ನೈಜ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು 'ಸನಾತನ' ತಂತ್ರಕ್ಕೆ ಮೊರೆ ಹೋದ ಮೋದಿ: ಉದಯನಿಧಿ ಸ್ಟಾಲಿನ್ ಮತ್ತೆ ವಾಗ್ದಾಳಿ
ಚೆನ್ನೈ, ಸೆಪ್ಟೆಂಬರ್ 07: ಸನಾತನ ಧರ್ಮ ನಿರ್ಮೂಲನೆ ಕುರಿತು ಹೇಳಿಕೆ ನೀಡಿರುವ ಉದಯನಿಧಿ ಸ್ಟಾಲಿನ್ ಅವರು ಬಿಜೆಪಿ ಹಾಗೂ ಸಂಘಪರಿವಾರದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಉದಯನಿಧಿ ಅವರಿಗೆ ತಕ್ಕ ಉತ್ತರ ನೀಡಬೇಕೆಂದು ಬಿಜೆಪಿ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಉದಯನಿಧಿ ಸ್ಟಾಲಿನ್ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Let us resolve to work for the victory of the ideologies of Periyar, Anna, Kalaignar and Perasiriyar. Let Social Justice flourish forever. pic.twitter.com/Eyc9pBcdaL
— Udhay (@Udhaystalin) September 7, 2023
'ಸನಾತನ ಧರ್ಮ ನಿರ್ಮೂಲನೆ ಸಮಾವೇಶದಲ್ಲಿ ನಾನು ಹೇಳಿಕೆ ನೀಡಿದ್ದೆ. ನನ್ನ ಭಾಷಣವನ್ನು ನರಮೇಧಕ್ಕೆ ಹೋಲಿಸಿ ಬಿಜೆಪಿ ನಾಯಕರು ಪ್ರಚೋದನೆ ನೀಡುತ್ತಿದ್ದಾರೆ. ನನ್ನ ಹೇಳಿಕೆಗಳನ್ನು ತಿರುಚಿದ್ದಾರೆ. ಅಚ್ಚರಿಯ ಸಂಗತಿ ಎಂದರೆ, ಅಮಿತ್ ಶಾ ಅವರಂತಹ ಕೇಂದ್ರ ಸರ್ಕಾರದ ಸಚಿವರು ನಕಲಿ ಸುದ್ದಿಗಳ ಆಧಾರದ ಮೇಲೆ ಕ್ರಮಕ್ಕೆ ನನ್ನ ಮೇಲೆ ಒತ್ತಾಯಿಸುತ್ತಿದ್ದಾರೆ' ಎಂದು ಉದಯನಿಧಿ ಹೇಳಿದ್ದಾರೆ.

ಮೋದಿ ಸರ್ಕಾರ ವಿರುದ್ಧ ಕಿಡಿಕಾರಿರುವ ಉದಯನಿಧಿ ಸ್ಟಾಲಿನ್ ನಾಲ್ಕು ಪುಟಗಳ ಸುದೀರ್ಘ ಹೇಳಿಕೆಯನ್ನು ಸಾಮಾಜಿಕ ಮಾದ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.
ನನ್ನ ಹೇಳಿಕೆ ತಿರುಚಿದ್ದಕ್ಕಾಗಿ ಬಿಜೆಪಿ ನಾಯಕರ ವಿರುದ್ಧ ಯಾವುದೇ ದೂರು ದಾಖಲಿಸುವುದಿಲ್ಲ. ಅಪಪ್ರಚಾರ ಮಾಡುವುದು ಅವರ ಜೀವನ ಕ್ರಮವಾಗಿದೆ. ಹಾಗೇ ನೋಡಿದರೆ ನಾನು ಸಹ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳ ದಾಖಲಿಸಬೇಕು. ಆದರೆ, ನಾನು ಹಾಗೆ ಮಾಡುವುದಿಲ್ಲ. ಇದು ನನ್ನ ಬದುಕಿನ ವಿಧಾನ ಎಂದು ಉದಯನಿಧಿ ಹೇಳಿದ್ದಾರೆ.
ನನ್ನ ಹಾಗೂ ಡಿಎಂಕೆ ಪಕ್ಷದ ಹೇಳಿಕೆಗಳು ಯಾವುದೇ ಧರ್ಮಕ್ಕೆ ವಿರುದ್ಧವಾಗಿಲ್ಲ ಎಂದು ಉದಯನಿಧಿ ಪ್ರತಿಪಾದಿಸಿದ್ದಾರೆ. ಒಂದು ವೇಳೆ, ಯಾವುದೇ ಧರ್ಮವು ಜನರನ್ನು ಸಮಾನತೆಯತ್ತ ಕೊಂಡೊಯ್ಯಿದರೆ ಅದನ್ನು ನಾನು ಒಪ್ಪಲು ಸಿದ್ದವೆಂದು ಹೇಳಿದ್ದಾರೆ.

'ನಾನು ಡಿಎಂಕೆ ಸಂಸ್ಥಾಪಕ ಅಣ್ಣಾ ದೊರೈ ಅವರ ರಾಜಕೀಯ ವಾರಸುದಾರರಲ್ಲಿ ಒಬ್ಬ. ನಾವು ಯಾವ ಧರ್ಮದ ಶತ್ರುಗಳಲ್ಲ ಎಂಬುದು ಎಲ್ಲರಿಗೂ ಗೊತ್ತು. ಧರ್ಮದ ಬಗ್ಗೆ ಅಣ್ಣಾ ನೀಡಿರುವ ಹೇಳಿಕೆಗಳನ್ನು ನಾನು ಉಲ್ಲೇಖಿಸಲು ಬಯಸುತ್ತೇನೆ' ಎಂದು ಉದಯನಿಧಿ ತಿಳಿಸಿದ್ದಾರೆ.
'ಒಂದು ಧರ್ಮವು ಜನರನ್ನು ಸಮಾನತೆಯ ಕಡೆಗೆ ಕೊಂಡೊಯ್ಯುತ್ತದೆ. ಅವರಿಗೆ ಭ್ರಾತೃತ್ವವನ್ನು ಕಲಿಸುತ್ತದೆ. ಒಂದು ಧರ್ಮವು ಜಾತಿಯ ಹೆಸರಿನಲ್ಲಿ ಜನರನ್ನು ವಿಭಜಿಸಿದರೆ, ಅದು ಅವರಿಗೆ ಅಸ್ಪೃಶ್ಯತೆ ಮತ್ತು ಗುಲಾಮಗಿರಿಯನ್ನು ಕಲಿಸಿದರೆ, ಅಂತಹ ಧರ್ಮವನ್ನು ವಿರೋಧಿಸುವ ಮೊದಲ ವ್ಯಕ್ತಿ ನಾನು ಎಂದು ಅಣ್ಣಾ ಹೇಳಿದ್ದಾರೆ' ಎಂಬುದಾಗಿ ಉದಯನಿಧಿ ಬರೆದುಕೊಂಡಿದ್ದಾರೆ.
ಧರ್ಮಗಳು ಮನುಷ್ಯರನ್ನು ಸಮಾನವಾಗಿ ಕಂಡಾಗ ಮಾತ್ರ ಧರ್ಮವಾಗುತ್ತವೆ. ಎಲ್ಲಾ ಧರ್ಮಗಳನ್ನು ನಾವು ಗೌರವಿಸುತ್ತೇವೆ. ಆದರೆ, ಪ್ರಧಾನಿ ಮೋದಿ ಅವರು ಚುನಾವಣೆಗೋಸ್ಕರ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ. ನೈಜ ನೈಜ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಸನಾತನ ಧರ್ಮದ ತಂತ್ರಕ್ಕೆ ಮೋದಿ ಮೊರೆ ಹೋಗಿದ್ದಾರೆ ಎಂದು ಉದಯನಿಧಿ ಸ್ಟಾಲಿನ್ ವಾಗ್ದಾಳಿ ನಡೆಸಿದ್ದಾರೆ.
ಕಳೆದ 9 ವರ್ಷಗಳಿಂದ ಮೋದಿ ಉತ್ತಮವಾಗಿರುವುದನ್ನು ಏನೂ ಮಾಡುತ್ತಿಲ್ಲ. ಹಣದ ಅಮಾನ್ಯೀಕರಣವನ್ನು ಮಾಡಿದ್ದಾರೆ. ಗುಡಿಸಲುಗಳನ್ನು ಮರೆಮಾಡಲು ಗೋಡೆಯನ್ನು ನಿರ್ಮಿಸಿದ್ದಾರೆ. ಹೊಸ ಸಂಸತ್ತಿನ ಕಟ್ಟಡದಲ್ಲಿ ಸೆಂಗೋಲ್ ಅನ್ನು ಇಟ್ಟಿದ್ದಾರೆ. ದೇಶದ ಹೆಸರನ್ನು ಬದಲಾಯಿಸುತ್ತಾರೆ. ಇದಷ್ಟೇ ಮೋದಿ ಕೆಲಸವೆಂದು ಉದಯನಿಧಿ ಸ್ಟಾಲಿನ್ ಹರಿಹಾಯ್ದಿದ್ದಾರೆ.
'ನಿಶಸ್ತ್ರ ಫ್ಯಾಸಿಸ್ಟ್ ಬಿಜೆಪಿ ಸರ್ಕಾರವನ್ನು ಇಡೀ ದೇಶವೇ ಪ್ರಶ್ನಿಸುತ್ತಿದೆ ಎಂದಿರುವ ಅವರು, 'ಕಳೆದ 9 ವರ್ಷಗಳಿಂದ ಬಿಜೆಪಿ ನೀಡಿರುವ ಭರವಸೆಗಳೆಲ್ಲವೂ ಪೊಳ್ಳು ಭರವಸೆಗಳಾಗಿವೆ. ಜನರ ಕಲ್ಯಾಣಕ್ಕಾಗಿ ನೀವು ನಿಖರವಾಗಿ ಏನು ಮಾಡಿದ್ದೀರಿ?' ಎಂದು ಪ್ರಧಾನಿ ಮೋದಿಯನ್ನು ತಮಿಳುನಾಡು ಸಿಎಂ ಪುತ್ರ ಉದಯನಿಧಿ ಸ್ಟಾಲಿನ್ ಪ್ರಶ್ನಿಸಿದ್ದಾರೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಅಪ್ಪನ ಸಕ್ಕರೆ ಚಟ ಬಿಡಿಸಲು ಮೋದಿ ಮೊರೆ ಹೋದ ಯುವಕ: ವಿಡಿಯೋ Viral, ಪ್ರಧಾನಿಯಿಂದ ಬಂತು ಅಚ್ಚರಿಯ ರಿಪ್ಲೈ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ












Click it and Unblock the Notifications