ಟಿಆರ್ಪಿ ಹಗರಣ: ಟಿವಿ ಚಾನೆಲ್ಗಳ 32 ಕೋಟಿ ರೂ ಆಸ್ತಿ ಜಪ್ತಿ
ನವದೆಹಲಿ, ಮಾರ್ಚ್ 18: ಟಿಆರ್ಪಿ ತಿರುಚಿದ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ), ಮಹಾರಾಷ್ಟ್ರ ಮೂಲದ ಕೆಲವು ಟಿವಿ ವಾಹಿನಿಗಳ ಸುಮಾರು 32 ಕೋಟಿ ಮೌಲ್ಯದ ಸಂಪತ್ತನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಫಕ್ತ್ ಮರಾಠಿ, ಬಾಕ್ಸ್ ಸಿನಿಮಾ ಮತ್ತು ಮಹಾ ಮೂವಿ ಚಾನೆಲ್ಗಳಂತಹ ಕೆಲವು ವಾಹಿನಿಗಳಿಗೆ ಸೇರಿದ ಆಸ್ತಿಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿ ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಮುಂಬೈ, ಇಂದೋರ್, ದೆಹಲಿ ಮತ್ತು ಗುರುಗಾಂವ್ಗಳಲ್ಲಿನ ವಾಣಿಜ್ಯ ಹಾಗೂ ನಿವಾಸಿ ಘಟಕಗಳು ಮತ್ತು ಭೂಮಿ , ಕೆಲವು ಬ್ಯಾಂಕ್ ಠೇವಣಿಗಳು ಸೇರಿವೆ ಎಂದು ಇ.ಡಿ ಹೇಳಿಕೆ ತಿಳಿಸಿದೆ.
'ಈ ಚಾನೆಲ್ಗಳಲ್ಲಿ ಎರಡು ವಾಹಿನಿಗಳ ಒಟ್ಟಾರೆ ಟಿಆರ್ಪಿಯು ಕೇವಲ ಐದು ಮನೆಗಳಿಂದ ಮುಂಬೈನ ಒಟ್ಟುಎ ಶೇ 25ರಷ್ಟು ವೀವರ್ಶಿಪ್ ತೋರಿಸುತ್ತಿತ್ತು. ಮೂರನೇ ವಾಹಿನಿಯಲ್ಲಿ ಐದು ನಿಗದಿತ ಮನೆಗಳಿಂದ ನಿರ್ದಿಷ್ಟ ಅವಧಿಯಲ್ಲಿ ಶೇ 12ರಷ್ಟು ವೀವರ್ಶಿಪ್ ಮುಂಬೈನಲ್ಲಿ ತೋರಿಸಲಾಗುತ್ತಿತ್ತು' ಎಂದು ಸಂಸ್ಥೆ ತಿಳಿಸಿದೆ.

ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್ಪಿ) ಅನ್ನು ತಿರುಚಿದ ಪ್ರಕರಣದಲ್ಲಿ ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡ ಬಳಿಕ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡಿತ್ತು.
'ಫಕ್ತ್ ಮರಾಠಿ, ಬಾಕ್ಸ್ ಸಿನಿಮಾ ಮತ್ತು ಮಹಾ ಮೂವೀಯಂತಹ ಚಾನೆಲ್ಗಳು ತಪ್ಪು ಮಾರ್ಗದ ಮೂಲಕ ಟಿಆರ್ಪಿಯನ್ನು ತಿರುಚಲು ವಂಚನೆ, ನಂಬಿಕೆ ದ್ರೋಹದ ಅಪರಾಧಗಳನ್ನು ಎಸಗಿವೆ ಮತ್ತು ಮೋಸ ಮಾಡುವ ಅಪರಾಧ ಸಂಚಿನಲ್ಲಿ ಭಾಗಿಯಾಗಿವೆ. ಟಿಆರ್ಪಿ ರೇಟಿಂಗ್ಗಳನ್ನು ಮೋಸದಿಂದ ಹೆಚ್ಚಿಸಿಕೊಳ್ಳುವ ಮೂಲಕ ಈ ಚಾನೆಲ್ಗಳು ಹೆಚ್ಚಿನ ಜಾಹೀರಾತು ಆದಾಯವನ್ನು ಪಡೆದುಕೊಳ್ಳುತ್ತಿದ್ದವು' ಎಂದು ಇ.ಡಿ ವಿವರಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications