ಇಂದು ವಿಶ್ವ ಜಲದಿನ: ಜೀವಜಲದ ಉಳಿವಿಗಾಗಿ ಸಂಕಲ್ಪ
ನೀರು ಇಲ್ಲದ ಬದುಕನ್ನು ಕಲ್ಪಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲ. ಹುಟ್ಟಿದಾಗಿನಿಂದ ಸಾಯುವವರೆಗೂ ಪ್ರತಿ ಜೀವಿಯೂ ನೀರಿನಾಸರೆಯಿಲ್ಲದೆ ಬದುಕಲಾರದು. ಸಾಯುವ ಆ ಕೊನೆಯ ಕ್ಷಣದಲ್ಲೂ ಬಾಯಿಗೆ ಹನಿ ಗಂಗಾಜಲ ಬಿದ್ದರೆ ಸ್ವರ್ಗಪ್ರಾಪ್ತಿ ಎಂಬ ನಂಬಿಕೆ ಹಿಂದು ಸಂಪ್ರದಾಯದಲ್ಲಿ ಇಂದಿಗೂ ಇದೆ.
ಅಷ್ಟರ ಮಟ್ಟಿಗೆ ನೀರು ಜೀವಿಯ ಬದುಕಲ್ಲಿ ಮಹತ್ವದ ಸ್ಥಾನ ಪಡೆದಿದೆ. ಇಂದು ವಿಶ್ವ ಜಲ ದಿನ. ನೀರನ್ನು ಸಂರಕ್ಷಿಸುವ ಮತ್ತು ಮುಂದಿನ ಪೀಳಿಗೆಗಳಿಗೆ ಅದು ಉಳಿಯುವಂತೆ ಮಾಡುವ ಸಂಕಲ್ಪದೊಂದಿಗೆ ಪ್ರತಿ ವರ್ಷ ಮಾರ್ಚ್ 22 ಅನ್ನು ವಿಶ್ವ ಜಲದಿನವನ್ನಾಗಿ ಆಚರಿಸಲಾಗುತ್ತದೆ.
ವಿಶ್ವ ಜಲದಿನದಂದು ನೀರನ್ನು ಸಂರಕ್ಷಿಸುವ ಮತ್ತು ಜಲಮೂಲಗಳನ್ನು ಜೋಪಾನವಾಗಿ ರಕ್ಷಿಸುವ ಸಂಕ್ಲಪದೊಂದಿಗೆ ಹಲವರು ಟ್ವೀಟ್ ಮಾಡಿದ್ದಾರೆ.
|
ಜಲಶಕ್ತಿಯ ಮಹತ್ವ ಸಾರಿವ ದಿನ
ವಿಶ್ವ ಜಲದಿನವು ಜಲಶಕ್ತಿಯ ಮಹತ್ವ ಮತ್ತು ಅದರ ಸಂರಕ್ಷಣೆಯಲ್ಲಿ ನಮ್ಮ ಪಾತ್ರವೇನು ಎಂಬುದನ್ನು ಅರಿವು ಮೂಡಿಸುವ ದಿನ. ಎಲ್ಲಿ ನೀರನ್ನು ಸಂರಿಕ್ಷಿಸಲಾಗುತ್ತದೆಯೋ ಆ ನಗರ, ಆ ಹಳ್ಳಿ, ಅಲ್ಲಿನ ರೈತರು ಉಪಯೋಗ ಪಡೆಯುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಪ್ರತಿಹನಿಯೂ ಅಮೂಲ್ಯ
"ನೀರಿನ ಪ್ರತಿ ಹನಿಯೂ ಅಮೂಲ್ಯ" ಮಿತವಾಗಿ ಮತ್ತು ಜವಾಬ್ದಾರಿಯಿಂದ ಸದ್ಬಳಕೆ ಮಾಡಿಕೊಂಡು, ಸಂರಕ್ಷಿಸಬೇಕಾದ ಹೊಣೆ ನಮ್ಮ ಮೇಲಿದೆ. ಎಲ್ಲರೂ ಒಂದಾಗಿ ಪರಿಸರ ವ್ಯವಸ್ಥೆಯ ಮೂಲಾಧಾರವಾದ ನೀರಿನ ಹಿತ-ಮಿತ ಬಳಕೆಯತ್ತ ಜಾಗೃತಿ ಮೂಡಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
|
ಮರುಕಳಿಸುತ್ತಿದೆ ಗದಗದ ಸುವರ್ಣಯುಗದ
ಗದಗದ ಸುರ್ಣಯುಗವನ್ನು ಮರುಸ್ಥಾಪಿಸುತ್ತಿದ್ದೇವೆ. ಗದಗದ ಕಾರ್ಯಕರ್ತರು ಇಲ್ಲಿನ ಜರೇ ಮರೆತುಬಿಟ್ಟಿದ್ದ ಕಲ್ಯಾಣಿಯೊಂದಕ್ಕೆ ಪುನರ್ಜನ್ಮ ನೀಡುತ್ತಿದ್ದಾರೆ. ಈ ಕಲ್ಯಾಣಿಯನ್ನು ಗದಗದ ಮಹಾನ್ ಕವಿ ಕುಮಾರವ್ಯಾಸ ಸಹ ಬಳಸಿದ್ದರಂತೆ! ಇಂಥ ಮಹಾನ್ ಇತಿಹಾಸ ಹೊಂದಿರುವ ಕಲ್ಯಾಣಿಯಲ್ಲಿ ಮತ್ತೆ ಒರತೆ ಒಸರುತ್ತಿದೆ, ಗತವೈಭವ ಮರುಕಳಿಸಿದೆ ಎಂದು ವಿಶ್ವ ಜಲದಿನಕ್ಕೆ ಶುಭಾಶಯ ಕೋರಿದ್ದಾರೆ ಚಕ್ರವರ್ತಿ ಸೂಲಿಬೆಲೆ.
| Array |
ನೀರಿಲ್ಲದೆ ಬದುಕಿಲ್ಲ
ನೀರಿಲ್ಲದೆ ಬದುಕಿಲ್ಲ. ನೀರನ್ನು ಸಂರಕ್ಷಿಸುವುದು ನಮ್ಮ ಹೊನೆ ಮಾತ್ರವಲ್ಲ, ಕರ್ತವ್ಯ ಸಹ. ಹೊಸ ನೀರಿನ ಮೂಲಗಳನ್ನು ಹುಡುಕುವುದು, ಸೃಷ್ಟಿಸುವುದು ಮತ್ತು ಅವನ್ನು ಸಂರಕ್ಷಿಸುವುದು ನಮ್ಮ ಕರ್ತವ್ಯ ಎಂದು ಬಿಜೆಪಿ ರಾಷ್ಟ್ರಾಶ್ಯಕ್ಷ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
|
ಅಮೃತವಿದ್ದಂತೆ ಈ ಜಲ
ಪ್ರಿಯ ನಾಗರಿಕರೇ, ಈ ನೀರು ಎಂಬುದು ಅಮೃತವಿದ್ದಂತೆ. ಇದನ್ನು ಉಳಿಸಲು, ಸಂರಕ್ಷಿಸಲು ನಾವು ಮಿತಿಮೀರಿ ಸಂಕಲ್ಪ ಮಾಡೋಣ. ನಮ್ಮ ನಾಳೆಗಾಗಿ ನೀರನ್ನು ಇಂದು ರಕ್ಷಿಸುವುದು ಮುಖ್ಯ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಟ್ವೀಟ್ ಮಾಡಿದ್ದಾರೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications