ಪ್ರಧಾನಿ ಮೋದಿ ವಿರುದ್ಧ ಕಟುವಾಗಿ ಟೀಕಿಸಿದ ಉದಯನಿಧಿ ಸ್ಟಾಲಿನ್, ಏನದು?
ಚೆನ್ನೈ, ಸೆಪ್ಟಂಬರ್ 11: ಇತ್ತೀಚಗಷ್ಟೇ ಸನಾತನ ಧರ್ಮವನ್ನು ಡೆಂಘೀ, ಮಲೇರಿಯಾಗಿ ಹೋಲಿಕೆ ಮಾಡಿ ಅದನ್ನು ನಿರ್ಮೂಲನೆ ಮಾಡಬೇಕು ಎಂದೆಲ್ಲ ಮಾತನಾಡಿದ್ದ ತಮಿಳನಾಡು ಡಿಎಂಕೆ ಪಕ್ಷದ ನಾಯಕ ಸಚಿವ ಉದಯನಿಧಿ ಸ್ಟಾಲಿನ್ ಇದೀಗ ಪ್ರಧಾನಮಂತ್ರಿಗಳ ವಿರುದ್ಧ ಕಟುವಾಟಿಕ ಟೀಕಿಸಿದ್ದಾರೆ. ಪ್ರಧಾನಿ ಮೋದಿಯನ್ನು ''ಭ್ರಷ್ಟಾಚಾರದ ಕಿಂಗ್ ಮೋದಿ'' ಎಂದು ಅವರು ಆರೋಪ ಮಾಡಿದ್ದಾರೆ.
ವಿವಿಧ ವಿಷಯಗಳಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಿದ ಡಿಎಂಕೆ ಯುವ ಘಟಕದ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಭಾನುವಾರ ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಟುವಾಗಿ ಟೀಕಿಸಿ ಟ್ವೀಟ್ ಮಾಡಿದ್ದರು.

ಉದಯನಿಧಿ ಸ್ಟಾಲಿನ್ ಅವರು ಭ್ರಷ್ಟಾಚಾರ ಕುರಿತ ಸಿಎಜಿ ವರದಿಯನ್ನು ತಮ್ಮ ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ. 'ಭ್ರಷ್ಟಾಚಾರ ವಿರೋಧಿ ಬ್ಯಾನರ್ ಅಡಿಯಲ್ಲಿ ಅಧಿಕಾರಕ್ಕೆ ಬಂದ ಫ್ಯಾಸಿಸ್ಟ್ಗಳು ಮೊದಲು ನೋಟು ಅಮಾನ್ಯೀಕರಣವನ್ನು ಪ್ರಾರಂಭಿಸಿದರು. ನಂತರ ರಫೇಲ್ ಹಗರಣವನ್ನು ಪ್ರಾರಂಭಿಸಿದರು. ಇದೀಗ ರಾಷ್ಟ್ರೀಯ ಹೆದ್ದಾರಿ, ಆಯುಷ್ಮಾನ್ ಭಾರತ್ ಮತ್ತು ಟೋಲ್ಗೇಟ್ ಯೋಜನೆಗಳಲ್ಲಿ ಅವರು ನಡೆಸಿರುವ ಭ್ರಷ್ಟಾಚಾರ ಸಿಎಜಿ ವರದಿಯಿಂದ ಬಯಲಾಗಿದೆ ಎಂದು ವಾಗ್ದಾಳಿ ನಡೆಸಿದರು.
ಕೇಂದ್ರ ಬಿಜೆಪಿ ಕಾರ್ಯಕ್ಕೆ ವ್ಯಂಗ್ಯ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕಾರ್ಯದ ವಿರುದ್ಧ ಸ್ಟಾಲಿನ್ ಆಕ್ರೋಶ ವ್ಯಕ್ತಪಡಿಸಿದರು. 900 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸಂಸತ್ ಭವನಕ್ಕೆ ಮಳೆನೀರು ನುಗ್ಗುತ್ತಿದೆ. 2,700 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಜಿ20 ಸಭಾಂಗಣ ಮುಳುಗಡೆಯಾಗಿದೆ. ಈ ಕಾರಣದಿಂದ ಹೊಸ ಸಂಸತ್ತಿನ ಕಟ್ಟಡ ಮತ್ತು ಜಿ -20 ಸಭಾಂಗಣವನ್ನು 'ಕೆಳಮಟ್ಟದ' ನಿರ್ಮಾಣ ಕಾಮಗಾರಿ ಎಂದು ಅವರು ಕರೆದರು.

ಭಾಷಾ ಗಲಾಟೆ ಹಾಗೂ ಧರ್ಮವನ್ನು ಬಳಸಿಕೊಂಡು ಭ್ರಷ್ಟಾಚಾರವನ್ನು ಬಿಜೆಪಿ ಮರೆಮಾಚುತ್ತಿದೆ ಎಂದು ಉದಯನಿಧಿ ಗಂಭೀರ ಆರೋಪ ಮಾಡಿದರು. ಕೇಂದ್ರ ಬಿಜೆಪಿ ಪಕ್ಷವು ತನ್ನ ಆಡಳಿತದ ಉದ್ದಕ್ಕೂ ಪ್ರತಿ ಅಂಶಗಳಲ್ಲಿ ಈ ಭಾಷಾ ಗಲಾಟೆ, ಧಾರ್ಮಿಕ ಸಂಘರ್ಷವನ್ನು ಸಾಧನಗಳನ್ನಾಗಿ ಬಳಸಿಕೊಳ್ಳುತ್ತಿದೆ.
ಜನರ ಸಾಮೂಹಿಕ ಕೋಪ ಮತ್ತು ವಿರೋಧ ಪಕ್ಷದ ಮೈತ್ರಿ ಭಾರತದ ಬಲವು 2024 ರಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲಿದೆ ಎಂದು ಉದಯನಿಧಿ ಸ್ಟಾಲಿನ್ ಭವಿಷ್ಯ ನುಡಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications