ಅಭಿನಂದನೆಯ ಮಹಾಮಳೆಯಲ್ಲಿ ಮಿಂದೆದ್ದ ಪೈಲೆಟ್ ಅವನಿ
ಜಾಮ್ನಗರ್, ಫೆಬ್ರವರಿ 22: ಗುಜರಾತಿನ ಜಾಮ್ನಗರದಲ್ಲಿ ಮಿಗ್ 21 ಬಿಸಾನ್ ಯುದ್ಧ ವಿಮಾನ ಚಲಾಯಿಸುವ ಮೂಲಕ ಯುದ್ಧವಿಮಾನದ ಮೊಟ್ಟ ಮೊದಲ ಮಹಿಳಾ ಪೈಲೆಟ್ ಎಂಬ ಕೀರ್ತಿಗೆ ಪಾತ್ರರಾದರು ಅವನಿ ಚತುರ್ವೇದಿ.
2016 ರ ಜೂನ್ ನಲ್ಲಿ ಭಾರತೀಯ ವಾಯುಸೇನೆ ಗೆ ಆಯ್ಕೆಯಾದ ಭಾವನಾ ಕಾಂತ್, ಮೋಹನಾ ಸಿಂಗ್ ಸೇರಿದಂತೆ ಮೂವರು ಮಹಿಳಾ ಯುದ್ಧ ವಿಮಾನ ಪೈಲೆಟ್ ಗಳಲ್ಲಿ ಮೊದಲ ಬಾರಿಗೆ ಯುದ್ಧ ವಿಮಾನ ನಡೆಸಿದ ಕೀರ್ತಿ ಅವನಿ ಅವರದು.
ಮಧ್ಯಪ್ರದೇಶದ ರೇವಾ ಜಿಲ್ಲೆಯವರಾದ ಅವನಿ ಹೈದರಾಬಾದ್ ಏರ್ ಫೋರ್ಸ್ ಅಕಾಡೆಮಿಯಲ್ಲಿ ತರಬೇತಿ ಪೂರ್ಣಗೊಳಿಸಿದ್ದಾರೆ.
ಇತಿಹಾಸ ಸೃಷ್ಟಿಸಿದ ಅವರ ಈ ಸಾಧನೆಗೆ ದೇಶದ ನಾನಾ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ, ಮತ್ತು ಅವರ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.
|
ಅಭಿನಂದನೆಗಳು
ಮಹಿಳೆಯರಿಗೆ ರೆಕ್ಕೆ ನೀಡುವುದರಿಂದ ಅವರು ತಮ್ಮ ದಾರಿಯನ್ನು ತಾವೇ ನಿರ್ಮಿಸಿಕೊಳ್ಳುತ್ತಾರೆ! ಯುದ್ಧ ವಿಮಾನವನ್ನು ಚಲಾಯಿಸಿದ ಮೊಟ್ಟ ಮೊದಲ ಭಾರತೀಯ ಮಹಿಳೆ ಎಂಬ ಕೀರ್ತಿಗೆ ಪಾತ್ರರಾದ ಅವನಿ ಚತುರ್ವೇದಿ ಅವರಿಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ.
|
ದೇಶಕ್ಕೇ ಹೆಮ್ಮೆ!
ಭಾರತದ ಮೊದಲ ಮಹಿಳಾ ಫೈಟರ್ ಪೈಲೆಟ್ ಆಗಿದ್ದಕ್ಕೆ ಅವನಿ ಅವರಿಗೆ ಅಭಿನಂದನೆಗಳು. ಇದೀ ದೇಶವೂ ಅವರ ಕುರಿತು ಹೆಮ್ಮೆ ಪಡಬೇಕಿದೆ ಎಂದು ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ಟ್ವೀಟ್ ಮಾಡಿದ್ದಾರೆ.
|
ನೀವು ಯುವಕರಿಗೆ ಸ್ಫೂರ್ತಿ
ಅವನಿ ಚತುರ್ವೇದಿ ಅವಅರಿಗೆ ಅಭಿನಂದನೆಗಳು. ನೀವು ಭಾರತದ ಯುವತಿಯರಿಗೆ ನಿಜವಾದ ಸ್ಫೂರ್ತಿ. ನೀವು ಯಶಸ್ಸಿನ ಶಿಖರದಲ್ಲಿ ಮತ್ತಷ್ಟು ಉನ್ನತ ಸ್ಥಾನಕ್ಕೆ ಏರಲಿ ಎಂದು ಹಾರೈಸಿದ್ದಾರೆ ಕಾಂಗ್ರೆಸ್ ಮುಖಂಡ ಅಶೋಕ್ ಗೆಹ್ಲೋಟ್.
|
ಯಶಸ್ಸಿನ ಆಕಾಶ ಮುಟ್ಟಿ...
ಅವನಿ ಚತುರ್ವೇದಿ ಅವರಿಗೆ ಅಭಿನಂದನೆ ಮತ್ತು ಶಸುಭಹಾರೈಕೆಗಳು. ನಿಮ್ಮ ಸಾಧನೆಯ ಮೂಲಕ ನೀವು ಆಕಾಶವನ್ನು ಮುಟ್ಟಿ ಎಂದು ಹಾರೈಸಿದ್ದಾರೆ ಸಂಸದ ರಾಜೀವ್ ಚಂದ್ರಶೇಖರ್.
|
ಇತಿಹಾಸ ನಿರ್ಮಿಸಿದ್ದಾರೆ!
ಅವನಿ ಎಂದರೆ ಭೂಮಿ. ಚಿಕ್ಕ ವಯಸ್ಸಿನಲ್ಲೇ ಇತಿಹಾಸ ನಿರ್ಮಿಸಿ ಇಡೀ ಭಾರತದ ಯುವತಿಯರೂ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಅವರಿಗೆ ನನ್ನ ಹೃದಯ ಪೂರ್ವಕ ಅಭಿನಂದನೆಗಳು ಎಂದಿದ್ದಾರೆ ಬಿಜೆಪಿ ಮುಖಂಡ ಸುನಿಲ್ ದಿಯೋಧರ್.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications