ಉಗ್ರರ ಕಪಿಮುಷ್ಟಿಯಿಂದ ಇಬ್ಬರು ಭಾರತೀಯರ ರಕ್ಷಣೆ
ನವದೆಹಲಿ, ಸೆ. 15: ಸುಮಾರು 15 ತಿಂಗಳುಗಳ ಕಾಲ ಲಿಬಿಯಾದಲ್ಲಿ ಐಎಸ್ ಐಎಸ್ ಉಗ್ರರ ಕಪಿಮುಷ್ಟಿಯಲ್ಲಿದ್ದ ಇಬ್ಬರು ಭಾರತೀಯರನ್ನು ರಕ್ಷಣೆ ಮಾಡಲಾಗಿದೆ. ಈ ಬಗ್ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಗುರುವಾರ ಟ್ವೀಟ್ ಮಾಡಿದ್ದಾರೆ.
ಲಿಬಿಯಾದಲ್ಲಿ ಜುಲೈ 29, 2015ರಿಂದ ಒತ್ತೆಯಾಳಾಗಿದ್ದ ಟಿ. ಗೋಪಾಲಕೃಷ್ಣ (ಆಂಧ್ರ ಪ್ರದೇಶ) ಮತ್ತು ಸಿ. ಬಲರಾಮ್ ಕಿಶನ್ (ತೆಲಂಗಾಣ) ಅವರನ್ನು ರಕ್ಷಿಸಲಾಗಿದೆ ಎಂದು ಸುಷ್ಮಾ ಇಂದು ಟ್ವೀಟ್ ಮಾಡಿದ್ದಾರೆ.

ಲಿಬಿಯಾದ ಉತ್ತರದಲ್ಲಿರುವ ಸಿರ್ತೆ ಯೂನಿವರ್ಸಿಟಿಯಲ್ಲಿ ಪ್ರಾಧ್ಯಾಪಕರಾಗಿದ್ದ ಇವರನ್ನು ಕಳೆದ ವರ್ಷ ಜುಲೈನಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿಗಳು ಅಪಹರಿಸಿದ್ದರು.
I am happy to inform that T Gopalakrishna (AP) & C BalaramKishan (Telangana) who were captive in Libya since 29 July 2015 have been rescued.
— Sushma Swaraj (@SushmaSwaraj) September 15, 2016
ಲಕ್ಷ್ಮಿಕಾಂತ್, ವಿಜಯ್ ಕುಮಾರ್, ಬಲರಾಮ್ ಹಾಗೂ ಗೋಪಾಲಕೃಷ್ಣ ನಾಲ್ವರನ್ನು ಅಪಹರಿಸಲಾಗಿತ್ತು. ಲಕ್ಷ್ಮಿಕಾಂತ್ ಹಾಗೂ ಕುಮಾರ್ ಅವರು ಕರ್ನಾಟಕ ಮೂಲದವರಾಗಿದ್ದು, ಅಪಹರಣವಾದ ನಾಲ್ಕು ದಿನಗಳಲ್ಲೇ ರಕ್ಷಿಸಲಾಗಿತ್ತು.
ಆದರೆ, ತೆಲಂಗಾಣದ ಬಲರಾಮ್ ಹಾಗೂ ಆಂಧ್ರದ ಗೋಪಾಲಕೃಷ್ಣ ಅವರನ್ನು ಬಿಡುಗಡೆ ಮಾಡಿರಲಿಲ್ಲ. ಅವರ ಕುಟುಂಬದವರು ಕೂಡಾ ಆಸೆ ಬಿಟ್ಟಿದ್ದರು. ಆದರೆ, ವಿದೇಶಾಂಗ ಸಚಿವಾಲಯದ ಸತತ ಪ್ರಯತ್ನ, ಸಂಧಾನದ ಫಲವಾಗಿ ಇಬ್ಬರು ಇವತ್ತು ಬಿಡುಗಡೆಗೊಂಡಿದ್ದಾರೆ. (ಒನ್ಇಂಡಿಯಾ ಸುದ್ದಿ)
-
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಇಸ್ರೇಲ್-ಯುಎಸ್ ಜಂಟಿ ದಾಳಿ ಅಬ್ಬರ: ಇರಾನ್ಗೆ ಉತ್ತರಾಧಿಕಾರಿ ನೇಮಕ, ಇಂದಿನ ಪ್ರಮುಖಾಂಶಗಳು ಇಲ್ಲಿವೆ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications