ನೆಲದ ಕಾನೂನು ಪಾಲಿಸುವಲ್ಲಿ ಟ್ವಿಟ್ಟರ್ ಸೋತಿದೆ; ಕೇಂದ್ರ
ನವದೆಹಲಿ, ಜುಲೈ 05: "ದೇಶದ ನೂತನ ಐಟಿ ನಿಯಮಗಳನ್ನು ಪಾಲಿಸುವಲ್ಲಿ ಸಾಮಾಜಿಕ ಜಾಲತಾಣ ಕಂಪನಿ ಟ್ವಿಟ್ಟರ್ ಇಂಕ್ ವಿಫಲವಾಗಿದೆ" ಎಂದು ಕೇಂದ್ರ ಸರ್ಕಾರ ಸೋಮವಾರ ದೆಹಲಿ ಹೈಕೋರ್ಟ್ಗೆ ತಿಳಿಸಿದೆ.
"ಸರ್ಕಾರ ರೂಪಿಸಿರುವ ಐಟಿ ನಿಯಮಗಳು ಈ ನೆಲದ ಕಾನೂನಾಗಿದ್ದು, ಅವುಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆದರೆ ಇದರ ಉಲ್ಲಂಘನೆಯಾಗಿದೆ. ಐಟಿ ನಿಯಮಗಳ ಕುರಿತು ಎಲ್ಲಾ ಸಾಮಾಜಿಕ ಜಾಲತಾಣಗಳಿಗೆ ಮೂರು ತಿಂಗಳ ಗಡುವು ನೀಡಲಾಗಿದೆ. ಇದಾಗ್ಯೂ ಟ್ಬಿಟ್ಟರ್ ಈ ನಿಯಮಗಳ ಪಾಲನೆ ಮಾಡುವಲ್ಲಿ ಸೋತಿದೆ" ಎಂದು ಕೇಂದ್ರ ಹೇಳಿದೆ.
ಹೈಕೋರ್ಟ್ಗೆ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಸರ್ಕಾರ, "ಯಾವುದೇ ನಿಯಮಗಳನ್ನು ಪಾಲಿಸದೇ ಇರುವುದು ಕಾನೂನಿನ ಉಲ್ಲಂಘನೆ. ಇದು ಐಟಿ ಕಾಯ್ದೆಯಡಿ ನೀಡಲಾಗುವ ಪ್ರತಿರಕ್ಷೆಯನ್ನು ಕಳೆದುಕೊಳ್ಳಲು ಟ್ವಿಟ್ಟರ್ಗೆ ಕಾರಣವಾಗಲಿದೆ" ಎಂದು ತಿಳಿಸಿದೆ.

ಜುಲೈ 1ರ ವೇಳೆಗೆ ಟ್ವಿಟ್ಟರ್, ಮುಖ್ಯ ಕುಂದು ಕೊರತೆ ಅಧಿಕಾರಿ, ಅನುಸರಣಾ ಅಧಿಕಾರಿ, ನೋಡಲ್ ಸಂಪರ್ಕಾಧಿಕಾರಿಗಳನ್ನು ನೇಮಿಸಬೇಕಿತ್ತು. ಆದರೆ ನೇಮಿಸಿಲ್ಲ. ಜೊತೆಗೆ ಕಡ್ಡಾಯವಾಗಿ ತನ್ನ ವೆಬ್ಸೈಟ್ನಲ್ಲಿ ಸಂಪರ್ಕ ವಿಳಾಸವನ್ನು ನಮೂದಿಸಬೇಕಿತ್ತು. ಅದು ಕೂಡ ವೆಬ್ಸೈಟ್ನಲ್ಲಿಲ್ಲ. ಈ ನಿಯಮಗಳೆಲ್ಲವೂ ಇಲ್ಲಿನ ನೆಲದ ಕಾನೂನಾಗಿದ್ದು, ಸ್ಯಾನ್ಫ್ರಾನ್ಸಿಸ್ಕೊ ಮೂಲದ ಈ ಕಂಪನಿ ಪಾಲಿಸಲೇಬೇಕಿದೆ ಎಂದು ಅಫಿಡವಿಟ್ನಲ್ಲಿ ಉಲ್ಲೇಖಿಸಿದೆ.
ಐಟಿ ನಿಯಮಗಳ ಕುರಿತಂತೆ ಕೆಲವು ತಿಂಗಳುಗಳಿಂದ ಟ್ವಿಟ್ಟರ್ ಹಾಗೂ ಕೇಂದ್ರ ಸರ್ಕಾರದ ನಡುವೆ ಜಗ್ಗಾಟ ನಡೆಯುತ್ತಿದೆ. ಫೆಬ್ರವರಿ 25ರಂದು ಹೊಸ ಐಟಿ ನಿಯಮಗಳನ್ನು ರೂಪಿಸಲಾಗಿದ್ದು, ಟ್ವಿಟ್ಟರ್ಗೆ ಮೇ 25ರವರೆಗೂ ಗಡುವು ನೀಡಲಾಗಿತ್ತು.
ಜುಲೈ 6ಕ್ಕೆ ವಿಚಾರಣೆ ಮುಂದೂಡಲಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications