ಬಾಪು ಅಲ್ಲ, 'ಅತ್ಯಾಚಾರಿ ಎನ್ನಿ': ಅಸಾರಾಮ್ ವಿರುದ್ಧ ಭುಗಿಲೆದ್ದ ಆಕ್ರೋಶ
ಜೋಧಪುರ, ಏಪ್ರಿಲ್ 25: "ಕೊನೆಗೂ ನ್ಯಾಯ ಗೆದ್ದಿದೆ", "ಇದು ಪ್ರಜಾಪ್ರಭುತ್ವಕ್ಕೆ ಕರಾಳ ದಿನ" ಈ ಎರಡೂ ಪ್ರತಿಕ್ರಿಯೆಗಳು ಅಸಾರಾಮ್ ಬಾಪು ತೀರ್ಪಿನ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡವು!
ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪು ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಂದು(ಏ.25) ತೀರ್ಪು ನೀಡಿದ ಜೋಧಪುರ ಎಸ್ ಸಿ ಎಸ್ ಟಿ ನ್ಯಾಯಾಲಯ ಅವರನ್ನು ದೋಷಿ ಎಂದು ಘೋಷಿಸಿದೆ.
ಅಸಾರಾಮ್ ಜೊತೆಗೆ ಆರೋಪ ಎದುರಿಸುತ್ತಿದ್ದ ಐವರು ಆರೋಪಿಗಳೂ ತಪ್ಪಿತಸ್ಥರು ಎಂದು ನ್ಯಾಯಾಲಯ ಹೇಳಿದೆ. 2013 ರಲ್ಲಿ ನಡೆದ ಎರಡು ಅತ್ಯಾಚಾರ ಪ್ರಕರಣಗಳಲ್ಲಿ ಅವರ ವಿರುದ್ಧ ವಿಚಾರಣೆ ನಡೆಸಲಾಗಿತ್ತು. ಇದೀಗ ಅವರನ್ನು ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದರುವುದರ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧ ಚರ್ಚೆಯಾಗುತ್ತಿದೆ. ಕೆಲವರು ಅಸಾರಾಂ ನನ್ನು ಇನ್ನು ಮೇಲೆ ಬಾಪು ಎನ್ನಬೇಡಿ, ಅತ್ಯಾಚಾರಿ ಎನ್ನಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
| Array |
ಅವರ ಬೆಂಬಲಿಗರೂ ಶಿಕ್ಷಾರ್ಹರೇ!
ಕೇವಲ ಅಸಾರಾಮ್ ಬಾಪು ಮಾತ್ರವೇ ಅಲ್ಲ, ಅಂಥ ಅಪರಾಧಿಗಳಿಗೆ ಬೆಂಬಲ ನೀಡುವ ಎಲ್ಲರೂ ತಪ್ಪಿತಸ್ಥರೇ. ಅವರೂ ಶಿಕ್ಷಾರ್ಹರೇ ಎಂದಿದ್ದಾರೆ ಅಶೋಕ್ ಪಂಡಿತ್.
|
ಪ್ರಜಾಪ್ರಭುತ್ವಕ್ಕೆ ಕರಾಳದಿನ!
ಅಸಾರಾಮ್ ಬಾಪು ದೋಷಿ ಎಂದು ತೀರ್ಪು ನೀಡಲಾಗಿದೆ. ಇದು ಭಾರತೀಯ ಪ್ರಜಾಪ್ರಭುತ್ವಕ್ಕೆ ಅತ್ಯಂತ ಕರಾಳದಿನ. ನ್ಯಾಯಾಂಗ ಸಂಪೂರ್ಣವಾಗಿ ರಾಜಿಮಾಡಿಕೊಂಡಿದೆ. ಭಾರತೀಯ ನ್ಯಾಯಾಂಗದ ಮೇಲೆ ಯಾವುದೇ ನಂಬಿಕೆ ಉಳಿದಿಲ್ಲ ಎಂದು ತರಾ ಬಿಯಸ್ ಎಂ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.
|
ನ್ಯಾಯಾಂಗದ ಮೇಲೆ ಗೌರವ
ಅಸಾರಾಮ್ ಬಾಪು ಮೇಲೆ ಅತ್ಯಾಚಾರ, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದವು. ಅವರಿಗೆ ಜೀವಾವಧಿ ಶಿಕ್ಷೆಯಾದರೂ ಅಚ್ಚರಿಯಿಲ್ಲ. ನ್ಯಾಯಾಂಗದ ಮೇಲೆ ತುಂಬ ನಂಬಿಕೆ ಇದೆ. ಸಂಗತ್ರಸ್ಥೆಗೆ ನ್ಯಾಯ ಸಿಕ್ಕುತ್ತದೆ ಮತ್ತು ಅಪರಾಧಿಗಳಿಗೆ ಗರಿಷ್ಠ ಶಿಕ್ಷೆಯಾಗುತ್ತದೆ ಎಂಬ ನಂಬಿಕೆ ಇದೆ ಎಂದಿದ್ದಾರೆ ಅನಿತ್ ಘೋಷ್.
|
ಬಾಪು ಅಲ್ಲ, ಅತ್ಯಾಚಾರಿ ಎಂದು ಕರೆಯಿರಿ
ಜೋದ್ಪುರ ನ್ಯಾಯಾಲಯ ಅಸಾರಾಂನನ್ನು ದೋಷಿ ಎಂದು ಪರಿಗಣಿಸಿದೆ. ಇನ್ನು ಮೇಲೆ ಆತನನ್ನು ಬಾಪು ಎಂದು ಕರೆಯುವುದನ್ನು ನಿಲ್ಲಿಸಿ. ಅತ್ಯಾಚಾರಿ ಎಂದು ಕರೆಯಿರಿ ಎಂದಿದ್ದಾರೆ ಜಾಗೃತಿ ಶುಕ್ಲಾ.
|
ಹಿಂದುತ್ವದ ಘನತೆ ಕಡಿಮೆ ಮಾಡುತ್ತಿದ್ದಾರೆ
ಅಸಾರಾಮ್ ರಂಥ ಸ್ವಯಂಘೋಷಿತ ದೇವಮಾನವರು ಹಿಂದುತ್ವದ ಘನತೆಯನ್ನು ಕಡಿಮೆಮಾಡುತ್ತಿದ್ದಾರೆ. ಅಂಥವರನ್ನು ಬೆಂಬಲಿಸುವ ಜನರು ಚರ್ಚಿನಲ್ಲೂ ಇರುವ ಶಿಶುಕಾಮುಕರಂತೆ. ಜನರು ಅಂಥವರನ್ನು ಯಾಕೆ ಬೆಂಬಲಿಸುತ್ತಾರೆ ಎಂಬುದೇ ಅರ್ಥವಾಗುವುದಿಲ್ಲ ಎಂದಿದ್ದಾರೆ ರಜತ್.
|
ಭಕ್ತರಿಗೆ ನಾಚಿಕೆಯಾಗಬೇಕು
ಅಸಾರಾಮ್ ಬಾಪು ಬಿಡುಗಡೆಗಾಗಿ ಪೂಜೆ ಮಾಡುತ್ತ, ಪ್ರಾರ್ಥನೆ ಸಲ್ಲಿಸುತ್ತಿರುವ ಅವರ ಅಂಧ ಅನುಯಾಯಿಗಳಿಗೆ ನಿಜಕ್ಕೂ ನಾಚಿಕೆಯಾಗಬೇಕು ಎಂದು ಛೀಮಾರಿ ಹಾಕಿದ್ದಾರೆ ಶರಣು ಜವಲ್ಗಿ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications