ವಿಶ್ವ ಕಾವ್ಯ ದಿನ: ಬದುಕನ್ನು ಸುಂದರವಾಗಿಸಿರುವ ಕವನಗಳಿಗೆ ನಮನ
'ನಿನ್ನೊಲುಮೆಯಿಂದಲೇ ಬಾಳು ಬೆಳಕಾಗಿರಲು ಚಂದ್ರಮುಖಿ ನೀನೆನಲು ತಪ್ಪೇನೆ...' ದಾಂಪತ್ಯ ಕವಿ ಕೆ.ಎಸ್. ನರಸಿಂಹಸ್ವಾಮಿಯವರ ಆ ಕವನವನ್ನು, ಸಿ ಅಶ್ವಥ್ ಅವರ ಕಂಚಿನ ಕಂಠದಿಂದ ಕೇಳಬೇಕು... ಆಗಷ್ಟೇ ಮಣ್ಣನ್ನು ತೋಯ್ದು ಪರಿಮಳ ಬರಿಸುತ್ತಿರುವ ಮಳೆ, ಸುತ್ತ ಹಿತವಾದ ಮೌನ ಕಲ್ಪಿಸಿಟ್ಟ ಸುಂದರ ಸಂಜೆ... ಮನದಲ್ಲಿ ಕಚಗುಳಿ ಇಡುವ ಈ ಹಾಡು ಹಿನ್ನೆಲೆಯಲ್ಲಿ ಉಲಿಯುತ್ತಿರಬೇಕು... ಆ ಕ್ಷಣ ನೀಡುವ ಮಧುರ ಅನುಭೂತಿಯ ಮುಂದೆ ಇನ್ನೇನು ಬೇಕು..?!
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ದ.ರಾ.ಬೇಂದ್ರೆ, ಕೆ.ಎಸ್.ನರಸಿಂಹ ಸ್ವಾಮಿ, ಕುವೆಂಪು, ಜಿ.ಎಸ್.ಶಿವರುದ್ರಪ್ಪ, ಎಚ್ ಎಸ್ ವೆಂಕಟೇಶಮೂರ್ತಿ, ಗೋಪಾಲಕೃಷ್ಣ ಅಡಿಗ ಮುಂತಾದ ಕನ್ನಡದ ಮಹಾನ್ ಕವಿಗಳ ಕವನಕ್ಕಿರುವ ಶಕ್ತಿ ಅದು. ಖಿನ್ನ ಮನಸ್ಸಿಲ್ಲೂ ಬದುಕಿನ ಪ್ರೀತಿಯನ್ನು ಒಸರಿಸುವ ಇವರೆಲ್ಲರ(ಕನ್ನಡದ ಎಲ್ಲ ಕವಿಗಳ) ಕವನಗಳೆಲ್ಲ ಕನ್ನಡ ಸಾಹಿತ್ಯ ಕ್ಷೇತ್ರದ ಘನತೆಯನ್ನು ಹೆಚ್ಚಿಸಿವೆ. ಬಾಡಿದ ಮನಸ್ಸಿಗೆ ಹಿಡಿ ಸಾಂತ್ವನ ನೀಡಿವೆ.
ಇಂದು ವಿಶ್ವ ಕಾವ್ಯ ದಿನವಂತೆ! ಕಾವ್ಯಾಭಿವ್ಯಕ್ತಿಯ ಮೂಲಕ ಭಾಷಾ ವೈವಿಧ್ಯವನ್ನು ಪ್ರೋತ್ಸಾಹಿಸುವ ಉದ್ದೇಶದಿಂದಾಗಿ ಪ್ರತಿವರ್ಷ ಮಾರ್ಚ್ 21 ನ್ನು ವಿಶ್ವ ಕಾವ್ಯ ದಿನ(World Poetry Day)ವನ್ನಾಗಿ ಆಚರಿಸಲಾಗುತ್ತದೆ. 1999 ರಲ್ಲಿ ಯುನೆಸ್ಕೋ ಸಹ ಇದಕ್ಕೆ ಒಪ್ಪಿಗೆ ನೀಡಿದೆ.
ವಿಶ್ವ ಕಾವ್ಯ ದಿನಕ್ಕೆ ಹಲವು ಸೆಲೆಬ್ರಿಟಿಗಳು ಶುಭಹಾರೈಸಿದ್ದಾರೆ. ನಮ್ಮ ಬದುಕನ್ನು ಮತ್ತಷ್ಟು ಸುಂದರವಾಗಿಸಿರುವ ಸ್ಫೂರ್ತಿದಾಯಕ ಕವನಗಳನ್ನು ನೆನಪಿಸಿಕೊಂಡಿದ್ದಾರೆ.
|
ಸುಂದರ ಅಭಿವ್ಯಕ್ತಿ ಮಾಧ್ಯಮ
ಕವಿತೆ ಎಂದರೆ ಅತ್ಯಂತ ಸುಂದರ ಅಭಿವ್ಯಕ್ತಿ ಮಾಧ್ಯಮ. ಅದು ಅನುಭವದ ಅಗಾಧತೆ ಮತ್ತು ಭಾವನೆಗಳ ಸುಕುಮಾರತೆ... ನಾವದನ್ನು ಬದುಕಬೇಕು ಮತ್ತು ಬೆಳೆಸಬೇಕು... ಎಂದಿದ್ದಾರೆ ಅಧ್ಯಾತ್ಮ ಗುರು ಸದ್ಗುರು ಜಗ್ಗಿ ವಾಸುದೇವ.
|
ಕಾವ್ಯದಿನ ಸ್ಮರಿಸಿದ ರಮ್ಯಾ
"ಕಾಡಿನಲ್ಲಿ ಎರಡು ದಾರಿಗಳು ವಿಭಜಿಸಿದ್ದರೆ ನಾನು ಅದರಲ್ಲಿ ಒಂದು ದಾರಿಯನ್ನು ಆರಿಸಿಕೊಳ್ಳುತ್ತೇನೆ... ಅದು ಯಾರೂ ಓಡಾಡದ ಹಾದಿ... ಅದೇ ನನ್ನನ್ನು ಭಿನ್ನನನ್ನಾಗಿ ಮಾಡುತ್ತದೆ" ಎಂಬ ರಾಬರ್ಟ್ ಫ್ರಾಸ್ಟ್ ಎಂಬ ಕವಿಯ ಕವನದ ಸಾಲುಗಳ ಮೂಲಕ ಕಾವ್ಯ ದಿನವನ್ನು ಸ್ಮರಿಸಿಕೊಂಡಿದ್ದಾರೆ, ಕಾಮಗ್ರೆಸ್ ಸಾಮಾಜಿಕ ಮಾಧ್ಯಮ ಮುಖ್ಯಸ್ಥೆ, ಕನ್ನಡ ನಟಿ ರಮ್ಯಾ.
|
ಕಾವ್ಯ ಎಂದರೆ ಅದೇ...
ಅಕ್ಷರಗಳು ಅಭಿವ್ಯಕ್ತಿಪಡಿಸಲಾಗದ್ದು, ಕವಿಯ ಅಕ್ಷರಗಳ ನಡುವಲ್ಲಿ ಅಡಗಿ ಕುಳಿತಿದ್ದು, ಕವಿಯ ಕವನದ ಸಾಲುಗಳ ನಡುವೆ ಅಂತರ ಉಳಿಸಿದ್ದು, ಅಕ್ಷರಗಳಾಚೆಗೆ ಕಲ್ಪನೆ ಮೂಡಿಸಿದ್ದು, ಭಾಷೆಯನ್ನು ಮೀರಿದ ಹಂಬಲ ಮೂಡಿಸಿದ್ದು... ಅದೇ ಕಾವ್ಯ, ಅದೇ ನಿಜವಾದ ಕವಿತೆ ಎಂದಿದ್ದಾರೆ ಶೇಖರ್ ಕಪೂರ್.
|
ಅದು ಆಕರ್ಷಕ ಪದವಲ್ಲ, ನೈಜ ಭಾವನೆ
ನಿಜವಾದ ಕವಿತೆ ಎಂದರೆ ಆಕರ್ಷಕ ಪದಪುಂಜವಲ್ಲ. ಅದು ಕವಿಯ ನೈಜ ಭಾವನೆಯಾಗಿದ್ದರೆ ಮಾತ್ರವೇ ಮನಸ್ಸನ್ನು ತಟ್ಟುತ್ತದೆ. ಓದುಗರು ಮತ್ತು ಕವಿಯೊಂದಿಗೆ ಭಾವಬೆಸುಗೆಯನ್ನು ಮೂಡಿಸುತ್ತದೆ ಎಂದಿದ್ದಾರೆ ಕರುಣಾ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications