Shaligram stone: ರಾಮ, ಸೀತೆಯ ವಿಗ್ರಹ ನಿರ್ಮಾಣಕ್ಕಾಗಿ ನೇಪಾಳದಿಂದ ಅಯೋಧ್ಯೆ ತಲುಪಿದ ಸಾಲಿಗ್ರಾಮ ಶಿಲೆಗಳು
ನೇಪಾಳದಿಂದ ಉತ್ತರ ಪ್ರದೇಶದ ಅಯೋಧ್ಯೆಗೆ ಎರಡು ಅಪರೂಪದ ಸಾಲಿಗ್ರಾಮ ಶಿಲೆಗಳನ್ನು ತರಿಸಲಾಗಿದ್ದು, ಇವುಗಳಿಗೆ ಜನರು ಭಕ್ತಿಪೂರ್ವಕ ನಮನ ಮಾಡಿ ಅದ್ದೂರಿಯಿಂದ ಸ್ವಾಗತಿಸಿದ್ದಾರೆ. ಇವುಗಳ ವಿಶೇಷತೆ ತಿಳಿಯಲು ಮುಂದೆ ಓದಿ.
ಲಕ್ನೋ, ಫೆಬ್ರವರಿ. 02: ಅಯೋಧ್ಯೆಯ ರಾಮಮಂದಿರಕ್ಕಾಗಿ ನೇಪಾಳದಿಂದ ತರಿಸಲಾಗಿರುವ ಎರಡು ಸಾಲಿಗ್ರಾಮದ ಕಲ್ಲುಗಳು ಗುರುವಾರ ತಮ್ಮ ಗಮ್ಯಸ್ಥಾನವನ್ನು ತಲುಪಿವೆ. ಈ ಕಲ್ಲುಗಳನ್ನು ಹಿಂದೂ ಧರ್ಮದಲ್ಲಿ ಭಗವಾನ್ ವಿಷ್ಣುವಿನ ಅಮೂರ್ತ ರೂಪದ ಪ್ರಾತಿನಿಧ್ಯಗಳು ಎಂದು ಭಾವಿಸಲಾಗುತ್ತದೆ.
ಈ ಶಿಲೆಗಳನ್ನು ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಭಗವಾನ್ ರಾಮನ ವಿಗ್ರಹ ಮತ್ತು ಸೀತಾದೇವಿಯ ವಿಗ್ರಹವನ್ನು ಕೆತ್ತಲು ಬಳಸಲಾಗುತ್ತದೆ ಎಂದು ಹೇಳಲಾಗಿದೆ.
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ಸಾಲಿಗ್ರಾಮ ಕಲ್ಲುಗಳನ್ನು ಹಸ್ತಾಂತರಿಸುವ ಮೊದಲು ಈ ಕಲ್ಲುಗಳಿಗೆ ಅರ್ಚಕರು ಮತ್ತು ಸ್ಥಳೀಯರು ಹೂಮಾಲೆಯಿಂದ ಅಲಂಕರಿಸಿ ಧಾರ್ಮಿಕ ವಿಧಿಗಳನ್ನು ಮಾಡಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.

ಈ ಬಂಡೆಗಳನ್ನು ರಾಮ ಮತ್ತು ಜಾನಕಿ ಮೂರ್ತಿಗಳ ನಿರ್ಮಾಣಕ್ಕೆ ಬಳಸಿಕೊಳ್ಳುವ ನಿರೀಕ್ಷೆ ಇದ್ದು, ನಿರ್ಮಾಣ ಹಂತದಲ್ಲಿರುವ ರಾಮಮಂದಿರದ ಮುಖ್ಯ ದೇವಾಲಯದ ಸಂಕೀರ್ಣದಲ್ಲಿ ಇದನ್ನು ಇರಿಸಲಾಗುವುದು.
मेरे श्रीराम आए हैं।#शालिग्राम #Shaligram #Ayodhya pic.twitter.com/N4gZzvtVaq
— Dr. Sarvan Baghel (@baghelsarvan) February 2, 2023
"60 ಮಿಲಿಯನ್ ವರ್ಷಗಳಷ್ಟು ಹಳೆಯದಾದ ಈ ಸಾಲಿಗ್ರಾಮ ಶಿಲೆಗಳು ಎರಡು ವಿಭಿನ್ನ ಟ್ರಕ್ಗಳಲ್ಲಿ ನೇಪಾಳದಿಂದ ಅಯೋಧ್ಯೆಗೆ ತಲುಪಿವೆ. ಒಂದು ಬಂಡೆ 26 ಟನ್ ಮತ್ತು ಇನ್ನೊಂದು 14 ಟನ್ ತೂಕವಿದೆ" ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಕಚೇರಿ ಉಸ್ತುವಾರಿ ಪ್ರಕಾಶ್ ಗುಪ್ತಾ ಮಾಹಿತಿ ನೀಡಿದ್ದಾರೆ.
ಈ ಕಲ್ಲಿನಿಂದ ಕೆತ್ತಿದ ಮಗುವಿನ ರೂಪದಲ್ಲಿರುವ ಶ್ರೀರಾಮನ ವಿಗ್ರಹವನ್ನು ರಾಮಮಂದಿರದ ಗರ್ಭಗುಡಿಯಲ್ಲಿ ಇರಿಸಲಾಗುವುದು. ಮುಂದಿನ ವರ್ಷ ಜನವರಿಯಲ್ಲಿ ಮಕರ ಸಂಕ್ರಾಂತಿ ಹಬ್ಬದ ವೇಳೆಗೆ ವಿಗ್ರಹ ಸಿದ್ಧವಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೇಪಾಳದ ಮುಸ್ತಾಂಗ್ ಜಿಲ್ಲೆಯ ಸಾಲಿಗ್ರಾಮ ಅಥವಾ ಮುಕ್ತಿನಾಥ (ಮೋಕ್ಷದ ಸ್ಥಳ) ಸಮೀಪವಿರುವ ಸ್ಥಳದಲ್ಲಿ ಗಂಡಕಿ ನದಿಯಿಂದ ಈ ಎರಡು ಬಂಡೆಗಳು ತರಿಸಲಾಗಿದೆ.
ನೇಪಾಳದಲ್ಲಿ ಕಾಳಿ ಗಂಡಕಿ ಎಂಬ ಜಲಪಾತವಿದೆ. ಇದು ಗಣೇಶ್ವರ ಧಾಮ್ ಗಂಡ್ಕಿಯಿಂದ ಉತ್ತರಕ್ಕೆ 85 ಕಿಮೀ ದೂರದಲ್ಲಿರುವ ದಾಮೋದರ್ ಕುಂಡ್ನಿಂದ ಹುಟ್ಟುತ್ತದೆ. ಎರಡೂ ಬಂಡೆಗಳನ್ನು ಅಲ್ಲಿಂದ ತರಲಾಗಿದೆ. ಈ ಸ್ಥಳವು ಸಮುದ್ರ ಮಟ್ಟದಿಂದ 6,000 ಅಡಿ ಎತ್ತರದಲ್ಲಿದೆ. ಇದು ಕೋಟಿ ವರ್ಷಗಳಷ್ಟು ಹಳೆಯದು ಎಂದೂ ಜನ ಹೇಳುತ್ತಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.
ಇನ್ನು, ಅಯೋಧ್ಯೆಯಲ್ಲಿ ರಾಮ ಮಂದಿರವನ್ನು 2024ರ ಜನವರಿ 1 ರಂದು ಉದ್ಘಾಟಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಹಿಂದೆ ತ್ರಿಪುರಾದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದರು.
ಪೂರ್ಣಗೊಂಡಿರುವ ರಾಮ ಮಂದಿರವು ನೆಲ ಅಂತಸ್ತಿನಲ್ಲಿ 160 ಆವರಣಗಳನ್ನು, ಮೊದಲ ಮಹಡಿಯಲ್ಲಿ 132 ಆವರಣಗಳನ್ನು ಮತ್ತು ಎರಡನೇ ಮಹಡಿಯಲ್ಲಿ 74 ಆವರಣಗಳನ್ನು ಹೊಂದಿರುತ್ತದೆ. ಐದು ಮಂಟಪಗಳು ಇರುತ್ತವೆ. ಮೈದಾನದಲ್ಲಿ ಯಾತ್ರಿಕರ ಸೌಕರ್ಯ ಕೇಂದ್ರ, ವಸ್ತುಸಂಗ್ರಹಾಲಯ, ದಾಖಲೆಗಳು, ಸಂಶೋಧನಾ ಕೇಂದ್ರ, ಸಭಾಂಗಣ, ಗೋಶಾಲೆ, ಆಡಳಿತ ಕಟ್ಟಡ ಮತ್ತು ಅರ್ಚಕರಿಗೆ ಕೊಠಡಿಗಳನ್ನು ಹೊಂದಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications