ಸಿಎಂ ಸ್ಥಾನಕ್ಕೆ ಉದ್ದವ್ ಠಾಕ್ರೆ ರಾಜೀನಾಮೆ: ನಟ ಪ್ರಕಾಶ್ ರಾಜ್ ಟ್ವೀಟ್
ಬೆಂಗಳೂರು, ಜೂನ್ 30: ಹಲವು ದಿನಗಳಿಂದ ಮಹಾರಾಷ್ಟ್ರದಲ್ಲಿ ನಡೆಯುತ್ತಿದ್ದ ರಾಜಕೀಯ ಪ್ರಹಸನಕ್ಕೆ ಬುಧವಾರ (ಜೂನ್ 29) ರಾತ್ರಿ ಒಂದು ಹಂತಕ್ಕೆ ತೆರೆಬಿದ್ದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಉದ್ದವ್ ಠಾಕ್ರೆ ರಾಜೀನಾಮೆ ನೀಡಿದ್ದಾರೆ.
ಸದ್ಯದ ರಾಜಕೀಯ ಬಿಜೆಪಿಯ ಲೆಕ್ಕಾಚಾರದಂತೆಯೇ ಸಾಗಿದರೆ ಮತ್ತೊಮ್ಮೆ ದೇವೇಂದ್ರ ಫಡ್ನವೀಸ್ ಸಿಎಂ ಸ್ಥಾನಕ್ಕೆ ಏರುವುದು ಬಹುತೇಕ ಖಚಿತ. ಶಿವಸೇನೆಯ ಮುಕ್ಕಾಲು ಭಾಗ ಶಾಸಕರು ಠಾಕ್ರೆ ಕಾರ್ಯವೈಖರಿಯ ವಿರುದ್ದ ಸಾಗಿದ್ದರೆ, ನಟ ಪ್ರಕಾಶ್ ರಾಜ್ (ರೈ) ಠಾಕ್ರೆ ಪರ ಬ್ಯಾಟ್ ಬೀಸಿದ್ದಾರೆ.
ಬಿಜೆಪಿಯ ಸಿದ್ದಾಂತದ ವಿರುದ್ದ ಇರುವ ಪ್ರಕಾಶ್ ರಾಜ್ ಮಹಾರಾಷ್ಟ್ರ ರಾಜಕೀಯದ ವಿಚಾರದಲ್ಲಿ ಟ್ವೀಟ್ ಮಾಡಿದ್ದು ಠಾಕ್ರೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಚಾಣಕ್ಯ (ಅಮಿತ್ ಶಾ) ಇಂದು ಲಡ್ಡು ತಿನ್ನುತ್ತಿರಬಹುದು ಆದರೆ, ನಿಮ್ಮ ಪ್ರಾಮಾಣಿಕತೆ ಬಹಳ ದಿನ ಉಳಿಯುತ್ತದೆ ಎಂದು ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ.

"ಸಿಎಂ ಠಾಕ್ರೆ ಅವರೇ ನೀವು ಅತ್ಯುತ್ತಮ ಕೆಲಸವನ್ನು ಮಾಡಿದ್ದೀರಿ.. ರಾಜ್ಯವನ್ನು ತಾವು ಮುನ್ನಡೆಸಿದ ರೀತಿಗೆ ಮಹಾರಾಷ್ಟ್ರದ ಜನತೆ ನಿಮ್ಮ ಪರವಾಗಿ ನಿಲ್ಲುತ್ತಾರೆ ಎನ್ನುವ ನಂಬಿಕೆ ನನಗಿದೆ. ಚಾಣಕ್ಯ ಇಂದು ಲಡ್ಡು ತಿನ್ನುತ್ತಿರಬಹುದು, ಆದರೆ, ನಿಮ್ಮ ಪ್ರಾಮಾಣಿಕತೆ ಹೆಚ್ಚು ಕಾಲ ಉಳಿಯುತ್ತದೆ. ನಿಮಗೆ ಹೆಚ್ಚು ಶಕ್ತಿಯನ್ನೂ ನೀಡಲಿದೆ"ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ.
ಪ್ರಕಾಶ್ ರಾಜ್ ಅವರ ಈ ಟ್ವೀಟ್ ಸುಮಾರು 1,700 ರಿಟ್ವೀಟ್ ಪಡೆದುಕೊಂಡಿದ್ದು, ಎಂದಿನಂತೆ ಪರ ವಿರೋಧ ಚರ್ಚೆ ಈ ಪೋಸ್ಟ್ ವಿಚಾರದಲ್ಲಿ ನಡೆಯುತ್ತಿದೆ. ಕಂಗನಾ ರಣಾವತ್ ಅವರು ಹಿಂದೆ ಠಾಕ್ರೆ ಬಗ್ಗೆ ನೀಡಿದ್ದ ಹೇಳಿಕೆಯನ್ನು ಟ್ವಿಟ್ಟಿಗರು ಮತ್ತೆ ಎಳೆದು ತಂದು ಹಾಕುತ್ತಿದ್ದಾರೆ.
You did great dear sir @OfficeofUT … and I’m sure people of Maharashtra will stand by you for the way you handled the state.. the Chanakya s may eat laddoos today.. but your genuinity will linger longer .. more power to you.. #justasking
— Prakash Raj (@prakashraaj) June 29, 2022
ಗುರುವಾರವೇ ಬಹುಮತ ಸಾಬೀತುಪಡಿಸಬೇಕು ಎಂಬ ಸುಪ್ರೀಂಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಉದ್ದವ್ ಠಾಕ್ರೆ ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದ್ದರು. ಫೇಸ್ಬುಕ್ ಲೈವ್ನಲ್ಲಿ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ ರಾಜೀನಾಮೆ ಘೋಷಿಸಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications