ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೆ.14 ಭಾರತಕ್ಕೆ ಕರಾಳ ದಿನ, ಯೋಧರ ಬಲಿದಾನ ಸ್ಮರಣೀಯ

|
Google Oneindia Kannada News

ಬೆಂಗಳೂರು, ಫೆಬ್ರವರಿ 14: ಕಣಿವೆ ರಾಜ್ಯದ ಪುಲ್ವಾಮಾ ಬಳಿ 2019ರ ಫೆಬ್ರವರಿ14ರಂದು ಉಗ್ರರ ದಾಳಿಯ ಕಹಿ ಸ್ಮರಣೆಗೆ ಇಂದು ಎರಡನೇ ವರ್ಷ. ಭಾರತೀಯರು ಇಂದು ಕರಾಳ ದಿನವನ್ನಾಗಿ ಆಚರಣೆ ಮಾಡುತ್ತಿದ್ದಾರೆ. ದೇಶಕ್ಕಾಗಿ ಪ್ರಾಣತೆತ್ತ ವೀರಯೋಧರಿಗೆ ನಮನ ಸಲ್ಲಿಸುತ್ತಿದ್ದಾರೆ.

78 ಸೇವಾ ವಾಹನಗಳಲ್ಲಿ 2,547 ಸಿಆರ್ ಪಿಎಫ್ ಯೋಧರು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಮೂಲಕ ತೆರಳುತ್ತಿದ್ದರು. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಪುಲ್ವಾಮಾ ಬಳಿಯ ಅವಂತಿಪೊರ್ ಸಮೀಪದಲ್ಲಿ ಸೇನಾ ವಾಹನ ಸ್ಫೋಟಗೊಂಡಿತು. ಜೈಷ್-ಇ-ಮೊಹಮ್ಮದ್ ಸಂಘಟನೆಯ ವಾಹನದಲ್ಲಿದ್ದ ಆತ್ಮಾಹುತಿ ಬಾಂಬರ್ ಕೃತ್ಯ ಇದಾಗಿತ್ತು. 22 ವರ್ಷ ವಯಸ್ಸಿನ ಆದ್ಲ್ ಅಹ್ಮದ್ ದರ್ ಈ ಕೃತ್ಯ ಎಸಗಿದ್ದ. ಈ ದುರ್ಘಟನೆಯಲ್ಲಿ 40 ಮಂದಿ ಸಿಆರ್ ಪಿಎಫ್ ಯೋಧರು ಹುತಾತ್ಮರಾದರೆ, 39 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.

Two years of Pulwama terror attack: Netizens remember sacrifice of CRPF soldiers

 ಕಾಶ್ಮೀರದಿಂದ ವಾಪಸ್ ಬಂದ ಪತ್ರಕರ್ತ ರವಿ ಬೆಳಗೆರೆ ಹಂಚಿಕೊಂಡ ಎದೆ ನಡುಗಿಸುವ ಮಾಹಿತಿಗಳು ಕಾಶ್ಮೀರದಿಂದ ವಾಪಸ್ ಬಂದ ಪತ್ರಕರ್ತ ರವಿ ಬೆಳಗೆರೆ ಹಂಚಿಕೊಂಡ ಎದೆ ನಡುಗಿಸುವ ಮಾಹಿತಿಗಳು

ಜೈಷ್-ಇ-ಮೊಹಮ್ಮದ್ ಸಂಘಟನೆಯ ಆತ್ಮಾಹುತಿ ಬಾಂಬರ್ ತೆಗೆದುಕೊಂಡು ಬಂದಿದ್ದ ವಾಹನದಲ್ಲಿ ಭಾರಿ ಪ್ರಮಾಣದ ಸ್ಫೋಟಕಗಳನ್ನು ತುಂಬಲಾಗಿತ್ತು. ಬರೋಬ್ಬರಿ 300 ಕೆಜಿ ಸ್ಫೋಟಕಗಳ ಜೊತೆಗೆ 80 ಕೆಜಿ ಆರ್ ಡಿಎಕ್ಸ್ ನ್ನು ವಾಹನದಲ್ಲಿ ತುಂಬಿಕೊಂಡು ಬಂದಿದ್ದ ಎಂದು ಪ್ರಾಥಮಿಕ ತನಿಖೆ ವೇಳೆ ಪತ್ತೆಯಾಗಿತ್ತು.

 ಪುಲ್ವಮಾ ದಾಳಿಗೆ ಪ್ರತೀಕಾರ; ಬಾಲಕೋಟ್‌ ದಾಳಿ ಯೋಜನೆ ಹೇಗಿತ್ತು? ಪುಲ್ವಮಾ ದಾಳಿಗೆ ಪ್ರತೀಕಾರ; ಬಾಲಕೋಟ್‌ ದಾಳಿ ಯೋಜನೆ ಹೇಗಿತ್ತು?

ಹುತಾತ್ಮರಾದ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿ ಆರ್ ಪಿಎಫ್) ಯೋಧರನ್ನು ಭಾರತ ಸರ್ಕಾರ ಗೌರವಿಸಿ ನಮನ ಸಲ್ಲಿಸಿದೆ. ಎಎಸ್ಐ ಮೋಹನ್ ಲಾಲ್ ಅವರಿಗೆ ಮರಣೋತ್ತರವಾಗಿ ರಾಷ್ಟ್ರಪತಿ ಪೊಲೀಸ್ ಶೌರ್ಯ ಪ್ರಶಸ್ತಿ ನೀಡಲಾಗಿದೆ. ಪುಲ್ವಾಮಾ ದಾಳಿಗೆ ಪ್ರತಿಯಾಗಿ ಭಾರತ ಬಾಲಾಕೋಟ್ ದಾಳಿ ನಡೆಸಿ ಸೇಡು ತೀರಿಸಿಕೊಂಡಿತ್ತು.

ಫೆ.14ರ ಕರಾಳ ದಿನದ ಬಗ್ಗೆ ಟ್ವಿಟ್ಟರಲ್ಲಿ ಸಾಕಷ್ಟು ಮಂದಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸುತ್ತಿದ್ದಾರೆ.

English summary
'Never forget, never forgive': Netizens remember sacrifice of CRPF soldiers on 2nd anniversary of Pulwama terror attack.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X