ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಯೋಧರು
ಕುಪ್ವಾರ (ಜಮ್ಮು ಮತ್ತು ಕಾಶ್ಮೀರ), ಮೇ 14 : ಭಾರತೀಯ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಲಷ್ಕರ್ ಉಗ್ರರನ್ನು ಯೋಧರು ಹೊಡೆದುರುಳಿಸಿದ್ದಾರೆ.
ಭಾನುವಾರ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಯೋಧರು ಹಾಗೂ ಲಷ್ಕರ್ ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದೆ. ದಾಳಿಯಲ್ಲಿ ಉಗ್ರ ಸಂಘಟನೆ ಲಷ್ಕರ್ ಗೆ ಸೇರಿದ ಇಬ್ಬರನ್ನು ಭಾರತೀಯ ಸೇನೆ ಎನ್ ಕೌಂಟರ್ ಮಾಡಿ ಬಿಸಾಕಿದೆ.[ಜಮ್ಮು ಮತ್ತು ಕಾಶ್ಮೀರ ಎನ್ಕೌಂಟರ್, ಓರ್ವ ಉಗ್ರ, 3 ನಾಗರೀಕರ ಸಾವು]

ಹಂದ್ವಾರದಲ್ಲಿ ಇನ್ನು ಉಗ್ರರು ಅಡಗಿರಬಹುದೆಂದು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಮುಂದುವರೆಸಿವೆ.












Click it and Unblock the Notifications