Tirumala: ತಿರುಪತಿ ತಿಮ್ಮಪ್ಪನ ಭಕ್ತರಿಗೆ ಅನ್ನಪ್ರಸಾದ ಜೊತೆಗೆ ಮಸಾಲೆ ವಡೆ ಸವಿ ನೀಡಿದ ಟಿಟಿಡಿ
ವಿಶ್ವವಿಖ್ಯಾತ ತಿರುಪತಿ ತಿರುಮಲ ದೇವಸ್ಥಾನದಲ್ಲಿ ನೀಡುವ ಅನ್ನಪ್ರಸಾದದ ಮೆನುವಿನಲ್ಲಿ ಹೊಸ ಖಾದ್ಯ ಸೇರ್ಪಡೆಯಾಗಿದ್ದು ಅದರ ರುಚಿಯನ್ನು ಭಕ್ತರು ಸವಿದಿದ್ದಾರೆ. ಕಳೆದ ದಿನ ಗುರುವಾರ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಭಕ್ತರಿಗೆ ಅನ್ನಪ್ರಸಾದದೊಂದಿಗೆ ಮಸಾಲೆ ವಡೆಯನ್ನು ನೀಡಲಾಗಿದೆ.
ಹೌದು... ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಟ್ರಸ್ಟ್ ತಿಮ್ಮಪ್ಪನ ಭಕ್ತರಿಗೆ ಹೊಸ ಖ್ಯಾದದ ಸವಿ ನೀಡಿದೆ. ಇದರಿಂದ ಭಕ್ತರು ಖುಷಿಯಾಗಿದ್ದು ತಿಮ್ಮಪ್ಪನ ದರ್ಶನದ ಬಳಿಕ ಅನ್ನಪ್ರಸಾದದೊಂದಿಗೆ ಮಸಾಲೆ ವಡೆಯನ್ನು ಸವಿದು ಖುಷಿಯಾಗಿದ್ದಾರೆ.

ಯಾತ್ರಾರ್ಥಿಗಳಿಗೆ ಊಟದ ಅನುಭವವನ್ನು ಹೆಚ್ಚಿಸುವ ಗುರಿಯಿಂದ ಟಿಟಿಡಿ ಅಧ್ಯಕ್ಷ ಬಿಆರ್ ನಾಯ್ಡು, ಕಾರ್ಯನಿರ್ವಾಹಕ ಅಧಿಕಾರಿ (ಇಒ) ಜೆ ಶ್ಯಾಮಲಾ ರಾವ್ ಮತ್ತು ಹೆಚ್ಚುವರಿ ಇಒ ಸಿಎಚ್ ವೆಂಕಯ್ಯ ಚೌಧರಿ ಅವರು ಸರ್ಕಾರದ ಮುಂದೆ ಈ ಉಪಕ್ರಮವನ್ನು ಪ್ರಸ್ತಾಪಿಸಿದರು.
ಬಿಆರ್ ನಾಯ್ಡು ಪ್ರಸ್ತಾವನೆಗೆ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅನುಮೋದನೆ ನೀಡಿದರು. ಸರ್ಕಾರದ ಅನುಮೋದನೆ ಬಳಿಕ ಮಸಾಲ ವಡೆಯನ್ನು ಭಕ್ತರಿಗೆ ಕಳೆದ ದಿನದಿಂದ ವಿತರಿಸಲಾಗುತ್ತಿದೆ. ನಿತ್ಯ ಅನ್ನಪ್ರಸಾದ ಸೇವಿಸುವ ಸಾವಿರಾರು ಭಕ್ತರಿಗೆ ಮಸಾಲೆ ವಡೆಯನ್ನು ನೀಡಲಾಗಿದೆ.
ಸಾಮಾನ್ಯವಾಗಿ ಹಿಂದೂಗಳು ಪ್ರಸಾದದಲ್ಲಿ ಈರುಳ್ಳಿ ಬೆಳ್ಳುಳ್ಳಿ ಸೇವಿಸುವುದಿಲ್ಲ. ಹೀಗಾಗಿ ಅದನ್ನು ಹಾಕಿ ದೇವಸ್ಥಾನಗಳಲ್ಲಿ ಪ್ರಸಾದ ತಯಾರಿಸುವುದಿಲ್ಲ. ಇದಲ್ಲದೆ ಹಿಂದೂ ದೇವರಿಗೆ ಸಾಕಷ್ಟು ಆಹಾರ ನೈವೇದ್ಯ ಮಾಡಿದರೂ ಅದರಲ್ಲಿ ಈರುಳ್ಳಿ, ಬೆಳ್ಳುಳ್ಳಿ ಇರುವುದಿಲ್ಲ. ಈರುಳ್ಳಿ ಬೆಳ್ಳುಳ್ಳಿಯನ್ನು ತಾಮಸಿಕ ಆಹಾರ ಎಂದು ದೂರವಿಡಲಾಗುತ್ತದೆ. ಹೀಗಾಗಿ ತಿರುಪತಿಯಲ್ಲಿ ಪ್ರಸಾದವಾಗಿ ನೀಡುವ ಮಸಾಲ ವಡೆಯಲ್ಲೂ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಹಾಕದೆ ತಯಾರಿಸಲಾಗುತ್ತದೆ.
ಈ ಮಸಾಲ ವಡೆಯನ್ನು ಬೇಳೆ, ಹಸಿರು ಮೆಣಸಿನಕಾಯಿ, ಶುಂಠಿ, ಕರಿಬೇವು, ಕೊತ್ತಂಬರಿ ಸೊಪ್ಪು ಮತ್ತು ಪುದೀನದೊಂದಿಗೆ ರುಚಿ ರುಚಿಯಾಗಿ ತಯಾರಿಸಲಾಗುತ್ತದೆ. ಇದನ್ನು ಅನ್ನ, ಸಾಂಬಾರ್, ರಸಂ, ಚಟ್ನಿ, ಮೊಸರು, ಕರಿ, ಸಿಹಿ ಪೊಂಗಲ್ ಮತ್ತು ಹಪ್ಪಳದೊಂದಿಗೆ ಬಡಸಲಾಗುತ್ತದೆ.
ತಿರುಪತಿಯ ಅನ್ನಪ್ರಸಾದ ಕೇಂದ್ರದಲ್ಲಿ ಪ್ರತಿದಿನ ಬೆಳಿಗ್ಗೆ 10.30 ರಿಂದ ಸಂಜೆ 4.00 ರವರೆಗೆ 35,000 ವಡೆಗಳನ್ನು ಬಡಿಸಲಾಗುವುದು. ರುಚಿ ಮತ್ತು ಆರೋಗ್ಯವನ್ನು ಗಮನದಲ್ಲಿ ಇಟ್ಟುಕೊಂಡು ಉತ್ತಮ ಗುಣಮಟ್ಟದ ಪದಾರ್ಥಗಳನ್ನು ಮಸಾಲ ವಡೆಯಲ್ಲಿ ಬಳಕೆ ಮಾಡಲಾಗುತ್ತಿದೆ.
1985ರಲ್ಲಿ ಮಾಜಿ ಮುಖ್ಯಮಂತ್ರಿ ಎನ್.ಟಿ. ರಾಮರಾವ್ ಅವರ ಅಡಿಯಲ್ಲಿ ಅನ್ನಪ್ರಸಾದ ಸಂಪ್ರದಾಯವನ್ನು ಪ್ರಾರಂಭಿಸಲಾಯಿತು. ಅಂದಿನಿಂದ ಈವರೆಗೂ ನಿತ್ಯ ಅನ್ನದಾನ ಮಾಡಲಾಗುತ್ತಿದೆ. ಪ್ರತಿದಿನ 2,000 ಯಾತ್ರಾರ್ಥಿಗಳಿಗೆ ಅನ್ನ ಸೇವೆ ಸಲ್ಲಿಸುತ್ತಿತ್ತು. 2014ರ ಹೊತ್ತಿಗೆ ಇದು ಶ್ರೀ ವೆಂಕಟೇಶ್ವರ ಅನ್ನಪ್ರಸಾದ ಟ್ರಸ್ಟ್ ಆಗಿ ವಿಕಸನಗೊಂಡಿದೆ. ನಂತರ ಇದು ಜಾಗತಿಕ ಭಕ್ತರ ದೇಣಿಗೆಗಳಿಂದ ಹಣವನ್ನು ಪಡೆಯಲಾರಂಭಿಸಿತು. ವೈಕುಂಠ ಏಕಾದಶಿ ಮತ್ತು ಹೊಸ ವರ್ಷದಂತಹ ಸಂದರ್ಭಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಭಕ್ತರು ಉಚಿತ ಊಟವನ್ನು ಮಾಡುತ್ತಾರೆ.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications