಿ ಬಿಜೆಪಿಯು ಸರ್ಕಾರದ ಭಾಗವಾಗಿದೆ, ಅಲ್ಲಿ ಈಶಾನ್ಯದಿಂದ ರಾಷ್ಟ್ರೀಯ ಸ್ಥಾನಮವನ್ನು ಹೊಂದಿರುವ ಏಕೈಕ ರಾಜಕೀಯ ಪಕ್ವವಾದ ನ್ಯಾಯನಲ್ ಪೀಪಲ್ಸ್ ಪಾರ್ಟಿ(ಎನ್ಪಿಪಿ) ನೃತೃತ್ವದ ಸರ್ಕಾರ ಅಸ್ತಿತ್ವದಲ್ಲಿದೆ.
ಇನ್ನೂ ನಾಗಾಲ್ಯಾಂಡ್ನಲ್ಲಿ, ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪೋಗ್ರೆಸಿವ್ ಪಾರ್ಟಿ ಅಧಿಕಾರದಲ್ಲಿದ್ದು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಅಂದರೆ ಮೂರೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಮತ್ತು ಸರ್ಕಾರ ನಡೆಸುತ್ತಿರುವ ಮೈತ್ರಿಕೂಟದ ಭಾಗವಾಗಿರುವುದು ವಿಶೇಷ. ಹೀಗಾಗಿ ಈ ಬಾರಿ ಮೂರು ರಾಜ್ಯಗಳ ಫಲಿತಾಂಶ ಭಾರೀ ಕುತೂಹಲವನ್ನು ಹುಟ್ಟುಹಾಕಿದೆ.

ನದೆಹಲಿಯಲ್ಲಿನ ಬಿಜೆಪಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, "ಕೆಲವರು ಮೋದಿಗೆ ಸಮಾಧಿ ತೋಡಲು ಹಾತೊರೆಯುತ್ತಿದ್ದಾರೆ. ಆದರೆ ಅವಕಾಶ ಸಿಕ್ಕಲ್ಲೆಲ್ಲಾ ಕಮಲ ಅರಳುತ್ತಲೇ ಇದೆ. ಮುಂದೆಯೂ ಕೂಡ ಎಂದು ವಿಪಕ್ಷಗಳ ವಿರುದ್ಧ ಅವರು ವಾಗ್ದಾಳಿ ನಡೆಸಿದರು. ಮೂರು ರಾಜ್ಯಗಳ ಇಂದಿನ ಚುನಾವಣಾ ಫಲಿತಾಂಶ ಈಶಾನ್ಯ ಭಾಗದ ಬಗ್ಗೆ ಕಾಂಗ್ರೆಸ್ನ ಚಿಂತನೆಯನ್ನು ಬಹಿರಂಗಪಡಿಸಿವೆ. ಇವು ಸಣ್ಣ ರಾಜ್ಯಗಳು ಮತ್ತು ಅತ್ಯಲ್ಪ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಇದು ಜನಾದೇಶಕ್ಕೆ ಮತ್ತು ಈಶಾನ್ಯ ರಾಜ್ಯಗಳ ಜನರಿಗೆ ಮಾಡಿದ ಅವಮಾನ ಎಂದು ಮೋದಿ ತಿವಿದರು.
2014ಕ್ಕೂ ಮೊದಲು ಈಶಾನ್ಯ ರಾಜ್ಯಗಳು ದಿಗ್ಬಂಧನಗಳು, ದಂಗೆ, ಭಯೋತ್ಪಾದನೆ ಮತ್ತು ಗುರಿ ಹತ್ಯೆಗಳಿಗೆ ಹೆಸರುವಾಸಿಯಾಗಿದ್ದವು. ಆದರೆ, ಈಶಾನ್ಯ ಭಾಗದ ಭವಿಷ್ಯ ಮತ್ತು ಚಿತ್ರಣ ಈಗ ಬದಲಾಗಿದೆ. ಇಂದು ಈಶಾನ್ಯವು ಶಾಂತಿ ಮತ್ತು ಸ್ಥಿರತೆಗೆ ಹೆಸರುವಾಸಿಯಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.
ತ್ರಿಪುರಾ ಹಾಗೂ ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಪಕ್ಷಕ್ಕೆ ಜಯ ಲಭಿಸಿದೆ. ಮಿತ್ರ ಪಕ್ಷಗಳ ಜೊತೆಗೆ ಕೂಡಿಕೊಂಡು ಸ್ಪರ್ಧಿಸಿದ್ದ ಕಣದಲ್ಲಿ ವಿಜಯ ಪತಾಕೆ ಹಾರಿದೆ. ಈ ಸಂಬಂಧ ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲು ನವದೆಹಲಿ ಬಿಜೆಪಿ ಕೇಂದ್ರ ಕಚೇರಿಗೆ ಆಗಮಿಸಿದ್ದಾರೆ. ಅವರೊಂದಿಗೆ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಉಪಸ್ಥಿತರಿದ್ದಾರೆ.
पूर्वोत्तर में फिर खिला कमल ...🙏
— Piyush Goyal (@PiyushGoyal) March 2, 2023
Under the leadership of PM @NarendraModi Ji, people of Tripura & Nagaland have again reposed their faith in NDA Govt.
The hard work of @JPNadda ji & all BJP Karyakartas is instrumental in this historic win, ushering a new dawn of prosperity. pic.twitter.com/WYoNtdkK2N
ಚುನಾವಣಾ ಫಲಿತಾಂಶ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಪ್ರತಿ ಚುನಾವಣೆಯಲ್ಲೂ ಡಬಲ್ ಇಂಜಿನ್ ಸರ್ಕಾರಕ್ಕೆ ಸಾರ್ವಜನಿಕರ ಆಶೀರ್ವಾದ ಸಿಕ್ಕಿರುವುದನ್ನು ನೋಡಿದ್ದೇವೆ. 60 ಸ್ಥಾನಗಳುಳ್ಳ ತ್ರಿಪುರಾದಲ್ಲಿ ಬಿಜೆಪಿ-ಐಪಿಎಫ್ಟಿ ಮೈತ್ರಿಕೂಟ 33 ಸ್ಥಾನ ಗೆದ್ದು ಅಧಿಕಾರಕ್ಕೆ ಮರಳಿದೆ. ನಾಗಾಲ್ಯಾಂಡ್ನಲ್ಲಿ ಬಿಜೆಪಿ ಮತ್ತು ಅದರ ಪಾಲುದಾರ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್ಡಿಪಿಪಿ) ಬಹುಮತದ ಗಡಿ ದಾಟಿದೆ ಎಂದು ತಿಳಿಸಿದ್ದಾರೆ.
60 ವರ್ಷಗಳ ನಂತರ ನಾಗಾಲ್ಯಾಂಡ್ ನಲ್ಲಿ ಪ್ರಸಕ್ತ ಚುನಾವಣೆಯಲ್ಲಿ ಇಬ್ಬರು ಮಹಿಳಾ ಅಭ್ಯರ್ಥಿಗಳು ಚುನಾಯಿತರಾಗಿ ಇತಿಹಾಸ ಸೃಷ್ಟಿಸಿದ್ದಾರೆ. ಆಡಳಿತಾರೂಢ ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್ಡಿಪಿಪಿ)ಗೆ ಸೇರಿದ ಸಲ್ಹೌಟುವೊನುವೊ ಕ್ರೂಸ್ ಮತ್ತು ಹೆಕಾನಿ ಜಖಾಲು ತಾವು ಸ್ಪಧಿಸಿದ್ಧ ಕ್ಷೇತ್ರದಲ್ಲಿ ವಿಜಯ ಸಾಧಿಸಿದ್ದಾರೆ.
Fact that BJP has won Tripura, Nagaland & performed well in Meghalaya is growing indication of peoples' confidence in PM Sri @narendramodi Ji's leadership.
— Tejasvi Surya (@Tejasvi_Surya) March 2, 2023
Traditionally non-existent, @BJP4India's expansion in NE region is consequence of grassroot level transformation of people.
ತ್ರಿಪುರಾದಲ್ಲಿ ಬಿಜೆಪಿಗೆ ಪೂರ್ಣ ಬಹುಮತ ಸಿಕ್ಕು 32 ಸ್ಥಾನ ಗಳಿಸಿ ವಿಜಯ ಸಾಧಿಸಿದೆ. ಈ ಸಂಬಂಧ ಕರ್ನಾಟಕದ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿ ಅಭಿನಂದಿಸಿದ್ದಾರೆ. ಬಿಜೆಪಿ ತ್ರಿಪುರಾ, ನಾಗಾಲ್ಯಾಂಡ್ ಗೆದ್ದಿದೆ. ಮೇಘಾಲಯದಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಈ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಬಿಜೆಪಿ ಮೇಲಿನ ಜನರ ವಿಶ್ವಾಸ ಹೆಚ್ಚಾಗಿರುವುದನ್ನು ತಿಳಿಸುತ್ತದೆ ಎಂದು ಅವರು ಹೇಳಿದ್ದಾರೆ.
Adaraniya Sri @JPNadda ji , the national president of the @BJP4India has advised the state unit of BJP, Meghalaya to support the National people’s Party in forming the next government in Meghalaya. @SangmaConrad
— Himanta Biswa Sarma (@himantabiswa) March 2, 2023
ಮೇಘಾಲಯದಲ್ಲಿ ಬಿಜೆಪಿ ಪಕ್ಷವು ಎನ್ಪಿಪಿಯನ್ನು ಬೆಂಬಲಿಸಲಿದೆ ಎಂಬ ಸುಳಿವನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನೀಡಿದ್ದಾರೆ. ಮೇಘಾಲಯದಲ್ಲಿ ಮುಂದಿನ ಸರ್ಕಾರ ರಚನೆ ಮಾಡಲು ರಾಷ್ಟ್ರೀಯ ಜನತಾ ಪಕ್ಷವನ್ನು ಬೆಂಬಲಿಸುವಂತೆ ಮೇಘಾಲಯದ ಬಿಜೆಪಿಯ ರಾಜ್ಯ ಘಟಕಕ್ಕೆ ಸಲಹೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಟ್ವೀಟ್ ಅನ್ನು ಬಿಜೆಪಿ ಜೆ.ಪಿ.ನಡ್ಡಾ, ಸಿಎಂ ಕಾನ್ರಾಡ್ ಸಂಗ್ಮಾ ಹಾಗೂ ರಾಷ್ಟ್ರೀಯ ಬಿಜೆಪಿಗೆ ಟ್ಯಾಗ್ ಮಾಡಿದ್ದಾರೆ.
Grateful to all those who have supported @BJP4Meghalaya in the Assembly polls. We will keep working hard to enhance the development trajectory of Meghalaya and focus on empowering the people of the state. I am also thankful to our party workers for the effort they put.
— Narendra Modi (@narendramodi) March 2, 2023
ಮೇಘಾಲಯದಲ್ಲಿ ಬಿಜೆಪಿಗೆ ಹಿನ್ನಡೆ ಆಗಿದ್ದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಮೇಘಾಲಯದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಅಭಿವೃದ್ಧಿ ಪಥವನ್ನು ಹೆಚ್ಚಿಸಲು ಮತ್ತು ರಾಜ್ಯದ ಜನರನ್ನು ಸಬಲೀಕರಣಗೊಳಿಸುವತ್ತ ಗಮನ ಹರಿಸಲು ನಾವು ಶ್ರಮಿಸುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರ ಶ್ರಮಕ್ಕೆ ನಾನು ಕೃತಜ್ಞನಾಗಿದ್ದೇನೆ ಎಂದು ಪ್ರಧಾನಿ ತಿಳಿಸಿದ್ದಾರೆ.
ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿ ಹೊಸ ಸರ್ಕಾರ ರಚನೆಗೆ ಬೆಂಬಲ ಮತ್ತು ಆಶೀರ್ವಾದ ಕೋರಿದ್ದಾರೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಶುಕ್ರವಾರ ತಿಳಿಸಿದರು. ಮೇಘಾಲಯದಲ್ಲಿ ಮುಂದಿನ ಸರ್ಕಾರ ರಚಿಸುವಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್ಪಿಪಿ) ಅನ್ನು ಬೆಂಬಲಿಸುವಂತೆ ಬಿಜೆಪಿ, ಮೇಘಾಲಯದ ರಾಜ್ಯ ಘಟಕಕ್ಕೆ ಜೆಪಿ ನಡ್ಡಾ ಸಲಹೆ ನೀಡಿದ್ದಾರೆ ಎಂದು ಅವರು ಹೇಳಿದರು.
ತ್ರಿಪುರಾದ ಜನತೆಗೆ ಬಿಜೆಪಿಯಲ್ಲಿ ವಿಶ್ವಾಸವಿಟ್ಟಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಧನ್ಯವಾದ ತಿಳಿಸಿದರು. ಈಶಾನ್ಯಕ್ಕೆ ಐತಿಹಾಸಿಕ ದಿನ. ಇಂದಿನ ಗೆಲುವು ಇದು ಅಭಿವೃದ್ಧಿ ಪರ ರಾಜಕೀಯದ ವಿಜಯವಾಗಿದೆ ಎಂದು ಅವರು ಬಣ್ಣಿಸಿದ್ದಾರೆ. ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ, ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಜನರ ಆದ್ಯತೆಯಾಗಿದೆ ಎಂಬುದು ಮತ್ತೊಮ್ಮೆ ಸ್ಪಷ್ಟವಾಗಿದೆ ಎಂದು ಹೇಳೀದರು.
ತ್ರಿಪುರಾ ದಲ್ಲಿ ಬಿಜೆಪಿ-ಐಪಿಎಫ್ಟಿ ಮೈತ್ರಿಕೂಟ ಬಹುಮತ (31) ಪಡೆದಿದೆ. ಸತತ ಎರಡನೇ ಬಾರಿಗೆ ಈಶಾನ್ಯ ರಾಜ್ಯದಲ್ಲಿ ಅಧಿಕಾರಕ್ಕೆ ಮರಳಿದೆ. ಚುನಾವಣಾ ಆಯೋಗದ ವೆಬ್ಸೈಟ್ ಪ್ರಕಾರ, ಬಿಜೆಪಿ 30 ಸ್ಥಾನಗಳನ್ನು ಗಳಿಸಿದರೆ, ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ (ಐಪಿಎಫ್ಟಿ) ಒಂದು ಸ್ಥಾನವನ್ನು ಪಡೆದುಕೊಂಡಿದೆ. ಇನ್ನು ಎರಡು ಸ್ಥಾನಗಳಲ್ಲಿ ಕೇಸರಿ ಪಕ್ಷ ಮುನ್ನಡೆ ಸಾಧಿಸಿದೆ. ಇಲ್ಲಿ ಬಿಜೆಪಿಯ ಗೆಲುವನ್ನು ನಿರೀಕ್ಷಿಸಲಾಗಿತ್ತು, ನಾವು ಅದಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದೆವು. ನಿರ್ಣಾಯಕ ಜನಾದೇಶದೊಂದಿಗೆ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಲಾಗಿದೆ ಎಂದು ನಿರ್ಗಮಿತ ಸಿಎಂ ಮಾಣಿಕ್ ಸಹಾ ಹೇಳಿದ್ದಾರೆ.
ಮೇಘಾಲಯದ ಉಪಮುಖ್ಯಮಂತ್ರಿ ಪ್ರೆಸ್ಟೋನ್ ಟೈನ್ಸಾಂಗ್ ಅವರು ಪೈನುರ್ಸ್ಲಾ ಕ್ಷೇತ್ರದಲ್ಲಿ 8,140 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಎನ್ಪಿಪಿ ಸಂಪೂರ್ಣ ಬಹುಮತವನ್ನು ಪಡೆದು ಭರವಸೆಯ ಪಕ್ಷವಾಗಿ ಹೊರ ಹೊಮ್ಮಿದೆ. ಆದರೆ ಜನರು ವಿಭಿನ್ನ ಜನಾದೇಶ ನೀಡಿದ್ದಾರೆ. ಮೇಘಾಲಯದ ರಾಜಕೀಯದಲ್ಲಿ, ವೈಯಕ್ತಿಕ ಅಭ್ಯರ್ಥಿಗಳಿಗೆ ಪಕ್ಷಕ್ಕಿಂತ ಹೆಚ್ಚಿನ ಪ್ರಾಮುಖ್ಯತೆ ಇದೆ. ಚುನಾವಣೆಯಲ್ಲಿ ಗೆಲ್ಲುವವರು ನಾಮ ನಿರ್ದೇಶಿತರೆ ಹೊರತು ಪಕ್ಷವಲ್ಲ ಎಂದು ಟೈನ್ಸಾಂಗ್ ಅವರು ಗೆಲುವಿನ ಬಳಿಕ ಹೀಗೆ ಪ್ರತಿಕ್ರಿಯಿಸಿದರು. ಇಂತಹ ವಿಭಜಿತ ಜನಾದೇಶವನ್ನು ನಾವು ನಿರೀಕ್ಷಿಸಿರಲಿಲ್ಲ ಎಂದು ಅವರು ಹೇಳಿದ್ದಾರೆ.
ಈಶಾನ್ಯ ಚುನಾವಣಾ ಫಲಿತಾಂಶಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಇದಕ್ಕೆ ತ್ರಿಮೂರ್ತಿಗಳಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಮೇಲೆ ಜನರ ಆಶೀರ್ವಾದ ಇರುವುದೇ ಕಾರಣ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದರು. ಬಿಜೆಪಿ ಸರ್ಕಾರ, ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ನಡ್ಡಾ ಅವರ ನಾಯಕತ್ವದಲ್ಲಿ, ಎಲ್ಲರನ್ನೂ ಒಳಗೊಳ್ಳುವ ಮತ್ತು ಸರ್ವತೋಮುಖ ಅಭಿವೃದ್ಧಿ ಸರ್ಕಾರವಾಗಿದೆ ಎಂದು ಸಿಂಧಿಯಾ ಹರ್ಷ ವ್ಯಕ್ತಪಡಿಸಿದರು.
ನಾಗಾಲ್ಯಾಂಡ್ ನಲ್ಲಿ 60 ವಿಧಾನಸಭೆ ಕ್ಷೇತ್ರಗಳ ಪೈಕಿ ಆಡಳಿತಾರೂಢ ಎನ್ಡಿಪಿಪಿ-ಬಿಜೆಪಿ ಮೈತ್ರಿಕೂಟಕ್ಕೆ 33 ಸ್ಥಾನ ಲಭಿಸುವ ಮೂಲಕ ಬಹುಮತ ಸಿಕ್ಕಿದೆ ಎಂದು ಚುನಾವಣಾ ಆಯೋಗ (ಇಸಿ) ತಿಳಿಸಿದೆ. ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್ಡಿಪಿಪಿ) 21 ಸ್ಥಾನಗಳನ್ನು ಗೆದ್ದರೆ, ಅದರ ಮೈತ್ರಿ ಪಾಲುದಾರ 12 ಸ್ಥಾನ ಕಬಳಿಸಿದೆ. ಎನ್ಡಿಪಿಪಿ-ಬಿಜೆಪಿ 40:20 ಸೀಟು ಹಂಚಿಕೆ ಯಡಿ ಚುನಾವಣೆ ಎದುರಿಸಿದ್ದವು ಎಂದು ಆಯೋಗ ತಿಳಿಸಿದೆ.
ತ್ರಿಪುರಾದ ಎರಡನೇ ಅವಧಿಗೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹೇಳಲಾಗುತ್ತಿರುವ ಮಾಣಿಕ್ ಸಹಾ ಅವರು ಕಾಂಗ್ರೆಸ್ನ ಹಿರಿಯ ನಾಯಕ ಆಶಿಶ್ ಕುಮಾರ್ ಸಹಾ ಅವರನ್ನು ಟೌನ್ ಬರ್ದೋವಾಲಿದಲ್ಲಿ 1,257 ಮತಗಳ ಅಂತರದಿಂದ ಸೋಲಿಸಿದ್ದಾರೆ. ಕ್ಷೇತ್ರದಲ್ಲಿ ಸಹಾ ಅವರು 2016 ರಲ್ಲಿ ಕೇಸರಿ ಪಕ್ಷಕ್ಕೆ ಸೇರಿದಾಗಿನಿಂದ ಹೆಚ್ಚೆಚ್ಚು ಕೆಲಸಗಳು, ಸಂಘಟಕರಾಗಿ ಶ್ರಮಿಸುತ್ತಿದ್ದಾರೆ. ಪಕ್ಷದ ಬ್ರ್ಯಾಂಡ್ ಹೆಚ್ಚಿಸುವಲ್ಲಿ ಅವರ ಪಾತ್ರ ಗಣನೀಯ ಎಂಬ ಕಾರಣಕ್ಕೆ ಅವರು ಎರಡನೇ ಬಾರಿಗೆ ಸಿಎಂ ಆಗುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬರುತ್ತಿವೆ.
ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಬರ್ನಾಡ್ ಮರಾಕ್ ಅವರನ್ನು ಸೋಲಿಸಿದರು. ದಕ್ಷಿಣ ತುರಾ ಕ್ಷೇತ್ರದಲ್ಲಿ 10,090 ಮತಗಳಿಂದ ಗೆದ್ದಿದ್ದಾರೆ ಎಂದು ಚುನಾವಣಾ ಆಯೋಗ ಗುರುವಾರ ಪ್ರಕಟಿಸಿದೆ. ಮಾರಕ್ 7,260 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾದರು. ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್ಪಿಪಿ) ಗೆ ಮತ ಹಾಕಿದೆಲ್ಲರಿಗೆ ಸಂಗ್ಮಾ ಧನ್ಯವಾದ ತಿಳಿಸಿದ್ದಾರೆ. 60 ವಿಧಾನಸಭಾ ಕ್ಷೇತ್ರಗಳ ಪೈಕಿ ಎನ್ಪಿಪಿ 26 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಸತತ ಎರಡನೇ ಅವಧಿಗೆ ಗುಡ್ಡಗಾಡು ರಾಜ್ಯದಲ್ಲಿ ಅಧಿಕಾರ ಉಳಿಸಿಕೊಳ್ಳಲು ಸಜ್ಜಾಗಿದ್ದೇವೆ ಎಂದು ಅವರು ಹೇಳಿದ್ದಾರೆ.
ಈಶಾನ್ಯದ ಮೂರು ರಾಜ್ಯಗಳಾದ ತ್ರಿಪುರ, ನಾಗಾಲ್ಯಾಂಡ್ ಮತ್ತು ಮೇಘಾಲಯ ಚುನಾವಣಾ ಫಲಿತಾಂಶಗಳ ಮೇಲೆ ಬಿಜೆಪಿ ಪ್ರಭಾವ ಬೀರಲಿದೆ. ಮೇಘಾಲಯ ಸಿಎಂ ಮತ್ತು ಆಡಳಿತಾರೂಢ ಎನ್ಪಿಪಿ ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಅವರು ಚುನಾವಣೋತ್ತರ ಮೈತ್ರಿಯ ಸುಳಿವನ್ನು ಈಗಾಗಲೇ ಕೈಬಿಟ್ಟಿದ್ದಾರೆ. ಇತ್ತ ಹೆಚ್ಚಿನ ನಿರ್ಗಮನ ಸಮೀಕ್ಷೆಗಳು ರಾಜ್ಯದಲ್ಲಿ ಹಂಗ್ ಹೌಸ್ ಅನ್ನು ಯೋಜಿಸಿವೆ. ಬಿಜೆಪಿ ಎಲ್ಲಾ 3 ರಾಜ್ಯಗಳ ಫಲಿತಾಂಶಗಳ ಮೇಲೆ ಪ್ರಭಾವ ಬೀರಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಪ್ರತಿಕ್ರಿಯಿಸಿದ್ದಾರೆ.
ದೇಶದ ಈಶಾನ್ಯ ಭಾಗದ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಶ್ರೇಯಸ್ಸು ನೀಡಿದ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಅವರು ಗುರುವಾರ, "ಈಶಾನ್ಯವು ಪ್ರಧಾನಿ ಮೋದಿಯವರ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಆಗಿದ್ದ, ಅದರಿಂದಲೇ ಇಂದು ನಾವು ಈ ಫಲಿತಾಂಶ ನೋಡುತ್ತಿದ್ದೇವೆ. ಬಿಜೆಪಿ 2024 ರ ಚುನಾವಣೆಯಲ್ಲಿ ಗೆಲ್ಲುತ್ತೇವೆ. ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ಮಾಡಿ ಸಮಯ ವ್ಯರ್ಥ ಮಾಡಿದರು. ಕಾಂಗ್ರೆಸ್ ತ್ರಿಪುರಾ ಕಳೆದುಕೊಂಡಿತು ಎಂದು ಅವರು ವ್ಯಂಗ್ಯವಾಡಿದರು.
ನಾಗಾಲ್ಯಾಂಡ್ ಭಾರತೀಯ ಜನತಾ ಪಕ್ಷದ (BJP) ಮುಖ್ಯಸ್ಥ ತೆಮ್ಜೆನ್ ಇಮ್ನಾ ಅಲೋಂಗ್ ಅವರು ಗುರುವಾರ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಲೋಂಗ್ಟಾಕಿ ಕ್ಷೇತ್ರದಿಂದ ಗೆದ್ದಿದ್ದಾರೆ. ರಾಜ್ಯ ಬಿಜೆಪಿ ಮುಖ್ಯಸ್ಥರು ಜನತಾ ದಳ (ಯುನೈಟೆಡ್) ಅಭ್ಯರ್ಥಿ ಜೆ ಲಾನು ಲಾಂಗ್ಚಾರ್ ಅವರನ್ನು 3,748 ಮತಗಳ ಅಂತರದಿಂದ ಸೋಲಿಸಿದ್ದಾರೆ. 62.5ರಷ್ಟು ಮತ ಅಂದರೆ ಒಟ್ಟು 9,274 ಮತಗಳನ್ನು ಪಡೆದರು. ಇದಕ್ಕೂ ಮೊದಲು, ನಾಗಾಲ್ಯಾಂಡ್ ಮುಖ್ಯಮಂತ್ರಿ ಮತ್ತು ಎನ್ಡಿಪಿಪಿ ಅಭ್ಯರ್ಥಿ ನೇಫಿಯು ರಿಯೊ ಉತ್ತರ ಅಂಗಮಿ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದರು. ಕಾಂಗ್ರೆಸ್ನ ಸೆಯಿವಿಲಿ ಸಚು ಅವರನ್ನು 15,824 ಮತಗಳ ಅಂತರದಲ್ಲಿ ಸೋಲು ಕಂಡರು. ಒಟ್ಟು 17,045 ಮತಗಳನ್ನು ಪಡೆದರು.
ಹಿರಿಯ ಕಾಂಗ್ರೆಸ್ ನಾಯಕ ಸುದೀಪ್ ರಾಯ್ ಬರ್ಮನ್ ಅವರು ಅಗರ್ತಲಾ ಕ್ಷೇತ್ರದಿಂದ 8,162 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಅವರು ಬಿಜೆಪಿಯ ಪಾಪಿಯಾ ದತ್ತಾ ಅವರನ್ನು ಸೋಲಿಸಿದರು. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಬಿರಾಜಿತ್ ಸಿನ್ಹಾ ಕೈಲಾಶಹರ್ ಕ್ಷೇತ್ರದಲ್ಲಿ ಬಿಜೆಪಿಯ ಮೊಬೋಶರ್ ಅಲಿ ವಿರುದ್ಧ 9,686 ಮತಗಳಿಂದ ಜಯಗಳಿಸಿದ್ದಾರೆ. ಏತನ್ಮಧ್ಯೆ, ಬನಮಾಲಿಪುರ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ರಾಜೀಬ್ ಭಟ್ಟಾಚಾರ್ಜಿ 1,406 ಮತಗಳಿಂದ ಹಿನ್ನಡೆಯಲ್ಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೋಪಾಲ್ ರಾಯ್ ಮುನ್ನಡೆ ಸಾಧಿಸಿದ್ದಾರೆ.
ಐಪಿಎಫ್ ಟಿ
ಕಾಂಗ್ರೆಸ್
ಮೇಘಾಲಯ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಅವರ ಪುತ್ರಿಯಾದ ಮಿಯಾನಿ ಡಿ ಶಿರಾ ಅವರು ಅಂಪತಿ ವಿಧಾನಸಭಾ ಕ್ಷೇತ್ರದಲ್ಲಿ ಜಯಬೇರಿ ಭಾರಿಸಿದ್ದಾರೆ. ಟಿಎಂಸಿ ನಾಯಕನ ಪತ್ನಿ ದಿಕ್ಕಂಚಿ ಡಿ ಶಿರಾ ಮಹನೇದ್ರಗಂಜ್ ಕ್ಷೇತ್ರದಿಂದ ಎನ್ಪಿಪಿ ಅಭ್ಯರ್ಥಿ ಸಂಜಯ್ ಎ ಸಂಗ್ಮಾ ವಿರುದ್ಧ ಸೋಲು ಕಂಡಿದ್ದಾರೆ.
ಈಶಾನ್ಯ ಮೂರು ರಾಜ್ಯಗಳಲ್ಲಿ ತ್ರಿಪುರಾ ಮತ್ತು ನಾಗಾಲ್ಯಾಂಡ್ನಲ್ಲಿ ಬಿಜೆಪಿ ಪಕ್ಷ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ. ಮೇಘಾಲಯದಲ್ಲಿ ಬಿಜೆಪಿ ಹಿಂದುಳಿದಿದೆ.
ಶಿಲ್ಲಾಂಗ್ನ ಎನ್ಪಿಪಿ ರಾಜ್ಯಾಧ್ಯಕ್ಷ ಡಬ್ಲ್ಯೂಆರ್ ಖಾರ್ಲುಖಿ ಅವರು, ಮೇಘಾಲಯದಲ್ಲಿ ನಮ್ಮ ಪಕ್ಷವು ಸರ್ಕಾರ ರಚಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಮ್ಮಲ್ಲಿ ನಂಬಿಕೆ ಇಟ್ಟಿದ್ದಕ್ಕಾಗಿ ಅಭಿನಂದನೆ. ನಾವು ಉತ್ತಮವಾಗಿ ಕಾರ್ಯನಿರ್ವಹಿಸಿದ್ದೇವೆ ಎಂದು ಭಾವಿಸುತ್ತೇನೆ. ಅದಕ್ಕಾಗಿಯೇ ಜನರು ಮತ್ತೆ ನಮಗೆ ಆಶೀರ್ವದಿಸುತ್ತಿದ್ದಾರೆ. ಸರ್ಕಾರ ರಚನೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ನಾನು ಭಾವಿಸುತ್ತೇನೆ ಎಂದರು.
ತ್ರಿಪುರಾದಲ್ಲಿ ಬಿಜೆಪಿ ಪಕ್ಷವು ತನ್ನದೇ ಆದ ಅಧಿಕಾರ ಉಳಿಸಿಕೊಳ್ಳಲು ಮತ್ತು ನಾಗಾಲ್ಯಾಂಡ್ನಲ್ಲಿ ತನ್ನ ಹಿರಿಯ ಮಿತ್ರರಾಷ್ಟ್ರವಾದ ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (NDPP) ಜೊತೆಗೆ ಗುರುವಾರ ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುವ ಸಾಧ್ಯತೆ ಇದೆ. ರಾಷ್ಟ್ರ ರಾಜಧಾನಿಯಲ್ಲಿನ ಪ್ರಧಾನ ಕಚೇರಿಯಲ್ಲಿ ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ ಪ್ರಧಾನಿ ಮೋದಿ ಗೆಲುವಿಗೆ ಅಭಿನಂದನೆ ಸಲ್ಲಿಸುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ನಾಗಾಲ್ಯಾಂಡ್ ವಿಧಾನಸಭೆಗೆ ಗೆದ್ದು ಆಯ್ಕೆಯಾದ ಮೊದಲ ಮಹಿಳೆ ಹೆಖಾನಿ ಜಖಾಲು ಅವರು. ಈ ಮೂಲಕ ಇವರು ಇತಿಹಾಸ ಸೃಷ್ಟಿಸಿದ್ದಾರೆ. ಇದು ನನ್ನ ಮೊದಲ ಹೆಜ್ಜೆ ಮಾತ್ರ. ಭವಿಷ್ಯದಲ್ಲಿ ನಾವು ಅನೇಕ ಒಳ್ಳೆಯ ಕೆಲಸಗಳನ್ನು ಮಾಡಬೇಕಾಗಿದೆ" ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ದಿಮಾಪುರ್ III ಸ್ಥಾನಕ್ಕೆ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್ಡಿಪಿಪಿ) ಅಭ್ಯರ್ಥಿ ಹೆಖಾನಿ ಜಖಾಲು ಅವರು ಪ್ರತಿಸ್ಪರ್ಧಿ ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಅಜೆಟೊ ಜಿಮೊಮಿ ಅವರನ್ನು 1,536 ಮತಗಳಿಂದ ಸೋಲಿಸಿದ್ದಾರೆ ಎಂದು ಭಾರತ ಚುನಾವಣಾ ಆಯೋಗ ತಿಳಿಸಿದೆ.
ಯುಡಿಪಿ
ತ್ರಿಪುರಾದ ರಾಜಮನೆತನದ ವಂಶಸ್ಥರಾದ ಪ್ರದ್ಯೋತ್ ಮಾಣಿಕ್ಯ ದೆಬ್ಬರ್ಮಾ ಅವರ ಪ್ರಾದೇಶಿಕ ಪಕ್ಷವಾದ ತಪ್ರಾ ಮೋಥಾ, ತ್ರಿಪುರಾದಲ್ಲಿ ಮುಂದಿನ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆ ಇದೆ. ಮತ ಎಣಿಕೆ ವೇಳೆ, ಪಿಶಿಷ್ಟ ಪಂಗಡಕ್ಕೆ ಮೀಸಲಾದ 2012 ವಿಧಾನಸಭಾ ಕ್ಷೇತ್ರಗಳಲ್ಲಿ ತಿಪ್ರಾ ಮೋತಾ ಮುನ್ನಡೆ ಸಾಧಿಸಿದ್ದು, ಆಡಳಿರೂಢ ಬಿಜೆಪಿ ಮತ್ತು ಎಡ-ಕಾಂಗ್ರೆಸ್ ಮೈತ್ರಿಕೂಟದ ನಿರೀಕ್ಷೆಯನ್ನು ಹುಸಿಗೊಳಿಸಿದೆ. ಮೂಲಗಳ ಪ್ರಕಾರ ಬಿಜೆಪಿ-ಐಪಿಎಫ್ಟಿ ಮೈತ್ರಿಕೂಟವು 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಹುಮತಕ್ಕೆ ಇನ್ನೂ ಒಂದು ಕ್ಷೇತ್ರ ಬೇಕಿದೆ. ಪ್ರತಿಪಕ್ಷಗಳಾದ ಎಡ-ಕಾಂಗ್ರೆಸ್ ಮೈತ್ರಿಕೂಟ 17 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ರಾಜ್ಯದ ಬುಡಕಟ್ಟು ಜನಾಂಗ ಹೆಚ್ಚಾಗಿರುವ ಕ್ಷೇತ್ರಗಳಲ್ಲಿನ ಬಿಜೆಪಿಯ ಮತಗಳ ಪಾಲನ್ನು ತಿಪ್ರಾ ಮೋಥಾ ಪಕ್ಷವು ಗಣನೀಯವಾಗಿ ಸೆಳೆದುಕೊಂಡಿದೆ ಎಮದು ಆರಂಭಿಕ ಮತೆಣಿಕೆಯು ಸೂಚಿಸಿದೆ.
ಮೇಘಾಲಯದಲ್ಲಿ ಆಡಳಿತಾರೂಢ ನ್ಯಾಶನಲ್ ಪೀಪಲ್ಸ್ ಪಾರ್ಟಿ (ಎನ್ಪಿಪಿ) ಎರಡು ಸ್ಥಾನಗಳನ್ನು ಗೆದ್ದುಕೊಂಡಿದೆ. ಜೊತೆಗೆ ಇತರ 21 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿ (ಯುಡಿಪಿ) ಒಂಬತ್ತು ಕ್ಷೇತ್ರಗಳಲ್ಲಿ ಮುಂದಿದ್ದರೆ, ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ತಲಾ ಐದು ಸ್ಥಾನಗಳಲ್ಲಿ ಮುಂದಿವೆ. ಕಾಂಗ್ರೆಸ್ ಮತ್ತು ವಾಯ್ಸ್ ಆಫ್ ದಿ ಪೀಪಲ್ ಪಾರ್ಟಿ (ವಿಪಿಪಿ) ತಲಾ ನಾಲ್ಕು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications