ಯೂಟ್ಯೂಬ್ ನಿಂದ ಕಳ್ಳತನ ಕಲಿತ 'ಬಾಡಿಗೆ' ಕಳ್ಳರು!
ಯೂ ಟ್ಯೂಬಿನಲ್ಲಿ ಕಳ್ಳತನ ಕಲಿತು, ಅದನ್ನು ಪ್ರಯೋಗಿಸುವುದಕ್ಕೆ ಹೊರಟ ಇಬ್ಬರು ವಿದ್ಯಾವಂತ ಕಳ್ಳರ ಕತೆಯಿದು!
ತಮಿಳುನಾಡು, ಮಾರ್ಚ್ 23: ಯೂಟ್ಯೂಬಿನಲ್ಲಿ ಕಳ್ಳತನ ಕಲಿತು, ತಮಿಳುನಾಡಿನ ಹೊಸೂರಿನ ಸುರೇಶ್ ಮತ್ತು ಲಕ್ಷ್ಮಿ ಎಂಬುವವರ ಮನೆಗೆ ಕಳ್ಳತನಮಾಡುವುದಕ್ಕೆಂದು ಬಂದಿದ್ದ ಇಬ್ಬರು 'ವಿದ್ಯಾವಂತ ಕಳ್ಳರು' ಇದೀಗ ಪೊಲೀಸರ ಅತಿಥಿಯಾಗಿದ್ದಾರೆ!
ಸುವೇತ ಮತ್ತು ಯತೀಶ್ ಎಂಬ ಇವರಿಬ್ಬರಲ್ಲಿ ಒಬ್ಬರು ಇಂಜಿನಿಯರಿಂಗ್ ಪದವೀಧರರಾದರೆ, ಇನ್ನೊಬ್ಬರು ಸ್ನಾತಕೋತ್ತರ ಪದವೀಧರರು! ಬೆಂಗಳೂರಿನ ಕಾಲೇಜೊಂದರಲ್ಲಿ ಒಟ್ಟಿಗೇ ಓದಿದ್ದ ಇವರು ಆಗಿನಿಂದಲೇ ಖಾಸಾ ಸ್ನೇಹಿತರು.[ಅಂಗಡಿಗೆ ನುಗ್ಗಿ ವಿವಿಧ ಬ್ರ್ಯಾಂಡ್ ಮೊಬೈಲ್ ಕದ್ದ ಖತರ್ನಾಕ್ ಕಳ್ಳರು]

ಮಾರ್ಚ್ 7 ರಂದು ಮಧ್ಯಾಹ್ನದ ಸಮಯದಲ್ಲಿ ಟು ಲೆಟ್ ಎಂದು ಬೋರ್ಡ್ ಹಾಕಲಾಗಿದ್ದ ಲಕ್ಷ್ಮಿ ಮತ್ತು ಸುರೇಶ್ ಅವರ ಮನೆಗೆ ಇವರು ಮನೆ ಬಾಡಿಗೆ ಕೇಳಿಕೊಂಡು ಹೋಗಿದ್ದಾರೆ. ಮನೆಯಲ್ಲಿ ಲಕ್ಷ್ಮಿಯೊಬ್ಬರೇ ಇದ್ದಿದ್ದರಿಂದ ಅವರ ಯೋಜನೆ ಸುಲಭವಾಗಿ ಕೈಗೂಡಬಹುದು ಎಂದುಕೊಂಡಿದ್ದಾರೆ.[ಬುಧವಾರ ಗುಂಡಿಬೈಲಿನಲ್ಲಿ ಬೆಳ್ಳಂಬೆಳಗ್ಗೆ ಸರಣಿಗಳ್ಳತನ]
ತಾವಿಬ್ಬರೂ ಅಣ್ಣ-ತಂಗಿ ಎಂದು ಪರಿಚಯಿಸಿಕೊಂಡಿರುವ ಇವರು, ಲಕ್ಷ್ಮಿ ಅವರ ಬಳಿ ಕುಡಿಯುವುದಕ್ಕೆ ನೀರು ಕೇಳಿದ್ದಾರೆ.
ನೀರು ತರುವುದಕ್ಕೆಂದು ಹೋಗಿದ್ದ ಲಕ್ಷ್ಮಿ ಅವರ ಮೇಲೆ ಹಲ್ಲೆ ನಡೆಸಿ ಮನೆ ದರೋಡೆಗೆ ಯತ್ನಿಸಿದ್ದಾರೆ. ಆದರೆ ತಕ್ಷಣವೇ ಸಮಯಪ್ರಜ್ಞೆ ಮೆರೆದ ಲಕ್ಷ್ಮಿ ಅಕ್ಕ ಪಕ್ಕದ ಮನೆಯವರಿಗೆಲ್ಲ ಕೇಳುವಂತೆ ಜೋರಾಗಿ ಕೂಗಿದ್ದಾರೆ.ಇದರಿಂದ ಆತಂಕಗೊಂಡ ಕಳ್ಳರು ತಪ್ಪಿಸಿಕೊಂಡು ಓಡಿದ್ದಾರೆ.[ಕಟೀಲು ದೇಗುಲ ಮುಕ್ತೇಸರ ಮನೆ ಕಳವು: 12ನೇ ಆರೋಪಿ ಬಂಧನ]
ಘಟನೆ ನಡೆದು ಎರಡು ವಾರದ ನಂತರ ಇದೀಗ ಈ ಇಬ್ಬರೂ ಪೊಲೀಸರಿಗೆ ಸಿಕ್ಕಿಹಾಕಿಕೊಂಡಿದ್ದಾರೆ. ಹೊಸೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನೀವೂ ಮನೆಯ ಮುಂದೆ 'ಟು ಲೆಟ್' ಅಂತ ಬೋರ್ಡ್ ಏನಾದ್ರೂ ಹಾಕಿದ್ರೆ ಯಾವ್ದಕ್ಕೂ ಹುಷಾರಾಗಿರಿ..!
-
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ












Click it and Unblock the Notifications