ಉಗ್ರ ನವೀದ್ ಸಹಚರರು ನಿಮ್ಮ ಊರಿನಲ್ಲಿದ್ದಾರೆಯೇ?
ನವದೆಹಲಿ, ಆಗಸ್ಟ್ 18 : ಉದಾಂಪುರ್ನಲ್ಲಿ ಬಿಎಸ್ಎಫ್ ಪಡೆಯ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಉಗ್ರ ಮೊಹಮ್ಮದ್ ನವೀದ್ಗೆ ಸಹಕಾರ ನೀಡಿದ ಇಬ್ಬರು ಶಂಕಿತರ ರೇಖಾಚಿತ್ರವನ್ನು ಎನ್ಐಎ ಬಿಡುಗಡೆ ಮಾಡಿದೆ. ಉಗ್ರರ ಸುಳಿವು ಕೊಟ್ಟವರಿಗೆ 5 ಲಕ್ಷ ರೂ. ಬಹುಮಾನವನ್ನು ಘೋಷಣೆ ಮಾಡಲಾಗಿದೆ.
ರಾಷ್ಟ್ರೀಯ ತನಿಖಾ ದಳ ಉದಾಂಪುರ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ತನಿಖೆಯನ್ನು ನಡೆಸುತ್ತಿದೆ. ಮೊಹಮ್ಮದ್ ನವೀದ್ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದೆ. ವಿಚಾರಣೆ ವೇಳೆಯೇ ನವೀದ್ ಜರ್ಗಮಂ, ಅಬು ಒಕಾಶಾ ಎಂಬುವವರು ತನಗೆ ಸಹಾಯ ಮಾಡಿದ್ದರು ಎಂದು ಹೇಳಿದ್ದಾನೆ. [ಉಗ್ರ ನವೀದ್ NIA ವಶಕ್ಕೆ]

ನವೀದ್ ಹೇಳಿಕೆ ಆಧರಿಸಿ ಎನ್ಐಎ ಇಬ್ಬರು ಉಗ್ರರಿಗಾಗಿ ಹುಡುಕಾಟ ಆರಂಭಿಸಿದೆ. ನವೀದ್ ನೀಡಿದ ಮಾಹಿತಿ ಅನ್ವಯ ಉಗ್ರರ ರೇಖಾಚಿತ್ರಗಳನ್ನು ರಚಿಸಿ ಬಿಡುಗಡೆ ಮಾಡಲಾಗಿದ್ದು, ಇವರ ಸುಳಿವು ಕೊಟ್ಟವರಿಗೆ 5 ಲಕ್ಷ ರೂ.ಗಳ ಬಹುಮಾನವನ್ನು ಘೋಷಿಸಲಾಗಿದೆ. [ನವೀದ್ ಲಷ್ಕರ್ ಸೇರಿದ್ದು ಹೇಗೆ?]
ಇಬ್ಬರು ಪಾಕಿಸ್ತಾನದವರು : ಜರ್ಗಮಂ, ಅಬು ಒಕಾಶಾ ಇಬ್ಬರು ಪಾಕಿಸ್ತಾನದ ಖೈಬರ್ ಪ್ರಾಂತ್ಯದ ಪಾಕ್ತುನ್ವಾಗೆ ಸೇರಿದವರಾಗಿದ್ದಾರೆ. ಜರ್ಗಮಂ ಅಲಿಯಾಸ್ ಮೊಹಮ್ಮದ ಬಾಯಿ ಸುಮಾರು 38 ರಿಂದ 40 ವರ್ಷದವನಾಗಿದ್ದಾನೆ. ಅಬು ಒಕಾಶಾ 17 ರಿಂದ 18 ವರ್ಷದವನಾಗಿದ್ದು ಪಾಕ್ತುನ್ವಾದ ನಿವಾಸಿಯಾಗಿದ್ದಾನೆ.
ಮೊಹಮ್ಮದ್ ನವೀದ್ನಂತೆ ಈ ಇಬ್ಬರು ಸಹ ಲಷ್ಕರ್ನಿಂದ ತರಬೇತಿ ಪಡೆದವರಾಗಿರಬಹುದು ಎಂದು ಎನ್ಐಎ ಶಂಕಿಸಿದ್ದು, ಇವರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಣೆ ಮಾಡುತ್ತಿದೆ. ಇಂದು ಮೊಹಮ್ಮದ್ ನವೀದ್ನನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲಾಗುತ್ತದೆ.
ಆಗಸ್ಟ್ 5ರಂದು ಜಮ್ಮು-ಕಾಶ್ಮೀರದ ಹೆದ್ದಾರಿಯಲ್ಲಿ ಬಿಎಸ್ಎಫ್ ಪಡೆಯ ಶಿಬಿರದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರ ಪೈಕಿ ನವೀದ್ನನ್ನು ಜೀವಂತವಾಗಿ ಸೆರೆಹಿಡಿಯಲಾಗಿತ್ತು. ಇಬ್ಬರು ಉಗ್ರರು ಭದ್ರತಾಪಡೆಗಳ ಗುಂಡಿಗೆ ಬಲಿಯಾಗಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications