ಟ್ವಿಟ್ಟರ್ ಉದ್ದೇಶಪೂರ್ವಕವಾಗಿಯೇ ನಿಯಮ ಪಾಲಿಸುತ್ತಿಲ್ಲ: ರವಿಶಂಕರ್ ಪ್ರಸಾದ್
ನವದೆಹಲಿ, ಜೂನ್ 16: ಹೊಸ ಐಟಿ ನಿಯಮಗಳನ್ನು ಅನುಸರಿಸಲು ಟ್ವಿಟ್ಟರ್ ವಿಫಲವಾಗಿದೆ. ಅನೇಕ ಅವಕಾಶಗಳನ್ನು ನೀಡಿದ್ದರೂ ಉದ್ದೇಶಪೂರ್ವಕವಾಗಿ ಪಾಲಿಸದಿರುವ ನಿರ್ಧಾರವನ್ನು ತೆಗೆದುಕೊಂಡಂತಿದೆ ಎಂದು ಐಟಿ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಹೊಸ ಐಟಿ ನಿಯಮ ಪಾಲಿಸದ ಬಗ್ಗೆ ಕೂನಲ್ಲಿ ಸರಣಿ ಟ್ವೀಟ್ ಮಾಡಿರುವ ಮಾಡಿರುವ ಪ್ರಸಾದ್, ತಮ್ಮನ್ನು ತಾವು ವಾಕ್ಚಾತುರ್ಯದ ಧ್ವಜ ಧಾರಕ ಎಂದು ಬಿಂಬಿಸಿಕೊಳ್ಳುವ ಟ್ವಿಟರ್, ಮಧ್ಯವರ್ತಿ ಮಾರ್ಗಸೂಚಿಗಳಿಗೆ ಬಂದಾಗ ಉದ್ದೇಶಪೂರ್ವಕವಾಗಿ ಧಿಕ್ಕರಿಸುವ ಮಾರ್ಗವನ್ನು ಆರಿಸಿಕೊಳ್ಳುವುದು ಆಶ್ಚರ್ಯಕರವಾಗಿದೆ ಎಂದು ಬರೆದುಕೊಂಡಿದ್ದಾರೆ.
ಹೊಸ ಮಾರ್ಗಸೂಚಿಗಳ ಅಳವಡಿಕೆಗೆ ಟ್ವಿಟ್ಟರ್ ಹೆಚ್ಚಿನ ಕಾಲಾವಕಾಶ ಕೋರಿತ್ತು. ಆದರೆ ನಮ್ಮ ನಿರಂತರ ಮನವಿಗಳು ಹಾಗೂ ಸಮಯ ವಿಸ್ತರಣೆಯಾಚೆಗೂ ಐಟಿ ನಿಯಮಗಳನ್ನು ಒಪ್ಪಿಕೊಳ್ಳಲು ಅದು ವಿಫಲವಾಗಿದೆ.

ಇದರೊಂದಿಗೆ ಟ್ವಿಟ್ಟರ್, ಭಾರತದಲ್ಲಿನ ತನ್ನ ಕಾನೂನಾತ್ಮಕ ರಕ್ಷಣೆಯನ್ನು ಕಳೆದುಕೊಂಡಿದೆ. ಇನ್ನು ಮುಂದೆ ಅದು ಯಾವುದೇ ಮೂರನೇ ವ್ಯಕ್ತಿಯ ವಿಚಾರಗಳಿಗೆ ಐಪಿಸಿ ಅಡಿಯಲ್ಲಿ ಕಾನೂನು ಕ್ರಮ ಎದುರಿಸಲು ಅರ್ಹವಾಗಿದೆ' ಎಂದು ಸರಕಾರದ ಮೂಲಗಳು ತಿಳಿಸಿವೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ನಿಯಮಗಳನ್ನು ಅನುಸರಿಸಲು ಟ್ವಿಟರ್ಗೆ ಅನೇಕ ಅವಕಾಶಗಳನ್ನು ನೀಡಲಾಗಿದೆ ಎಂದು ಪ್ರಸಾದ್ ಪ್ರತಿಪಾದಿಸಿದರು. ಆದರೆ ಉದ್ದೇಶಪೂರ್ವಕವಾಗಿ ಪಾಲಿಸದಿರುವ ಹಾದಿಯನ್ನು ಆರಿಸಿಕೊಂಡಿದೆ ಎಂದರು.
'ಸುರಕ್ಷಿತ ಬಂದರು ನಿಬಂಧನೆಗೆ ಟ್ವಿಟರ್ಗೆ ಅರ್ಹತೆ ಇದೆಯೇ ಎಂಬ ಬಗ್ಗೆ ಹಲವಾರು ಪ್ರಶ್ನೆಗಳು ಉದ್ಭವಿಸುತ್ತಿವೆ. ಆದಾಗ್ಯೂ, ಈ ವಿಷಯವಾಗಿ ಹೇಳಬೇಕೆಂದರೆ ಮೇ 26ರಿಂದ ಜಾರಿಗೆ ಬಂದ ಮಧ್ಯವರ್ತಿ ಮಾರ್ಗಸೂಚಿಗಳನ್ನು ಅನುಸರಿಸಲು ಟ್ವಿಟರ್ ವಿಫಲವಾಗಿದೆ ಎಂದು ಪ್ರಸಾದ್ ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications