ಉಗ್ರರ ಕಪಿಮುಷ್ಟಿಯಿಂದ ಇಬ್ಬರು ಭಾರತೀಯರ ರಕ್ಷಣೆ
ನವದೆಹಲಿ, ಸೆ. 15: ಸುಮಾರು 15 ತಿಂಗಳುಗಳ ಕಾಲ ಲಿಬಿಯಾದಲ್ಲಿ ಐಎಸ್ ಐಎಸ್ ಉಗ್ರರ ಕಪಿಮುಷ್ಟಿಯಲ್ಲಿದ್ದ ಇಬ್ಬರು ಭಾರತೀಯರನ್ನು ರಕ್ಷಣೆ ಮಾಡಲಾಗಿದೆ. ಈ ಬಗ್ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಗುರುವಾರ ಟ್ವೀಟ್ ಮಾಡಿದ್ದಾರೆ.
ಲಿಬಿಯಾದಲ್ಲಿ ಜುಲೈ 29, 2015ರಿಂದ ಒತ್ತೆಯಾಳಾಗಿದ್ದ ಟಿ. ಗೋಪಾಲಕೃಷ್ಣ (ಆಂಧ್ರ ಪ್ರದೇಶ) ಮತ್ತು ಸಿ. ಬಲರಾಮ್ ಕಿಶನ್ (ತೆಲಂಗಾಣ) ಅವರನ್ನು ರಕ್ಷಿಸಲಾಗಿದೆ ಎಂದು ಸುಷ್ಮಾ ಇಂದು ಟ್ವೀಟ್ ಮಾಡಿದ್ದಾರೆ.

ಲಿಬಿಯಾದ ಉತ್ತರದಲ್ಲಿರುವ ಸಿರ್ತೆ ಯೂನಿವರ್ಸಿಟಿಯಲ್ಲಿ ಪ್ರಾಧ್ಯಾಪಕರಾಗಿದ್ದ ಇವರನ್ನು ಕಳೆದ ವರ್ಷ ಜುಲೈನಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿಗಳು ಅಪಹರಿಸಿದ್ದರು.
I am happy to inform that T Gopalakrishna (AP) & C BalaramKishan (Telangana) who were captive in Libya since 29 July 2015 have been rescued.
— Sushma Swaraj (@SushmaSwaraj) September 15, 2016
ಲಕ್ಷ್ಮಿಕಾಂತ್, ವಿಜಯ್ ಕುಮಾರ್, ಬಲರಾಮ್ ಹಾಗೂ ಗೋಪಾಲಕೃಷ್ಣ ನಾಲ್ವರನ್ನು ಅಪಹರಿಸಲಾಗಿತ್ತು. ಲಕ್ಷ್ಮಿಕಾಂತ್ ಹಾಗೂ ಕುಮಾರ್ ಅವರು ಕರ್ನಾಟಕ ಮೂಲದವರಾಗಿದ್ದು, ಅಪಹರಣವಾದ ನಾಲ್ಕು ದಿನಗಳಲ್ಲೇ ರಕ್ಷಿಸಲಾಗಿತ್ತು.
ಆದರೆ, ತೆಲಂಗಾಣದ ಬಲರಾಮ್ ಹಾಗೂ ಆಂಧ್ರದ ಗೋಪಾಲಕೃಷ್ಣ ಅವರನ್ನು ಬಿಡುಗಡೆ ಮಾಡಿರಲಿಲ್ಲ. ಅವರ ಕುಟುಂಬದವರು ಕೂಡಾ ಆಸೆ ಬಿಟ್ಟಿದ್ದರು. ಆದರೆ, ವಿದೇಶಾಂಗ ಸಚಿವಾಲಯದ ಸತತ ಪ್ರಯತ್ನ, ಸಂಧಾನದ ಫಲವಾಗಿ ಇಬ್ಬರು ಇವತ್ತು ಬಿಡುಗಡೆಗೊಂಡಿದ್ದಾರೆ. (ಒನ್ಇಂಡಿಯಾ ಸುದ್ದಿ)
-
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ











Click it and Unblock the Notifications