ದೆಹಲಿ, ಮುಂಬೈ, ಗೋವಾ ಮೇಲೆ ಎರಡೆರಡು ಭಯೋತ್ಪಾದನಾ ದಾಳಿ ಎಚ್ಚರಿಕೆ
ನವದೆಹಲಿ, ಮಾರ್ಚ್ 25: ದೆಹಲಿ, ಮುಂಬೈ ಮತ್ತು ಗೋವಾದಲ್ಲಿ ಇಸ್ಲಾಮಿಕ್ ಸ್ಟೇಟ್ ಹಾಗೂ ಅಲ್ ಖೈದಾ ಭಯೋತ್ಪಾದನಾ ಸಂಘಟನೆಗಳಿಂದ ಎರಡೆರಡು ದಾಳಿಗಳು ನಡೆಯುವ ಬೆದರಿಕೆ ಇದೆ ಎಂದು ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿವೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ನ್ಯೂಜಿಲೆಂಡ್ನಲ್ಲಿ ನಡೆದ ಗುಂಡಿನ ದಾಳಿಗೆ ಪ್ರತೀಕಾರವಾಗಿ ಯಹೂದಿ ಕಟ್ಟಡಗಳ ಮೇಲೆ ದಾಳಿ ನಡೆಸುವ ಅಪಾಯವಿದೆ ಎಂದು ಎರಡು ವರದಿಗಳು ಎಚ್ಚರಿಸಿವೆ.
ದಾಳಿಯಲ್ಲಿ ಉಗ್ರರು ವಾಹನ ಅಥವಾ ಚಾಕುವನ್ನು ಬಳಸುವ ಸಾಧ್ಯತೆ ಇದೆ ಎಂದು ಅದು ಹೇಳಿದೆ. ಮುಂಬೈನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ, ಕಾನ್ಸುಲೇಟ್ ಜನರಲ್, ಸಭಾಮಂದಿರಗಳು ಮತ್ತು ಚಬಾಡ್ ಮನೆಗಳ ಸುತ್ತಮುತ್ತ ತೀವ್ರ ಕಟ್ಟೆಚ್ಚರ ವಹಿಸುವಂತೆ ಗುಪ್ತಚರ ಸಂಸ್ಥೆಗಳು ಸಲಹೆ ನೀಡಿವೆ.

ಮಾರ್ಚ್ 20 ರಂದು ನೀಡಿರುವ ಮೊದಲ ಎಚ್ಚರಿಕೆಯಲ್ಲಿ ಇಸ್ಲಾಮಿಕ್ ಸ್ಟೇಟ್ ಮತ್ತು ಅದಕ್ಕೆ ಸಂಬಂಧಿಸಿದ ಘಟಕಗಳು ಕ್ರೈಸ್ಟ್ಚರ್ಚ್ ದಾಳಿಯಲ್ಲಿ 50 ಮುಸ್ಲಿಮರ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಸಂಚು ರೂಪಿಸಿರುವುದಾಗಿ ತಿಳಿಸಲಾಗಿದೆ.
'ವಿವಿಧ ಮೂಲಗಳಿಂದ ಪಡೆದುಕೊಂಡಿರುವ ಮಾಹಿತಿಗಳ ಪ್ರಕಾರ, ಐಎಸ್ ವಕ್ತಾರ ಅಬು ಹಸನ್ ಅಲ್ ಮುಜಾಹಿರ್ ಮಾಡಿರುವ ಭಾಷಣವು ಅಂತರ್ಜಾಲ ಗುಂಪುಗಳು ಮತ್ತು ಚಾಟ್ ಪ್ಲಾಟ್ಫಾರಂಗಳಲ್ಲಿ ಹಡಿದಾಡುತ್ತಿವೆ. ಮಸೀದಿಗಳ ಮೇಲೆ ನಡೆದ ಹತ್ಯಾಕಾಂಡಕ್ಕೆ ಸೇಡು ತೀರಿಸಿಕೊಳ್ಳಲು ಮುಜಾಹಿರ್ ತನ್ನ ಬೆಂಬಲಿಗರಿಗೆ ಕರೆ ನೀಡಿದ್ದಾನೆ. ಈ ಆಡಿಯೋ ಮತ್ತು ಇತರೆ ಸಂಭಾಷಣೆಗಳು ಘಟನೆಯ ಪ್ರತೀಕಾರ ತೀರಿಸಿಕೊಳ್ಳುವ ಉದ್ದೇಶವನ್ನು ಸೂಚಿಸುತ್ತದೆ' ಎಂದು ವರದಿ ತಿಳಿಸಿದೆ.
ಪ್ರಾರ್ಥನಾ ಮಂದಿರಗಳ ಹೊರಭಾಗಗಳಲ್ಲಿ ಭದ್ರತಾ ನಿಯೋಜನೆಯನ್ನು ಹೆಚ್ಚಿಸಲಾಗಿದೆ. ಬೆಳವಣಿಗೆಗಳ ಮೇಲೆ ಹದ್ದಿನ ಕಣ್ಣು ಇರಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಮಾರ್ಚ್ 23ರಂದು ನೀಡಲಾಗಿರುವ ಮತ್ತೊಂದು ವರದಿಯಲ್ಲಿ, ಯಹೂದಿಗಳ ನಿವಾಸ ಕಟ್ಟಡಗಳು ಅಥವಾ ಸಭಾಭವನಗಳು, ಪ್ರಾರ್ಥನಾ ಮಂದಿರಗಳ ಮೇಲೆ ಅಲ್ ಖೈದಾ ಘಟಕ ದಾಳಿ ನಡೆಸುವ ಬಗ್ಗೆ ಎಚ್ಚರಿಕೆ ಕೊಡಲಾಗಿದೆ.
ಅಸಂಪ್ರದಾಯಿಕ ಆಯುಧ ಬಳಸಿ ದಾಳಿ ನಡೆಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ದಾಳಿಯು ಒಬ್ಬ ವ್ಯಕ್ತಿ ಚಾಕು ಅಥವಾ ವಾಹನ ಬಳಸಿ ನಡೆಸುವ ಸಾಧ್ಯತೆ ಇದೆ. ಗೋವಾದಲ್ಲಿ ದಾಳಿ ನಡೆಸಬಹುದಾದ ಕೆಲವು ಸ್ಥಳಗಳನ್ನು ಅದು ಉಲ್ಲೇಖಿಸಿದೆ.
ಗುಪ್ತಚರ ಇಲಾಖೆಗಳು ನೀಡಿರುವ ಸ್ಥಳಗಳಲ್ಲದೆ ಇತರೆ ಪ್ರಮುಖ ಸ್ಥಳಗಳಲ್ಲಿಯೂ ಭದ್ರತೆ ಹೆಚ್ಚಿಸಲಾಗಿದೆ. ಇಸ್ರೇಲ್ ರಾಯಭಾರ ಕಚೇರಿ ಮುಂಭಾಗದ ಭದ್ರತೆಯನ್ನು ಪರಿಶೀಲಿಸಲಾಗಿದೆ. ಅನುಮಾನಾಸ್ಪದ ವಾಹನಗಳ ಮೇಲೆ ಕಣ್ಣಿಡಲಾಗುತ್ತಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications