ಶಂಕಿತ ಇಬ್ಬರು ಉಗ್ರರಿಗೂ ಸೋನಿಯಾ ಆಪ್ತ ಕಾರ್ಯದರ್ಶಿಗೂ ಏನು ಸಂಬಂಧ?
ಗುಜರಾತಿನ ಭಯೋತ್ಪಾದನಾ ನಿಗ್ರಹ (ಎಟಿಎಸ್) ದಳ ಇಬ್ಬರು ಶಂಕಿತ ಐಎಸ್ಐಎಸ್ ಉಗ್ರರನ್ನು ಸೂರತ್ ನಲ್ಲಿ ಎರಡು ದಿನದ ಹಿಂದೆ ಬಂಧಿಸಿತ್ತು. ಈ ಸಂಬಂಧ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ನೀಡಿರುವ ಹೇಳಿಕೆ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮತ್ತೊಂದು ಸುತ್ತಿನ ವಾಕ್ಸಮರಕ್ಕೆ ದಾರಿ ಮಾಡಿಕೊಟ್ಟಿದೆ.
ಇಬ್ಬರು ಶಂಕಿತ ಉಗ್ರರಲ್ಲಿ ಒಬ್ಬ ಅಂಕಲೇಶ್ವರ ಸರ್ದಾರ್ ಪಟೇಲ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಈ ಆಸ್ಪತ್ರೆಯ ಟ್ರಸ್ಟಿಗಳಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಆಪ್ತ/ರಾಜಕೀಯ ಕಾರ್ಯದರ್ಶಿ ಅಹಮದ್ ಪಟೇಲ್ ಕೂಡಾ ಒಬ್ಬರು.
ಭರೂಚ್ ನಲ್ಲಿ ನವೀಕರಣಗೊಂಡ ಆಸ್ಪತ್ರೆಯ ಉದ್ಘಾಟನೆಯಲ್ಲಿ ಅಂದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಜೊತೆ ಅಹಮದ್ ಪಟೇಲ್ ಕೂಡಾ ಭಾಗವಹಿಸಿದ್ದರು. ಇಬ್ಬರು ಬಂಧಿತ ಶಂಕಿತ ಉಗ್ರರಲ್ಲಿ ಒಬ್ಬ ಈ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಗುಜರಾತ್ ಸಿಎಂ ರೂಪಾನಿ ಹೇಳಿದ್ದಾರೆ.
ಇಂತಹ ಉಗ್ರನಿಗೆ ತಮ್ಮ ಆಸ್ಪತೆಯಲ್ಲಿ ಕೆಲಸ ನೀಡಿದ್ದಕ್ಕೆ, ನೈತಿಕ ಹೊಣೆಹೊತ್ತು ಅಹಮದ್ ಪಟೇಲ್ ರಾಜೀನಾಮೆ ನೀಡಬೇಕೆಂದು ರೂಪಾನಿ ಒತ್ತಾಯಿಸಿದ್ದಾರೆ. ರೂಪಾನಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಚುನಾವಣೆಯ ವೇಳೆ ಬಿಜೆಪಿ ಅಸಾಹಯಕತೆಯಿಂದ ಈ ಹೇಳಿಕೆ ನೀಡುತ್ತಿದೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
ಆಸ್ಪತ್ರೆಯ ಮಾನವ ಸಂಪನ್ಮೂಲ ಇಲಾಖೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಮೊಹಮ್ಮದ್ ಖಾಸಿಂ ಎನ್ನುವ ವ್ಯಕ್ತಿಯನ್ನು ಮಾಮೂಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಕಂಪೆನಿಗೆ ಸೇರಿಸಿಕೊಳ್ಳಲಾಗಿತ್ತು, ಈ ಅಕ್ಟೋಬರ್ ನಾಲ್ಕರಂದು ಆತ ಕಂಪೆನಿಗೆ ರಾಜೀನಾಮೆ ನೀಡಿದ್ದಾನೆ. ಈತನಿಗೆ ಉಗ್ರರ ಜೊತೆ ಸಂಬಂಧವಿದೆ ಎನ್ನುವ ಮಾಹಿತಿ ನಮಗಿರಲಿಲ್ಲ ಎಂದು ಇಲಾಖೆ ಸ್ಪಷ್ಟ ಪಡಿಸಿದೆ. ಮುಂದೆ ಓದಿ...

ಅಹಮದ್ ಪಟೇಲ್ ರಾಜೀನಾಮೆ ನೀಡಲಿ
ಅಹಮದ್ ಪಟೇಲ್ ರಾಜೀನಾಮೆ ನೀಡಬೇಕೆಂದು ಗುಜರಾತ್ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಎಟಿಎಸ್ ಕಾರ್ಯಾಚರಣೆಯನ್ನು ನಾವು ಮನಸಾರೆ ಹೊಗಳುತ್ತೇವೆ. ಆದರೆ, ಬಿಜೆಪಿ ಆರೋಪ ತಲೆಬುಡ ಇಲ್ಲದಂತದ್ದು. ದೇಶದ ಭದ್ರತೆ ನಮಗೆ ಮೊದಲ ಆದ್ಯತೆ, ಇಂತಹ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಬಾರದು ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ with ಟೆರರಿಸ್ಟ್ ಹ್ಯಾಷ್ ಟ್ಯಾಗ್
#CongressWithTerrorists ಎನ್ನುವ ಟ್ವಿಟ್ಟರ್ ಹ್ಯಾಷ್ ಟ್ಯಾಗ್ ಟ್ರೆಂಡಿಂಗ್ ನಲ್ಲಿದ್ದು, ಭಯೋತ್ಪಾದಕರಿಗಾಗಿ ಅಹ್ಮದ್ ಪಟೇಲ್ ಒಂದು ಆಸ್ಪತ್ರೆಯನ್ನು ಸುರಕ್ಷಿತ ತಾಣ ಮಾಡಲು ಸಾಧ್ಯವಾದರೆ, ಕಾಂಗ್ರೆಸ್ ನೇತೃತ್ವದಲ್ಲಿ ಗುಜರಾತ್ ಯಾವ ಮಟ್ಟಕ್ಕೆ ಇಳಿಯುತ್ತಿತ್ತು ಎನ್ನುವ ಟ್ವೀಟ್.

ಕಾಂಗ್ರೆಸ್ ಮತ್ತು ಭಯೋತ್ಪಾದನೆ ಇಬ್ಬರೂ ಒಂದೇ
ಕಾಂಗ್ರೆಸ್ ಮತ್ತು ಭಯೋತ್ಪಾದನೆ ಇಬ್ಬರೂ ಒಂದೇ. ಯಾಕೆ ಅಹಮದ್ ಪಟೇಲ್, ತನ್ನ ಆಸ್ಪತೆಯಲ್ಲಿ ಉಗ್ರನಿಗೆ ನೆಲೆ ಕೊಡಬೇಕಿತ್ತು.

ಅಹಮದ್ ಪಟೇಲ್, ಸೋನಿಯಾ ಕಾರ್ಯದರ್ಶಿ
ಸೋನಿಯಾ ಆಪ್ತನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಶಂಕಿತ ಉಗ್ರನ ಬಂಧನ. ಗುಜರಾತ್ ಚುನಾವಣೆಯನ್ನು ಉಗ್ರರ ಸಹಾಯದೊಂದಿಗೆ ಕಾಂಗ್ರೆಸ್ ಗೆಲಲ್ಲು ಪ್ರಯತ್ನಿಸುತ್ತಿದೆಯೇ?

ISI ಗೂಢಚಾರ ಎಂದು ವ್ಯಕ್ತಿಯ ಫೋಟೋ
ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಭಾಷಣ ಮಾಡುತ್ತಿದ್ದ ಇಮೇಜನ್ನು ಹಾಕಿ, ಅದರ ಹಿಂದೆ ISI ಗೂಢಚಾರ ಎಂದು ವ್ಯಕ್ತಿಯ ಫೋಟೋ ಹಾಕಿರುವ ಟ್ವೀಟ್

ಝಾಕೀರ್ ಹುಸೇನ್ ಅವರನ್ನು ಬರಮಾಡಿಕೊಂಡಿತ್ತು
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಲು ಝಾಕೀರ್ ಹುಸೇನ್ ಅವರನ್ನು ಬರಮಾಡಿಕೊಂಡಿತ್ತು. ದೇಶಕ್ಕೆ ಬ್ರಿಟಿಷರಿಗಿಂತ ಜಾಸ್ತಿ ತೊಂದರೆಯಾಗಿರುವುದು ಕಾಂಗ್ರೆಸ್ಸಿನಿಂದ ಎನ್ನುವ ಟ್ವೀಟ್.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications