ಅಭಿನಂದನೆಯ ಮಹಾಮಳೆಯಲ್ಲಿ ಮಿಂದೆದ್ದ ಪೈಲೆಟ್ ಅವನಿ
ಜಾಮ್ನಗರ್, ಫೆಬ್ರವರಿ 22: ಗುಜರಾತಿನ ಜಾಮ್ನಗರದಲ್ಲಿ ಮಿಗ್ 21 ಬಿಸಾನ್ ಯುದ್ಧ ವಿಮಾನ ಚಲಾಯಿಸುವ ಮೂಲಕ ಯುದ್ಧವಿಮಾನದ ಮೊಟ್ಟ ಮೊದಲ ಮಹಿಳಾ ಪೈಲೆಟ್ ಎಂಬ ಕೀರ್ತಿಗೆ ಪಾತ್ರರಾದರು ಅವನಿ ಚತುರ್ವೇದಿ.
2016 ರ ಜೂನ್ ನಲ್ಲಿ ಭಾರತೀಯ ವಾಯುಸೇನೆ ಗೆ ಆಯ್ಕೆಯಾದ ಭಾವನಾ ಕಾಂತ್, ಮೋಹನಾ ಸಿಂಗ್ ಸೇರಿದಂತೆ ಮೂವರು ಮಹಿಳಾ ಯುದ್ಧ ವಿಮಾನ ಪೈಲೆಟ್ ಗಳಲ್ಲಿ ಮೊದಲ ಬಾರಿಗೆ ಯುದ್ಧ ವಿಮಾನ ನಡೆಸಿದ ಕೀರ್ತಿ ಅವನಿ ಅವರದು.
ಮಧ್ಯಪ್ರದೇಶದ ರೇವಾ ಜಿಲ್ಲೆಯವರಾದ ಅವನಿ ಹೈದರಾಬಾದ್ ಏರ್ ಫೋರ್ಸ್ ಅಕಾಡೆಮಿಯಲ್ಲಿ ತರಬೇತಿ ಪೂರ್ಣಗೊಳಿಸಿದ್ದಾರೆ.
ಇತಿಹಾಸ ಸೃಷ್ಟಿಸಿದ ಅವರ ಈ ಸಾಧನೆಗೆ ದೇಶದ ನಾನಾ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ, ಮತ್ತು ಅವರ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.
|
ಅಭಿನಂದನೆಗಳು
ಮಹಿಳೆಯರಿಗೆ ರೆಕ್ಕೆ ನೀಡುವುದರಿಂದ ಅವರು ತಮ್ಮ ದಾರಿಯನ್ನು ತಾವೇ ನಿರ್ಮಿಸಿಕೊಳ್ಳುತ್ತಾರೆ! ಯುದ್ಧ ವಿಮಾನವನ್ನು ಚಲಾಯಿಸಿದ ಮೊಟ್ಟ ಮೊದಲ ಭಾರತೀಯ ಮಹಿಳೆ ಎಂಬ ಕೀರ್ತಿಗೆ ಪಾತ್ರರಾದ ಅವನಿ ಚತುರ್ವೇದಿ ಅವರಿಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ.
|
ದೇಶಕ್ಕೇ ಹೆಮ್ಮೆ!
ಭಾರತದ ಮೊದಲ ಮಹಿಳಾ ಫೈಟರ್ ಪೈಲೆಟ್ ಆಗಿದ್ದಕ್ಕೆ ಅವನಿ ಅವರಿಗೆ ಅಭಿನಂದನೆಗಳು. ಇದೀ ದೇಶವೂ ಅವರ ಕುರಿತು ಹೆಮ್ಮೆ ಪಡಬೇಕಿದೆ ಎಂದು ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ಟ್ವೀಟ್ ಮಾಡಿದ್ದಾರೆ.
|
ನೀವು ಯುವಕರಿಗೆ ಸ್ಫೂರ್ತಿ
ಅವನಿ ಚತುರ್ವೇದಿ ಅವಅರಿಗೆ ಅಭಿನಂದನೆಗಳು. ನೀವು ಭಾರತದ ಯುವತಿಯರಿಗೆ ನಿಜವಾದ ಸ್ಫೂರ್ತಿ. ನೀವು ಯಶಸ್ಸಿನ ಶಿಖರದಲ್ಲಿ ಮತ್ತಷ್ಟು ಉನ್ನತ ಸ್ಥಾನಕ್ಕೆ ಏರಲಿ ಎಂದು ಹಾರೈಸಿದ್ದಾರೆ ಕಾಂಗ್ರೆಸ್ ಮುಖಂಡ ಅಶೋಕ್ ಗೆಹ್ಲೋಟ್.
|
ಯಶಸ್ಸಿನ ಆಕಾಶ ಮುಟ್ಟಿ...
ಅವನಿ ಚತುರ್ವೇದಿ ಅವರಿಗೆ ಅಭಿನಂದನೆ ಮತ್ತು ಶಸುಭಹಾರೈಕೆಗಳು. ನಿಮ್ಮ ಸಾಧನೆಯ ಮೂಲಕ ನೀವು ಆಕಾಶವನ್ನು ಮುಟ್ಟಿ ಎಂದು ಹಾರೈಸಿದ್ದಾರೆ ಸಂಸದ ರಾಜೀವ್ ಚಂದ್ರಶೇಖರ್.
|
ಇತಿಹಾಸ ನಿರ್ಮಿಸಿದ್ದಾರೆ!
ಅವನಿ ಎಂದರೆ ಭೂಮಿ. ಚಿಕ್ಕ ವಯಸ್ಸಿನಲ್ಲೇ ಇತಿಹಾಸ ನಿರ್ಮಿಸಿ ಇಡೀ ಭಾರತದ ಯುವತಿಯರೂ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಅವರಿಗೆ ನನ್ನ ಹೃದಯ ಪೂರ್ವಕ ಅಭಿನಂದನೆಗಳು ಎಂದಿದ್ದಾರೆ ಬಿಜೆಪಿ ಮುಖಂಡ ಸುನಿಲ್ ದಿಯೋಧರ್.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications