Tirumala: ನೊಂದ ಮೊಗದಲ್ಲಿ ಮಂದಹಾಸ- ಅಂಗವಿಕಲರಿಗೆ ನೆರವಾದ ತಿರುಪತಿ ತಿಮ್ಮಪ್ಪ
ಟಿಟಿಡಿ ಆಶ್ರಯದಲ್ಲಿ ನಡೆಯುತ್ತಿರುವ ಬಿರ್ಡ್ ಆಸ್ಪತ್ರೆ (BIRRD Hospital) ಶುಭ ಸುದ್ದಿಯೊಂದನ್ನು ನೀಡಿದೆ. ದಾನಿಗಳ ಸಹಾಯದಿಂದ ಅಂಗವಿಕಲರಿಗೆ ಬಿರ್ಡ್ ಆಸ್ಪತ್ರೆ ನೆರವಾಗಿದೆ. ಅಂಗವಿಕರಿಗೆ ಉನ್ನತ-ಮಟ್ಟದ ಕೃತಕ ಅಂಗಗಳನ್ನು ಉಚಿತವಾಗಿ ಒದಗಿಸಿದೆ.
ಹೌದು... ಬಿರ್ಡ್ ಆಸ್ಪತ್ರೆಯಲ್ಲಿ 110 ಅಂಗವಿಕಲರಿಗೆ ಕೃತಕ ಕಾಲುಗಳನ್ನು ವಿತರಿಸಲಾಗಿದೆ. ಇತ್ತೀಚೆಗೆ ತಮಿಳುನಾಡಿನ ಧರ್ಮಪುರಿಯ ದಾನಿಗಳಾದ ಶ್ರೀ ಸುಬ್ರಮಣಿಯನ್ ಹಾಗೂ ಎಂಡೋಲೈಟ್ ಕಂಪನಿ ಸಹಯೋಗದೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಸಹಾಯದಿಂದ ತಯಾರಿಸಿದ ಉನ್ನತ-ಮಟ್ಟದ ಕೃತಕ ಅಂಗಗಳನ್ನು ಉಚಿತವಾಗಿ ಒದಗಿಸಲಾಗಿದೆ.

ಮೂಲ ಬೆಲೆಯ 50 ಪ್ರತಿಶತದಷ್ಟು ರಿಯಾಯಿತಿಯಲ್ಲಿ ಅಲ್ಯೂಮಿನಿಯಂನಿಂದ ಮಾಡಿದ ಈ ಕೃತಕ ಅಂಗಗಳನ್ನು ಟಿಟಿಡಿ ಪಡೆದು ನೀಡಿದೆ. ಈ ಕೃತಕ ಅಂಗಗಳನ್ನು ಧರಿಸಿದ ರೋಗಿಗಳು ಯಾವುದೇ ಸಮಸ್ಯೆಯಿಲ್ಲದೆ ಸಾಮಾನ್ಯ ಜನರಂತೆ ಬಹಳ ಸುಲಭವಾಗಿ ನಡೆಯಲು ಸಾಧ್ಯವಾಗುತ್ತದೆ. ಇದರಿಂದ ಅಂಗವಿಕಲರು ಸಂತಸ ವ್ಯಕ್ತಪಡಿಸಿದ್ದಾರೆ.
ಇಲ್ಲಿಯವರೆಗೂ ಜೈಪುರ ಮತ್ತಿತರ ಕಡೆಗಳಲ್ಲಿ ತಯಾರಾದ ಕೃತಕ ಕೈಕಾಲುಗಳನ್ನು ಬಳಸುತ್ತಿದ್ದ ಅಂಗವಿಕಲರು ಟಿಟಿಡಿ ಆಶ್ರಯದಲ್ಲಿ ನಡೆಯುತ್ತಿರುವ ಬಿರ್ಡ್ ಆಸ್ಪತ್ರೆ ಸಹಾಯಕ್ಕೆ ಸಂತಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಬಿರ್ಡ್ ಆಸ್ಪತ್ರೆ ವೈದ್ಯರು, ಇತರೆ ವೈದ್ಯಕೀಯ ಸಿಬ್ಬಂದಿ ಹಾಗೂ ರೋಗಿಗಳ ಸಂಬಂಧಿಕರು ಭಾಗವಹಿಸಿದ್ದರು.
ತಿರುಪತಿ ದೇವಸ್ಥಾನ
ತಿರುಪತಿಯು ಭಾರತದ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಒಂದು ಪಟ್ಟಣವಾಗಿದೆ. ತಿರುಮಲ ತಿರುಪತಿ ಶ್ರೀ ವೆಂಟಕೇಶ್ವರ ಸ್ವಾಮಿ ಕಲಿಯುಗದ ಪ್ರತ್ಯಕ್ಷ ದೈವ ಎಂದೇ ಭಕ್ತರು ನಂಬಿದ್ದಾರೆ. ತಿಮ್ಮಪ್ಪನ ನಗು ಮುಖವನ್ನು ನೋಡಲು ಭಕ್ತರು ನಿತ್ಯ ಬಯಸುತ್ತಾರೆ. ಶ್ರೀ ಬಾಲಾಜಿಯ ದರ್ಶನಕ್ಕಾಗಿ ನಿತ್ಯ ಲಕ್ಷಾಂತರ ಮಂದಿ ಭಕ್ತರು ದೇಶದ ಮೂಲೆ ಮೂಲೆಯಿಂದಲೂ ತಿರುಮಲಕ್ಕೆ ಆಗಮಿಸುತ್ತಾರೆ.

ದೇಶ ವಿದೇಶದಿಂದಲೂ ಆಗಮಿಸುವ ಭಕ್ತರು ಶ್ರೀ ವೆಂಟಕೇಶ್ವರ ಸ್ವಾಮಿಯ ದರ್ಶನ ಪಡೆದುಕೊಳ್ಳಲು ಆಗಮಿಸಿ ಆನಂದ ನಿಲಯದಲ್ಲಿ ದೇವರ ದರ್ಶನ ಪಡೆದುಕೊಂಡು ತಮ್ಮ ಜೀವನ ಸಾರ್ಥಕವಾಯ್ತು ಎಂದು ಭಕ್ತರು ಭಾವಿಸುತ್ತಾರೆ.
ತಿರುಮಲ ದೇವಸ್ಥಾನವು ತಿರುಪತಿಯಲ್ಲಿ ಮಾತ್ರವಲ್ಲದೆ ಇಡೀ ದೇಶದ ಅತಿದೊಡ್ಡ ಯಾತ್ರಾಸ್ಥಳವಾಗಿದೆ. ಲಕ್ಷಾಂತರ ಭಕ್ತರು ವೆಂಕಟೇಶ್ವರನ ನೆಲೆಯಾದ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ.
ಅಸಾಧಾರಣವಾದ ದೇವಾಲಯವು ತಿರುಮಲ ಬೆಟ್ಟಗಳ ತುದಿಯಲ್ಲಿದೆ. ಈ ಬೆಟ್ಟಗಳು ಸಪ್ತಗಿರಿ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಏಳು ಶಿಖರಗಳನ್ನು ಒಳಗೊಂಡಿವೆ ಮತ್ತು ಭಾರತದಲ್ಲಿ ಹೆಚ್ಚು ಭೇಟಿ ನೀಡುವ ತೀರ್ಥಯಾತ್ರೆಗಳಲ್ಲಿ ಒಂದಾಗಿದೆ. ಈ ದೇವಾಲಯವು ಶ್ರೇಷ್ಠ ಇತಿಹಾಸ ಮತ್ತು ಶ್ರೀಮಂತ ಪರಂಪರೆಯನ್ನು ಹೊಂದಿದೆ. ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸದಿದ್ದರೆ ತಿರುಪತಿಗೆ ಹೋಗುವುದು ಪೂರ್ಣವಾಗುವುದಿಲ್ಲ.
-
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ












Click it and Unblock the Notifications