20 ದಿನದಲ್ಲಿ ಇಬ್ಬರು ಮಾಜಿ ಮಹಿಳಾ ಮುಖ್ಯಮಂತ್ರಿಗಳು ವಿಧಿವಶ
ನವದೆಹಲಿ, ಆ 7: ಇಪ್ಪತ್ತು ದಿನದ ಅವಧಿಯಲ್ಲಿ ದೇಶ ಇಬ್ಬರು ಮಾಜಿ ಮಹಿಳಾ ಮುಖ್ಯಮಂತ್ರಿಗಳನ್ನು ಕಳೆದುಕೊಂಡಿದೆ. ಇಬ್ಬರೂ, ರಾಷ್ಟ್ರೀಯ ಪಕ್ಷಗಳನ್ನು ಪ್ರತಿನಿಧಿಸುವ ಪ್ರಮುಖ ಮಹಿಳಾ ಮುಖಂಡರಾಗಿದ್ದವರು.
ಮೂರು ಬಾರಿ ದೆಹಲಿಯ ಮುಖ್ಯಮಂತ್ರಿಯಾಗಿದ್ದ, ಹಿರಿಯ ಕಾಂಗ್ರೆಸ್ ನಾಯಕಿ, ಶೀಲಾ ದೀಕ್ಷಿತ್, ಕಳೆದ ತಿಂಗಳು ಜುಲೈ 20ರಂದು ವಿಧಿವಶರಾಗಿದ್ದರು. ಈಗ, ಆಗಸ್ಟ್ ಆರರಂದು ಮತ್ತೊಬ್ಬರು ಮಾಜಿ ಮುಖ್ಯಮಂತ್ರಿಯಾಗಿದ್ದ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ.
ವಿದೇಶಾಂಗ ಇಲಾಖೆಯ ಸಚಿವೆಯೂ ಆಗಿದ್ದ ಸುಷ್ಮಾ ಸ್ವರಾಜ್, ಇದಕ್ಕೂ ಮೊದಲು ದೆಹಲಿಯ ಮುಖ್ಯಮಂತ್ರಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಸುಷ್ಮಾ ಮತ್ತು ಶೀಲಾ, ದೆಹಲಿಯ ಇಬ್ಬರು ಮಹಿಳಾ ಸಿಎಂ ಆಗಿದ್ದವರು.

ಹೃದಯಾಘಾತದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸುಷ್ಮಾ ಅವರನ್ನು ಮಂಗಳವಾರ ರಾತ್ರಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಇಹಲೋಕ ತ್ಯಜಿಸಿದ್ದರು.
ಚಿತ್ರಗಳಲ್ಲಿ ಸುಷ್ಮಾ ಸ್ವರಾಜ್ ಅಂತಿಮ ದರ್ಶನ
ಶೀಲಾ ದೀಕ್ಷಿತ್ ನಿಧನರಾದಾಗ ಟ್ವೀಟ್ ಮಾಡಿದ್ದ ಸುಷ್ಮಾ, 'ಶೀಲಾ ನಿಧನರಾದ ಸುದ್ದಿ ಬಹಳ ನೋವನ್ನು ತಂದಿದೆ. ರಾಜಕಾರಣದಲ್ಲಿ ನಾವಿಬ್ಬರೂ ಬೇರೆ ಬೇರೆ ಪಕ್ಷಗಳನ್ನು ಪ್ರತಿನಿಧಿಸಿದರೂ, ವೈಯಕ್ತಿಕವಾಗಿ ನಾವಿಬ್ಬರೂ ಗೆಳತಿಯರಾಗಿದ್ದೆವು' ಎಂದು ಸುಷ್ಮಾ ಹೇಳಿದ್ದರು.
ಜುಲೈ ಇಪ್ಪತ್ತರಂದು, ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಶೀಲಾ ದೀಕ್ಷಿತ್ ಅವರನ್ಜು ದೆಹಲಿಯ ಫೋರ್ಟಿಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಅಂದೇ ಮಧ್ಯಾಹ್ನ ಅವರು ಕೊನೆಯುಸಿರೆಳೆದಿದ್ದರು.
-
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ












Click it and Unblock the Notifications