ಇಂಡಿಯಾ ಟುಡೇಯಲ್ಲಿ ಸದ್ಯಕ್ಕೆ ರಾಜ್ ದೀಪ್ ಸರ್ದೇಸಾಯಿ ಕಾಣಿಸಲ್ಲವೇಕೆ?
ಮುಂಬೈ, ಜನವರಿ 28: ದೇಶದ ಸೆಲೆಬ್ರಿಟಿ ಮಾಧ್ಯಮ ಪ್ರತಿನಿಧಿ, ಟಿವಿ ನಿರೂಪಕ, ''ವರದಿಗಾರ'' ಇಂಡಿಯಾ ಟುಡೇ ಕನ್ಸಲ್ಟಿಂಗ್ ಸಂಪಾದಕ ರಾಜ್ ದೀಪ್ ಸರ್ದೇಸಾಯಿ ಅವರು ಸುದ್ದಿವಾಹಿನಿಯಲ್ಲಿ ಸದ್ಯಕ್ಕೆ ಕಾಣಿಸುತ್ತಿಲ್ಲ. ಎರಡು ವಾರಗಳ ಕಾಲ ಯಾವುದೇ ಇಂಡಿಯಾ ಟುಡೇ ಸ್ಕ್ರೀನ್ ನಲ್ಲಿ ಕಾಣಿಸದಂತೆ ನಿರ್ಬಂಧ ವಿಧಿಸಲಾಗಿದೆ. ಆದರೆ, ಈ ಬೆಳವಣಿಗೆಯಿಂದ ಬೇಸತ್ತು ಸರ್ದೇಸಾಯಿ ಅವರು ಇಂಡಿಯಾ ಟುಡೇ ತೊರೆದಿದ್ದಾರೆ ಎಂಬ ಸುದ್ದಿಯೂ ಇದೆ. ಆದರೆ, ಈ ಬಗ್ಗೆ ಖಚಿತ ಮಾಹಿತಿಯಿಲ್ಲ.
ಇಂಡಿಯಾ ಟುಡೇ ಸಂಸ್ಥೆಯ ಸಾಮಾಜಿಕ ಜಾಲ ತಾಣ ನೀತಿ ನಿಯಮಗಳನ್ನು ಮೀರಿದ್ದರಿಂದ ರಾಜ್ ದೀಪ್ ಅವರಿಗೆ ಎರಡು ವಾರಗಳ ನಿರ್ಬಂಧ ಶಿಕ್ಷೆ ವಿಧಿಸಲಾಗಿದೆ.
While the farm protestors claim that the deceased Navneet Singh was shot at by Delhi police while on a tractor, this video clearly shows that the tractor overturned while trying to break the police barricades. The farm protestors allegations don’t stand. Post mortem awaited.👇 pic.twitter.com/JnuU05psgR
— Rajdeep Sardesai (@sardesairajdeep) January 26, 2021
ವರದಿಗಳ ಪ್ರಕಾರ, ಜನವರಿ 26ರಂದು ನವದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ಪ್ರತಿಭಟನೆ ವೇಳೆ ಮೃತಪಟ್ಟ ವ್ಯಕ್ತಿಯೊಬ್ಬನ ಬಗ್ಗೆ ಸರ್ದೇಸಾಯಿ ಮಾಡಿದ್ದ ಟ್ವೀಟ್ ಸುಳ್ಳು ಸುದ್ದಿ ಹಬ್ಬಿಸಿದ್ದಂತಾಗಿದೆ ಎಂಬುದನ್ನು ಸಾರ್ವಜನಿಕರು ಎತ್ತಿ ತೋರಿಸಿದ್ದರು.

"One person, 45-year-old Navneet, was killed allegedly in police firing at ITO. Farmers tell me: the 'sacrifice' will not go in vain,"
ಎಂದು ರಾಜದೀಪ್ ಈ ಟ್ವೀಟ್ ಮಾಡಿದ್ದರು ನಂತರ ಟ್ವೀಟ್ ಬಗ್ಗೆ ಆಕ್ಷೇಪ ಬಂದ ಮೇಲೆ ಟ್ವೀಟ್ ಡಿಲೀಟ್ ಮಾಡಿದ್ದರು. ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.
ನಂತರ ದೆಹಲಿ ಪೊಲೀಸರು ಟ್ರ್ಯಾಕ್ಟರ್ ಚಾಲಕ ವೇಗವಾಗಿ ಬ್ಯಾರಿಕೇಡ್ ಕಡೆ ಚಲಿಸಿ ಗುದ್ದಿದ್ದ ವಿಡಿಯೋವನ್ನು ಬಿಡುಗಡೆ ಮಾಡಿದ್ದರು. ದೆಹಲಿಯ ಐಟಿಒ ಬಳಿ ನಡೆದ ಈ ಘಟನೆ ರಾಜದೀಪ್ ಅವರು ತಪ್ಪು ರೀತಿಯಲ್ಲಿ ವರದಿ ಮಾಡಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದರು.
ಮೃತ ವ್ಯಕ್ತಿಯ ಮೇಲೆ ತ್ರಿವರ್ಣ ಧ್ವಜ ಹೊದೆಸಿದ್ದ ರೈತರು, ವರದಿಗಾರರಾಗಿ ಕಣಕ್ಕಿಳಿದಿದ್ದ ರಾಜದೀಪ್ ಸೇರಿದಂತೆ ಮಾಧ್ಯಮ ಪ್ರತಿನಿಧಿಗಳಿಗೆ ಘಟನಾ ಸ್ಥಳಕ್ಕೆ ಬಂದು ವರದಿ ಮಾಡಲು ಬಿಡದೆ ಆಕ್ರೋಶ ವ್ಯಕ್ತಪಡಿಸಿದ್ದರು.
ಟ್ರ್ಯಾಕ್ಟರ್ ಸವಾರನಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆದರೆ ಸಾವಿಗೆ ಕಾರಣ ಮರಣೋತ್ತರ ಪರೀಕ್ಷೆ ನಂತರ ತಿಳಿಯುತ್ತದೆ ಎಂದು ರಾಜದೀಪ್ ಟ್ವೀಟ್ ಮಾಡಿದ್ದು, ಇನ್ನೂ ಹಾಗೆ ಇದೆ
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications