Two Earthquakes: ಅಂಡಮಾನ್ ನಡುಗುತ್ತಲೇ ಅಫ್ಘಾನಿಸ್ತಾನದಲ್ಲಿ ನಡುಕ- ನಡುರಾತ್ರಿಯಲ್ಲಿ ತತ್ತರಿಸಿದ ಜನ!
ಕಾಬೂಲ್ ಜುಲೈ 10 : ಕಳೆದ ರಾತ್ರಿ ಎರಡು ದೇಶಗಳಲ್ಲಿ ಭೂಕಂಪ ಸಂಭವಿಸಿದೆ. ಅಂಡಮಾನ್ನಲ್ಲಿ ಭೂಕಂಪ ಸಂಭವಿಸಿದ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭೂಮಿ ಕಂಪಿಸಿದೆ. ಮಧ್ಯರಾತ್ರಿ ಭೂಕಂಪನದಿಂದ ಜನರು ಭಯಭೀತರಾಗಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಮಧ್ಯರಾತ್ರಿ ಸಾಧಾರಣ ಭೂಕಂಪ ಸಂಭವಿಸಿದೆ. ಅಫ್ಘಾನಿಸ್ತಾನದ ಆಗ್ನೇಯ ಭಾಗದಲ್ಲಿರುವ ಫೈಜಾಬಾದ್ ಪ್ರದೇಶದಲ್ಲಿ ರಾತ್ರಿ ಸಂಭವಿಸಿದ ಈ ಭೂಕಂಪದಿಂದ ಜನರು ಭಯಭೀತರಾಗಿದ್ದರು. ಭೂಕಂಪ ರಿಕ್ಟರ್ ಮಾಪಕದಲ್ಲಿ 4.4 ರಷ್ಟಿತ್ತು. ಭೂಕಂಪನದಿಂದಾಗಿ ಮನೆಗಳು ಕಂಪಿಸಿದ ಕಾರಣ ಜನರು ನಡು ರಾತ್ರಿ ಮನೆಯಿಂದ ಹೊರಬಂದಿದ್ದಾರೆ. ಗಾಢ ನಿದ್ದೆಯಲ್ಲಿದ್ದ ಜನರು ಏಕಾಏಕಿ ಮನೆಯಿಂದ ಹೊರಬರುತ್ತಿದ್ದ ದೃಶ್ಯಗಳು ವೈರಲ್ ಆಗಿವೆ. ಭೂಕಂಪದಿಂದ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ನಿನ್ನೆ ಮೊನ್ನೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭೂಕಂಪ ಸಂಭವಿಸಿತ್ತು. ಅಂಡಮಾನ್ನ ಕ್ಯಾಂಪ್ಬೆಲ್ ಕೊಲ್ಲಿಯಲ್ಲಿ ಇದು ಸಂಭವಿಸಿದೆ. ಕ್ಯಾಂಪ್ಬೆಲ್ ಕೊಲ್ಲಿಯ ಆಗ್ನೇಯಕ್ಕೆ 162 ಕಿಮೀ ದೂರದಲ್ಲಿ ಭೂಕಂಪನ ದಾಖಲಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.3 ದಾಖಲಾಗಿದೆ.
ಭೂಕಂಪದಿಂದಾಗಿ ಅಲ್ಲಿನ ಹಲವು ಪ್ರಮುಖ ಕಟ್ಟಡಗಳು ನಲುಗಿವೆ. ಇದರಿಂದ ಜನರು ತಕ್ಷಣ ಕಟ್ಟಡಗಳಿಂದ ಹೊರಬಂದು ರಸ್ತೆಗಳಲ್ಲಿ ಆಶ್ರಯ ಪಡೆದರು. ಅಂಡಮಾನ್ ನಲ್ಲಿ ಭೂಕಂಪ ಸಂಭವಿಸಿದ ಕೆಲವೇ ಗಂಟೆಗಳಲ್ಲಿ ಅಫ್ಘಾನಿಸ್ತಾನದಲ್ಲೂ ಭೂಕಂಪ ಸಂಭವಿಸಿದೆ. ಅಫ್ಘಾನಿಸ್ತಾನದಲ್ಲಿ ಆಗಾಗ ಸಂಭವಿಸುವ ಭೂಕಂಪಗಳು ಜನರಲ್ಲಿ ಕೊಂಚ ಭೀತಿಯನ್ನುಂಟು ಮಾಡುತ್ತಿವೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications