Get Updates
Get notified of breaking news, exclusive insights, and must-see stories!

Tirupati Budget: ತಿರುಪತಿ ತಿಮ್ಮಪ್ಪನಿಗೆ ಭರ್ಜರಿ ಬಜೆಟ್: 5259 ಕೋಟಿ ರೂ. ಅನುಮೋದನೆ

ವಿಶ್ವವಿಖ್ಯಾತ ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಈ ಬಾರಿ ಭರ್ಜರಿ ಆದಾಯ ಬಂದಿದೆ. ನಿತ್ಯ ಸಾವಿರಾರು ಭಕ್ತರು ದರ್ಶನ ಪಡೆಯುವ ಈ ಪವಿತ್ರ ಸನ್ನಿಧಾನದಲ್ಲಿ ಆದಾಯದ ಹಣವನ್ನು ಕೆಲ ಉತ್ತಮ ಕಾರ್ಯಗಳಿಗೆ ಬಳಕೆ ಮಾಡಲು ಟಿಟಿಡಿ ನಿರ್ಧರಿಸಿದೆ.

ಹೌದು... ಈ ಬಾರಿ ತಿರುಪತಿ ತಿಮ್ಮಪ್ಪನ ಹುಂಡಿಯಲ್ಲಿ 5,259 ಕೋಟಿ ದೇಣಿಗೆ ಸಂಗ್ರಹವಾಗಿದೆ. ಟಿಟಿಡಿ ಟ್ರಸ್ಟಿಗಳ ಮಂಡಳಿಯು 2025-26ರ ಆರ್ಥಿಕ ವರ್ಷಕ್ಕೆ 5,259 ಕೋಟಿ ರೂ.ಗಳ ಬಜೆಟ್‌ಗೆ ಅನುಮೋದನೆ ನೀಡಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಅಧ್ಯಕ್ಷ ಬಿ ಆರ್ ನಾಯ್ಡು ತಿಳಿಸಿದ್ದಾರೆ.

TTD Board of Trustees approves Rs 5 259 crore budget for FY 2026

ಅಲ್ಲದೆ ಬಜೆಟ್ ಅನುಮೋದನೆಯೊಂದಿಗೆ 'ಪೋಟು' (ದೇವಾಲಯದ ಅಡುಗೆಮನೆ) ಕಾರ್ಮಿಕರಿಗೆ ವೇತನವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ಜೊತೆಗೆ ಅವರ ವೈದ್ಯಕೀಯ ಪ್ರಯೋಜನಗಳನ್ನು ಹೆಚ್ಚಿಸುವ ಸಾಧ್ಯತೆಯೂ ಇದೆ. ಅಲ್ಲದೆ ವೃದ್ಧರು ಮತ್ತು ಅಂಗವಿಕಲ ಭಕ್ತರಿಗೆ ಆಫ್‌ಲೈನ್ ದರ್ಶನ ನೀಡುವ ಸಾಧ್ಯತೆಯನ್ನು ಹೆಚ್ಚಿಸುವುದು ಸೇರಿದಂತೆ ಹಲವಾರು ಪ್ರಮುಖ ನಿರ್ಣಯಗಳನ್ನು ಮಂಡಳಿ ಅಂಗೀಕರಿಸಿದೆ.

ಕೊಡಂಗಲ್, ಕರೀಂನಗರ, ಉಪಮಾಕ, ಅನಕಪಲ್ಲಿ, ಕರ್ನೂಲ್, ಧರ್ಮಾವರಂ, ತಲಕೋಣ ಮತ್ತು ಗಂಗಮ್ಮ ದೇವಸ್ಥಾನಗಳ ಪುನರ್ನಿರ್ಮಾಣಕ್ಕೂ ಮಂಡಳಿಯು ಆರ್ಥಿಕ ಸಹಾಯವನ್ನು ಮಾಡಲಿದೆ. ತಿರುಮಲದಲ್ಲಿ ಆಯ್ದ ವಿಐಪಿ ಮತ್ತು ವಿಐಪಿ ಅಲ್ಲದ ಅತಿಥಿ ಗೃಹಗಳನ್ನು ಪುನರ್ನಿರ್ಮಿಸಲು ಮತ್ತು ಅಲಿಪಿರಿಯಲ್ಲಿ ವಿಜ್ಞಾನ ನಗರ ಮತ್ತು ವಸ್ತುಸಂಗ್ರಹಾಲಯಕ್ಕಾಗಿ ಈ ಹಿಂದೆ ಗೊತ್ತುಪಡಿಸಿದ 20 ಎಕರೆ ಭೂಮಿಯ ಹಂಚಿಕೆಯನ್ನು ರದ್ದುಗೊಳಿಸಲು ಮಂಡಳಿಯು ನಿರ್ಧರಿಸಿದೆ. ಹಾಗಾದರೆ ಟಿಟಿಡಿ ತೆಗೆದುಕೊಂಡ ಕೆಲ ಪ್ರಮುಖ ನಿರ್ಧಾರಗಳ ಬಗ್ಗೆ ಈಗ ತಿಳಿಯೋಣ.

ಟಿಟಿಡಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು:-

* ಪೋಟು (ದೇವಾಲಯದ ಅಡುಗೆಮನೆ) ನೌಕರರಿಗೆ ಪೂರ್ಣ ವೇತನ ಸಿಗುವಂತೆ ನೋಡಿಕೊಳ್ಳುವುದು.

* ಪೋಟು (ದೇವಾಲಯದ ಅಡುಗೆಮನೆ) ಕಾರ್ಮಿಕರ ಸಂಬಳವನ್ನು ಯಾವುದೇ ಕಡಿತವಿಲ್ಲದೆ ಪಾವತಿಸುವುದು.

* ಟಿಟಿಡಿ ಕಾಲೇಜುಗಳಲ್ಲಿ 25 ವರ್ಷಗಳಿಂದ ಕೆಲಸ ಮಾಡುತ್ತಿರುವ 151 ಗುತ್ತಿಗೆ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಲು ಸಮಿತಿಯನ್ನು ರಚಿಸಲು ಸಹ ನಿರ್ಧರಿಸಲಾಗಿದೆ.

* ಇದಲ್ಲದೆ ತಿರುಮಲದಲ್ಲಿ ಟಿಟಿಡಿ ಉದ್ಯೋಗಿಗಳಿಗೆ ನೇಮ್ ಬ್ಯಾಡ್ಜ್‌ಗಳ ಸಮಸ್ಯೆಯನ್ನು ಪರಿಶೀಲಿಸುವಂತೆ ಮಂಡಳಿಯು ಅಧಿಕಾರಿಗಳಿಗೆ ಸೂಚಿಸಿದೆ.

TTD Board of Trustees approves Rs 5 259 crore budget for FY 2026

ತಿರುಮಲ ಅನ್ನಮಯ್ಯ ಭವನದಲ್ಲಿ ನಡೆದ ಟಿಟಿಡಿ ಆಡಳಿತ ಮಂಡಳಿ ಸಭೆಯಲ್ಲಿ, ಕಾರ್ಮಿಕರ ವೇತನ ಹೆಚ್ಚಳ ಮತ್ತು ಟಿಟಿಡಿ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಲು ಸಮಿತಿಯನ್ನು ರಚಿಸಿದ್ದಕ್ಕಾಗಿ ಕಾರ್ಮಿಕರು ಮತ್ತು ಗುತ್ತಿಗೆ ಉಪನ್ಯಾಸಕರು ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಅವರಿಗೆ ಧನ್ಯವಾದ ಅರ್ಪಿಸಿದರು. ಟಿಟಿಡಿ ಮಂಡಳಿ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದ ಬಗ್ಗೆ ಅವರು ಸಂತೋಷ ವ್ಯಕ್ತಪಡಿಸಿದರು.

ಕಲ್ಯಾಣ ವೆಂಕಟೇಶ್ವರ ಸ್ವಾಮಿಗೆ ಪುಷ್ಪ ಸಮರ್ಪಣೆ ಸಮಾರಂಭ

ಮಾರ್ಚ್ 25ರಂದು ಬೆಳಿಗ್ಗೆ 10 ರಿಂದ 11 ರವರೆಗೆ ಶ್ರೀದೇವಿ ಭೂದೇವಿ ಸಮೇತ ಕಲ್ಯಾಣ ವೆಂಕಟೇಶ್ವರ ಸ್ವಾಮಿಯ ಉತ್ಸವಗಳಿಗೆ ಸ್ನಪ ತಿರುಮಂಜನಂ ನೆರವೇರಲಿದೆ. ಇದರಲ್ಲಿ ಹಾಲು, ಮೊಸರು, ಜೇನುತುಪ್ಪ, ಅರಿಶಿನ, ಶ್ರೀಗಂಧ ಮತ್ತು ತೆಂಗಿನ ನೀರಿನಿಂದ ಅಭಿಷೇಕ ಮಾಡಲಾಗುತ್ತದೆ. ಮಧ್ಯಾಹ್ನ 2 ರಿಂದ 4 ರವರೆಗೆ ಪುಷ್ಪ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ದೇವರಿಗೆ ತುಳಸಿ, ಮಲ್ಲಿಗೆ, ಜಾಜಿ ಸಂಪಂಗಿ, ಗುಲಾಬಿ ಮತ್ತು ಲಿಲ್ಲಿ ಮುಂತಾದ ವಿವಿಧ ರೀತಿಯ ಹೂವುಗಳಿಂದ ಅಭಿಷೇಕ ಮಾಡಲಾಗುತ್ತದೆ. ಬ್ರಹ್ಮೋತ್ಸವದ ಸಮಯದಲ್ಲಿ ಪುರೋಹಿತರು, ಅಧಿಕಾರಿಗಳು ಅಥವಾ ಭಕ್ತರು ತಿಳಿಯದೆ ಮಾಡಿದ ಯಾವುದೇ ತಪ್ಪುಗಳಿಗೆ ಪ್ರಾಯಶ್ಚಿತ್ತವಾಗಿ ಹೂವಿನ ಬಲಿಯನ್ನು ನಡೆಸಲಾಗುತ್ತದೆ. ಈ ಯಜ್ಞವನ್ನು ಮಾಡುವುದರಿಂದ ಎಲ್ಲಾ ದುಷ್ಟಶಕ್ತಿಗಳು ದೂರವಾಗುತ್ತವೆ ಎಂದು ನಂಬಲಾಗುತ್ತದೆ.

ಭಾರತದಲ್ಲಿ ಹೆಚ್ಚು ಆದಾಯವಿರುವ ದೇವಸ್ಥಾನ ಯಾವುದು?

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿರುವ ತಿರುಪತಿ ಹಿಂದೂ ಧರ್ಮದ ಪವಿತ್ರ ಕ್ಷೇತ್ರಗಳಲ್ಲೊಂದು. ಈ ಕ್ಷೇತ್ರವನ್ನು ಭೂವೈಕುಂಠ ಎಂದು ಕರೆಯಲಾಗುತ್ತದೆ. ಇಲ್ಲಿರುವ ವೆಂಕಟೇಶ್ವರ ದೇವಾಲಯವು ಜಗತ್ತಿನಲ್ಲಿಯೇ ಅತಿ ಹೆಚ್ಚು ಆದಾಯವಿರುವ ಶ್ರೀಮಂತ ದೇವಸ್ಥಾನ ಎಂದು ಕರೆಯಲಾಗುತ್ತದೆ. ಇದು ಶೇಷಾಚಲಂ ಬೆಟ್ಟಗಳ ಹಸಿರು ತಾಣದ ಮಧ್ಯೆ ಇದ್ದು ನಿತ್ಯ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+