ಮತ್ತೆ ಚರ್ಚೆಗೆ ಬಂತು ಲಡಾಖ್ ಚೀನಾದ ಭಾಗವೆಂದು ತೋರಿಸಿದ್ದ ಟ್ವಿಟ್ಟರ್ ವಿವಾದಿತ ವಿಡಿಯೋ
ನವದೆಹಲಿ, ಮೇ 31: ಲಡಾಖ್ ಚೀನಾದ ಒಂದು ಭಾಗ ಎಂದು ತೋರಿಸಿದ್ದ ಟ್ವಿಟ್ಟರ್ನ ವಿವಾದಿತ ವಿಡಿಯೋ ಮತ್ತೆ ಮುನ್ನಲೆಗೆ ಬಂದಿದೆ. ಐಟಿ ನಿಯಮಗಳ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಈ ವಿಡಿಯೋ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಆಗುತ್ತಿದೆ.
ಟ್ವಿಟ್ಟರ್ 2020ರಲ್ಲಿ ಲಡಾಖ್ನ್ನು ಚೀನಾ ಭೂಭಾಗವೆಂದು ಹೇಳಿರುವ ವಿಡಿಯೋವನ್ನು ಹರಿಬಿಟ್ಟಿತ್ತು. ಸಾಕಷ್ಟು ವಿರೋಧಗಳು ವ್ಯಕ್ತವಾದ ಬೆನ್ನಲ್ಲೇ ಕ್ಷಮೆ ಕೇಳಿ ವಿಡಿಯೋವನ್ನು ಡಿಲೀಟ್ ಮಾಡಿತ್ತು. ಆದರೆ ಇದೀಗ ಮತ್ತೊಮ್ಮೆ ಅದೇ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಈಗಾಗಲೇ ನೂತನ ಐಟಿ ನಿಯಮದ ಪ್ರಕಾರ ಫೇಸ್ಬುಕ್ ಹಾಗೂ ವಾಟ್ಸಾಪ್ ತನ್ನಲ್ಲಾ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಒದಗಿಸಿದೆ ಆದರೆ ಟ್ವಿಟ್ಟರೂ ಇನ್ನೂ ಯಾವುದೇ ದಾಖಲೆಗಳನ್ನು ನೀಡಿಲ್ಲ.

ಕಳೆದ ವರ್ಷ ಟ್ವಿಟ್ಟರ್ ಜಮ್ಮು ಕಾಶ್ಮೀರವನ್ನು ಚೀನಾದ ಭಾಗವೆಂದು ಹೇಳಿದ್ದಷ್ಟೇ ಅಲ್ಲದೆ, ಲೇಹ್ನಲ್ಲಿರುವ ನಿತಿನ್ ಗೋಖಲೆ ವಾರ್ ಮೆಮೋರಿಯಲ್ ಕೂಡ ಚೀನಾದ ಭಾಗ ಎಂದು ಹೇಳಿಕೆ ನಿಡಿತ್ತು.
ಇದೇ ವೇಳೆ, ಸೋಷಿಯಲ್ ಮೀಡಿಯಾದಲ್ಲಿ ಟ್ವಿಟ್ಟರ್ ಸಂಸ್ಥೆಯ ವಿರುದ್ಧ ಟೀಕಾ ಪ್ರಹಾರ ನಡೆದಿತ್ತು. ಟ್ವಿಟ್ಟರ್ ಸಂಸ್ಥೆ ಭೂಭಾಗವನ್ನೇ ಮಾರ್ಪಡಿಸಿ ಜಮ್ಮು ಕಾಶ್ಮೀರವನ್ನು ಚೀನಾದ ಭಾಗವಾಗಿ ಘೋಷಿಸುತ್ತದೆ. ಇದು ಭಾರತದ ಕಾನೂನುಗಳ ಉಲ್ಲಂಘನೆ ಅಲ್ಲದೇ ಹೋದರೆ ಮತ್ತಿನ್ನೇನು? ಇದಕ್ಕಿಂತ ತೀರಾ ಕಡಿಮೆ ಮಟ್ಟದ ಅಪರಾಧಗಳಿಗೆ ಭಾರತೀಯ ಪ್ರಜೆಗಳು ಶಿಕ್ಷೆಗೊಳಪಡುಸತ್ತಾರೆ.
ಆದರೆ, ಅಮೆರಿಕದ ಈ ಸಂಸ್ಥೆ ಕಾನೂನಿಗಿಂತ ದೊಡ್ಡದೇ ಎಂದು ಕಾಂಚನ್ ಗುಪ್ತಾ ಅವರು ಟ್ವೀಟ್ ಮಾಡಿದ್ದಾರೆ. ಹಾಗೆಯೇ, ಇದು ಟ್ವಿಟ್ಟರ್ನಿಂದ ಆದ ಆಕಸ್ಮಿಕ ತಪ್ಪಲ್ಲ ಎಂದು ಹೇಳುವ ಮೂಲಕ ಟ್ವಿಟ್ಟರ್ ಉದ್ದೇಶಪೂರ್ವಕವಾಗಿ ಈ ಕೆಲಸ ಮಾಡಿದೆ ಎಂದು ಹಲವರು ಆರೋಪಿಸಿದ್ದರು.
ಚೀನಾದಲ್ಲಿ ಲಡಾಖ್ ಭಾಗವಿದೆ ಎಂದು ತಪ್ಪಾಗಿ ತೋರಿಸಿದ್ದಕ್ಕೆ ಸಾಮಾಜಿಕ ಮಾಧ್ಯಮ ದೈತ್ಯ ಟ್ವಿಟರ್ ಪ್ರಮುಖ ಸಂಸದೀಯ ಸಮಿತಿಗೆ ಲಿಖಿತವಾಗಿ ಕ್ಷಮೆಯಾಚಿಸಿತ್ತು.
ಸಮಿತಿಯ ಮುಂದೆ ಹಾಜರಾದ ಟ್ವಿಟರ್ ಇಂಡಿಯಾದ ಪ್ರತಿನಿಧಿಗಳು ಕ್ಷಮೆಯಾಚಿಸಿದರು. ಆದರೆ, ಇದು ದೇಶದ ಸಾರ್ವಭೌಮತ್ವ ಪ್ರಶ್ನಿಸುವ ಕ್ರಿಮಿನಲ್ ಅಪರಾಧ. ಅಫಿಡವಿಟ್ ಅನ್ನು ಟ್ವಿಟರ್ ಇಂಕ್ ಸಲ್ಲಿಸಬೇಕು ಎಂದು ಸೂಚಿಸಲಾಗಿತ್ತು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications