ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್ಕೌಂಟರ್: ಇಬ್ಬರು ಸೇನಾ ಅಧಿಕಾರಿಗಳು ಮತ್ತು ಒಬ್ಬ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಕಲಕೋಟ್ ಅರಣ್ಯದಲ್ಲಿ ನಡೆದ ಭೀಕರ ಎನ್ಕೌಂಟರ್ನಲ್ಲಿ ಇಬ್ಬರು ಸೇನಾ ಅಧಿಕಾರಿಗಳು ಮತ್ತು ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಎನ್ಕೌಂಟರ್ನಲ್ಲಿ ಒಬ್ಬ ಯೋಧ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಗುಪ್ತಚರ ಮಾಹಿತಿಯ ನಂತರ ಸೇನೆಯ ವಿಶೇಷ ಪಡೆಗಳು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಭಯೋತ್ಪಾದಕರು ಯೋಧರ ನಡುವೆ ಎನ್ಕೌಂಟರ್ ಪ್ರಾರಂಭವಾಯಿತು.

ಜಮ್ಮು ಮತ್ತು ಕಾಶ್ಮೀರದ ಪಿರ್ ಪಂಜಾಲ್ ಅರಣ್ಯವು ಕಳೆದ ಕೆಲವು ವರ್ಷಗಳಲ್ಲಿ ಸರಣಿ ಎನ್ಕೌಂಟರ್ಗಳ ನಂತರ ಭದ್ರತಾ ಪಡೆಗಳಿಗೆ ಸವಾಲಾಗಿದೆ. ಭಯೋತ್ಪಾದಕರು ದಟ್ಟವಾದ ಕಾಡುಗಳಲ್ಲಿ ಅವಿತುಕೊಂಡು ಸೈನ್ಯಕ್ಕೆ ತೊಂದರೆ ನೀಡುತ್ತಿದ್ದಾರೆ. ಇಲ್ಲಿ ಅರಣ್ಯ ಪ್ರದೇಶದ ಲಾಭವನ್ನು ಪಡೆದುಕೊಳ್ಳುತ್ತಾರೆ.
ಹಲವು ದಿನಗಳಿಂದ ಭಯೋತ್ಪಾದರ ದಾಳಿ
ಭಯೋತ್ಪಾದಕರು ತಮ್ಮ ಸ್ಥಾನಗಳನ್ನು ಮರೆಮಾಡಲು ಪರ್ವತಗಳು, ದಟ್ಟವಾದ ಕಾಡುಗಳು ಮತ್ತು ಆಲ್ಪೈನ್ ಕಾಡುಗಳ ಮೊರೆ ಹೋಗಿದ್ದಾರೆ. ಕಳೆದ ವಾರ, ರಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಭಯೋತ್ಪಾದಕನನ್ನು ಕೊಲ್ಲಲಾಯಿತು.
ಬುಧಾಲ್ ತೆಹ್ಸಿಲ್ನ ಗುಲ್ಲೆರ್-ಬೆಹ್ರೋಟ್ ಪ್ರದೇಶದಲ್ಲಿ ಸೇನೆ, ಪೊಲೀಸ್ ಮತ್ತು ಸಿಆರ್ಪಿಎಫ್ನ ಜಂಟಿ ತಂಡವು ಕಾರ್ಡನ್ ಮತ್ತು ಸರ್ಚ್ ಆಪರೇಷನ್ (ಸಿಎಎಸ್ಒ) ಸಮಯದಲ್ಲಿ ಬೆಳಿಗ್ಗೆ ಎನ್ಕೌಂಟರ್ ನಡೆಯಿತು.












Click it and Unblock the Notifications