ತುಘ್ಲಕ್ ಕೂಡಾ ನೋಟ್ ಬ್ಯಾನ್ ಮಾಡಿದ್ದ, ಮೋದಿಗೆ ಯಶವಂತ್ ಸಿನ್ಹಾ ಟಾಂಗ್
ಅಹಮದಾಬಾದ್, ನವೆಂಬರ್ 15: 14ನೇ ಶತಮಾನದ ದೆಹಲಿಯ ಸುಲ್ತಾನ್ ಮೊಹಮ್ಮದ್ ಬಿನ್ ತುಘ್ಲಕ್ ಕೂಡಾ ನೋಟ್ ಬ್ಯಾನ್ ಮಾಡಿದ್ದ ಎಂದು ಹೇಳಿರುವ ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅಹಮದಾಬಾದ್ ನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಅಪನಗದೀಕರಣದಿಂದ ದೇಶದ ಆರ್ಥಿಕತೆಗೆ 3.75 ಲಕ್ಷ ಕೋಟಿ ನಷ್ಟವಾಗಿದೆ ಎಂದು ಹೇಳಿದ್ದಾರೆ.

"ಹಲವು ರಾಜರು ಅವರದ್ದೇ ಕರೆನ್ಸಿಗಳನ್ನು ತಂದಿದ್ದಾರೆ. ಮೊಹಮ್ಮದ್ ಬಿನ್ ತುಘ್ಲಕ್ ತನ್ನದೇ ಆದ ಕರೆನ್ಸಿ ಹೊರ ತಂದಿದ್ದ. ಹೀಗಾಗಿ 700 ವರ್ಷಗಳ ಹಿಂದೆಯೇ ಅಪನಗದೀಕರಣ ನಡೆದಿತ್ತು ಎಂದು ಹೇಳಬಹುದು. ತುಘ್ಲಕ್ ದೆಹಲಿಯಿಂದ ದೌಲತಾಬಾದ್ ಗೆ ರಾಜಧಾನಿ ಶಿಫ್ಟ್ ಮಾಡಿಯೂ ಜನಪ್ರಿಯನಾಗಿದ್ದ," ಎಂದು ಸಿನ್ಹಾ ಹೇಳಿದ್ದಾರೆ.
'ಲೋಕಶಾಹಿ ಬಚಾವೋ ಅಭಿಯಾನ್' ಆಯೋಜಿಸಿದ್ದ ಕಾರ್ಯಕ್ರಮ ಉದ್ದೇಶಿಸಿ ಮಂಗಳವಾರ ಮಾತನಾಡಿದ ಅವರು ಕೇಂದ್ರ ಸರಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
"ನಿರುದ್ಯೋಗ ದೇಶದ ಅತೀ ದೊಡ್ಡ ಸಮಸ್ಯೆಯಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ದೇಶದ ಆರ್ಥಿಕತೆಗೆ ಏನನ್ನಾದರೂ ಮಾಡಲು ಅತೀ ಕಡಿಮೆ ಸಮಯ ಉಳಿದಿದೆ," ಎಂದು ಹೇಳಿದ್ದಾರೆ.
'ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ'ಯ ವರದಿಯನ್ನು ಉಲ್ಲೇಖಿಸಿದ ಬಿಜೆಪಿ ನಾಯಕ ಸಿನ್ಹಾ, "ನೋಟ್ ಬ್ಯಾನ್ ನಿಂದ ನೋಟ್ ಮುದ್ರಣ ಮಾಡಲು 1,28,000 ಕೋಟಿ ರೂಪಾಯಿ ನೇರ ಖರ್ಚಾಗಿದೆ. ಅಪನಗದೀಕರಣದಿಂದ ದೇಶದ ಆರ್ಥಿಕತೆ ಶೇ. 1.5 ಕುಸಿತವಾಗಿದೆ ಎಂದುಕೊಂಡರೂ ಒಟ್ಟಾರೆ ಆರ್ಥಿಕತೆಗೆ 2,25,000 ಸಾವಿರ ಕೋಟಿ ನಷ್ಟವಾಗಿದೆ," ಎಂದಿದ್ದಾರೆ. ಒಟ್ಟಾರೆ 3.75 ಲಕ್ಷ ಕೋಟಿ ನಷ್ಟವಾಗಿದೆ ಎಂದು ಸಿನ್ಹಾ ಅಂದಾಜಿಸಿದ್ದಾರೆ.
ಇವೆಲ್ಲಾ ನೇರ ನಷ್ಟಗಳು, ಪರೋಕ್ಷ ನಷ್ಟಗಳನ್ನು ಲೆಕ್ಕ ಹಾಕಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications