ಅಮಿತ್ ಶಾ ಟ್ವಿಟ್ಟರ್ ಫೋಟೊಕ್ಕೆ ಕಾಪಿರೈಟ್ ಸಮಸ್ಯೆ
ನವದೆಹಲಿ, ನವೆಂಬರ್ 13: ಗೃಹ ಸಚಿವ ಅಮಿತ್ ಶಾ ಅವರ ಟ್ವಿಟ್ಟರ್ ಖಾತೆಯ ಪ್ರೊಫೈಲ್ ಫೋಟೊವನ್ನು ಗುರುವಾರ ರಾತ್ರಿ ಇದ್ದಕ್ಕಿದ್ದಂತೆ ತೆರವುಗೊಳಿಸಲಾಗಿತ್ತು. ಬಳಿಕ ಅದನ್ನು ಮತ್ತೆ ಪ್ರಕಟಿಸಲಾಗಿದೆ. ಕಾಪಿ ರೈಟ್ ಸಮಸ್ಯೆಯ ಕಾರಣದಿಂದ ಈ ಫೋಟೊವನ್ನು ತೆಗೆದುಹಾಕಿದ್ದಾಗಿ ಟ್ವಿಟ್ಟರ್ ಹೇಳಿತ್ತು.
ಆ ಫೋಟೊದ ಕಾಪಿರೈಟ್ ಹೊಂದಿರುವ ವ್ಯಕ್ತಿ ಅಮಿತ್ ಶಾ ಪ್ರೊಫೈಲ್ ಫೋಟೊದ ವಿರುದ್ಧ ರಿಪೋರ್ಟ್ ಮಾಡಿದ್ದರು. ಹೀಗಾಗಿ ಆ ಫೋಟೊವನ್ನು ಪ್ರೊಫೈಲ್ನಿಂದ ಟ್ವಿಟ್ಟರ್ ತೆರವುಗೊಳಿಸಿತ್ತು. ಆದರೆ ಕೆಲವು ಸಮಯದಲ್ಲಿಯೇ ಅದನ್ನು ಮರುಸ್ಥಾಪಿಸಲಾಯಿತು.
'ಆಕಸ್ಮಿಕ ಪ್ರಮಾದಗಳಿಂದಾಗಿ ನಮ್ಮ ಜಾಗತಿಕ ಕಾಪಿರೈಟ್ ನೀತಿಗಳಿಗೆ ಅನುಸಾರವಾಗಿ ನಾವು ಈ ಖಾತೆಯನ್ನು ತಾತ್ಕಾಲಿಕವಾಗಿ ಲಾಕ್ ಮಾಡಿದ್ದೆವು. ಆದರೆ ಕೂಡಲೇ ಈ ನಿರ್ಧಾರವನ್ನು ಹಿಂಪಡೆದುಕೊಳ್ಳಲಾಗಿದ್ದು, ಖಾತೆಯು ಈಗ ಸಂಪೂರ್ಣ ಕಾರ್ಯಾಚರಣೆಗೆ ಲಭ್ಯವಾಗಿದೆ' ಎಂದು ಟ್ವಿಟ್ಟರ್ ವಕ್ತಾರರು ತಿಳಿಸಿದ್ದಾರೆ.

ಟ್ವಿಟ್ಟರ್ ಕಾಪಿರೈಟ್ ನಿಯಮಗಳ ಪ್ರಕಾರ ಫೋಟೊಗ್ರಾಫರ್ ಒಂದು ಫೋಟೊದ ಮೇಲೆ ಹಕ್ಕುಸ್ವಾಮ್ಯ ಹೊಂದಿರಬಹುದು. ಆದರೆ ವಿಷಯದ ಮೇಲೆ ಅಲ್ಲ. ಅಮಿತ್ ಶಾ ಅವರ ಪ್ರೊಫೈಲ್ ಫೋಟೊವನ್ನು ತೆರವುಗೊಳಿಸುತ್ತಿದ್ದಂತೆಯೇ ಟ್ವಿಟ್ಟರ್ನಲ್ಲಿ ಆಕ್ರೋಶ ಭುಗಿಲೆದ್ದಿತ್ತು. ಅಮಿತ್ ಶಾ 23 ಮಿಲಿಯನ್ಗೂ ಅಧಿಕ ಹಿಂಬಾಲಕರನ್ನು ಹೊಂದಿದ್ದು, ಅವರು 296 ಮಂದಿಯನ್ನು ಹಿಂಬಾಲಿಸುತ್ತಿದ್ದಾರೆ.
ಇನ್ನೊಂದೆಡೆ ಲೇಹ್ ಪ್ರದೇಶವನ್ನು ಒಮ್ಮೆ ಚೀನಾಕ್ಕೆ ಸೇರಿದ್ದು ಎಂದು ತೋರಿಸಿದ್ದ ಟ್ವಿಟ್ಟರ್, ಈಗ ಲಡಾಖ್ ಕೇಂದ್ರಾಡಳಿತ ಪ್ರದೇಶದ ಬದಲು ಜಮ್ಮು ಮತ್ತು ಕಾಶ್ಮೀರಕ್ಕೆ ಸೇರಿದೆ ಎಂದು ತೋರಿಸುತ್ತಿದೆ. ಇದರಿಂದ ಅಸಮಾಧಾನಗೊಂಡಿರುವ ಕೇಂದ್ರ ಸರ್ಕಾರ ಟ್ವಿಟ್ಟರ್ಗೆ ನೋಟಿಸ್ ಜಾರಿಮಾಡಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications