ಆಕ್ಸಿಜನ್ ಕೊರತೆ, ಸಾವು: ರಾಹುಲ್ ಆರೋಪಕ್ಕೆ ಸಂಬಿತ್ ಪಾತ್ರ ಉತ್ತರ
ನವದೆಹಲಿ, ಜುಲೈ 21: ಕೊರೊನಾ ಎರಡನೇ ಅಲೆಯಲ್ಲಿ ದೇಶಾದ್ಯಂತ ಆಮ್ಲಜನಕ ಕೊರತೆ ವಿಚಾರದಲ್ಲಿ ವಿವಿಧ ರಾಜ್ಯಗಳು ಕೇಂದ್ರ ಸರ್ಕಾರವನ್ನು ಗುರಿಯಾಗಿಸುತ್ತಿದೆ. ಆದರೆ ಇದೇ ಆಮ್ಲಜನಕ ವಿಚಾರ ಹೊಸ ರಾಜಕೀಯ ತಿರುವನ್ನು ಪಡೆದಿದೆ.
ರಾಹುಲ್ ಗಾಂಧಿ ದ್ವಂದ್ವ ಮನೋಭಾವ ಹೊಂದಿದ್ದಾರೆ, ಕೇಜ್ರಿವಾಲ್ ಮತ್ತು ರಾಹುಲ್ ಗಾಂಧಿ ಹೈಕೋರ್ಟ್ನಲ್ಲಿ ಒಂದೇ ರೀತಿಯಲ್ಲಿ ಮಾತನಾಡಿದರೆ, ಟಿವಿ-ಸೋಷಿಯಲ್ ಮೀಡಿಯಾದಲ್ಲಿ ಬೇರೆ ರೀತಿಯೇ ಮಾಡನಾಡುತ್ತಾರೆ ಎಂದು ಬಿಜೆಪಿ ವಕ್ತಾರ ಸಂಬಿತ್ ಮಾತ್ರಾ ಹೇಳಿದ್ದಾರೆ.
ಆಮ್ಲಜನಕ ಕೊರತೆಯಿಂದ ಸಂಭವಿಸಿದ ಸಾವಿನ ಕುರಿತು ಅಂಕಿ-ಅಂಶಗಳನ್ನು ನೀಡುವಂತೆ ವೇಣುಗೋಪಾಲ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು. ಆದರೆ ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸಚಿವ ಡಾ. ಭಾರ್ತಿ ಪ್ರವೀಣ್ ಕುಮಾರ್ ಆಮ್ಲಜನಕ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಲಿಖಿತವಾಗಿ ತಿಳಿಸಿದ್ದರು.

ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಆರೋಗ್ಯ ಸಚಿವಾಲಯಕ್ಕೆ ನಿಯಮಿತವಾಗಿ ಮಾಹಿತಿ ನೀಡುತ್ತಿದೆ, ಇದರ ಅನ್ವಯ ದೇಶದಲ್ಲಿ ಆಮ್ಲಜನಕ ಕೊರತೆಯಿಂದಾಗಿ ಒಂದೇ ಒಂದು ಸಾವು ಸಂಭವಿಸಿಲ್ಲ ಎಂದು ಹೇಳಿದ್ದಾರೆ.
ಇದೀಗ ಕಾಂಗ್ರೆಸ್ ಆರೋಪದ ವಿಚಾರವಾಗಿ ಮಾತನಾಡಿರುವ ಸಂಬಿತ್ ಪಾತ್ರಾ, ಯಾವುದೇ ರಾಜ್ಯ/ಕೇಂದ್ರಾಡಳಿತ ಪ್ರದೇಶವು ಇಂತಹ ಸಾವಿನ ಬಗ್ಗೆ ಮಾಹಿತಿ ಕಳುಹಿಸಿಲ್ಲ ಎಂದು ಹೇಳುತ್ತಿದೆ. ಇದಕ್ಕೆ ಯಾವುದೇ ಅಂಕಿ-ಅಂಶಗಳು ದಾಖಲೆಯಾಗಿ ಸಿಕ್ಕಿಲ್ಲ. ಇದರಿಂದ ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದಿದ್ದಾರೆ.
ಇದೇ ಸಂದರ್ಭದಲ್ಲಿ ಅರವಿಂದ್ ಕೇಜ್ರಿವಾಲ್ ಹಾಗೂ ಮನೀಶ್ ಸಿಸೋಡಿಯಾ ಅವರಿಗೆ ತರಾಟೆ ತೆಗೆದುಕೊಂಡ ಸಂಬಿತ್ ಪಾತ್ರಾ, ಆಮ್ಲಜನಕದ ಕೊರತೆಯಿಂದಾಗಿ ಒಬ್ಬ ರೊಗಿ ಸಾವನ್ನಪ್ಪಿದ್ದಾನೆ ಎಂದು ನಿಮ್ಮ ಸರ್ಕಾರವು ಕೇಂದ್ರಕ್ಕೆ ಕೊಟ್ಟ ದಾಖಲೆಯಲ್ಲಿ ಲಿಖಿತವಾಗಿ ಹೀಳಿದ್ದೀರಾ?, ಇದು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ವಿಷಯ ನಾವು ಕೇವಲ ರಾಜ್ಯ ಡೇಟಾವನ್ನು ಸಂಗ್ರಹಿಸುತ್ತೇವೆ.
ರಾಜ್ಯಗಳು/ ಯುಟಿಗಳು ತಮ್ಮ ಸಾವಿನ ಅಂಕಿ-ಅಂಶಗಳನ್ನು ವರದಿ ಮಾಡುವ ಆಧಾರದ ಮೇಲೆ ನಾವು ಮಾರ್ಗಸೂಚಿಯನ್ನು ಹೊರಡಿಸಿದ್ದೇವೆ ಎಂದು ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications