ತಂದೆ ಸಿಎಂ.... ಮಗ ಡಿಸಿಎಂ...: ಉಪಮುಖ್ಯಮಂತ್ರಿಯಾಗಲಿರುವ ಉದಯನಿಧಿ ಸ್ಟಾಲಿನ್ ಬಗ್ಗೆ ನಿಮಗೆಷ್ಟು ಗೊತ್ತು?
ಚೆನ್ನೈ, ಜುಲೈ. 19: ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸರ್ಕಾರದ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಉಪಮುಖ್ಯಮಂತ್ರಿ ಹುದ್ದೆಗೆ ಏರುವ ಸಾಧ್ಯತೆಯಿದೆ. ಡಿಎಂಕೆಯ ಮೂಲಗಳು ಉದಯನಿಧಿ ಸ್ಟಾಲಿನ್ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು ಮತ್ತು ಚುನಾವಣಾ ಪ್ರಚಾರದ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಪಕ್ಷದ ಹಲವು ನಾಯಕರು ಬಯಸುತ್ತಿದ್ದಾರೆ ಎಂದು ತಿಳಿಸಿದೆ.
ತಮಿಳುನಾಡು ಮುಖ್ಯಮಂತ್ರಿ ಮತ್ತು ದ್ರಾವಿಡ ಮುನ್ನೇತ್ರ ಕಳಗ (ಡಿಎಂಕೆ) ಅಧ್ಯಕ್ಷ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಸದ್ಯ ತಮ್ಮ ತಂದೆಯ ಸಂಪುಟದಲ್ಲಿ ಕ್ರೀಡಾ ಸಚಿವ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2026 ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಉದಯನಿಧಿ ಸ್ಟಾಲಿನ್ "ದೊಡ್ಡ ಲಾಭ" ಎಂದು ಪಕ್ಷದ ಹಿರಿಯ ನಾಯಕರು ಭರವಸೆ ವ್ಯಕ್ತಪಡಿಸಿದ್ದಾರೆ.

2026 ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯ ತಯಾರಿಯನ್ನು ಆದಷ್ಟು ಬೇಗ ಪ್ರಾರಂಭಿಸಲು ಡಿಎಂಕೆ ಬಯಸುತ್ತಿದೆ. ಈಗಲೆ ಪ್ರಚಾರ ಆರಂಭಿಸಿದರೆ ರಾಜ್ಯದ ಪ್ರತಿಯೊಬ್ಬ ಮತದಾರರನ್ನು ಮುಟ್ಟಬಹುದು ಎಂಬ ಯೋಜನೆಯಲ್ಲಿದೆ. ಇಂತಹ ಸಮಯದಲ್ಲಿ ಉಪಮುಖ್ಯಮಂತ್ರಿಯಾಗಿ ಉದಯನಿಧಿ ಅವರನ್ನು ನೇಮಿಸಿದರೆ ಪಕ್ಷಕ್ಕೆ ಮತ್ತಷ್ಟು ಸಹಾಯಕವಾಗಲಿದೆ ಎಂಬ ನಂಬಿಕೆಯಲ್ಲಿದ್ದಾರೆ.
ತಮಿಳುನಾಡಿನಲ್ಲಿ ಆಡಳಿತರೂಢ ಡಿಎಂಕೆ ಬಗ್ಗೆ ಉತ್ತಮ ಅಭಿಪ್ರಾಯವಿದೆ. ಅದರಲ್ಲೂ ಉದಯನಿಧಿ ಸ್ಟಾಲಿನ್ ಹೊದಲ್ಲೆಲ್ಲಾ ಜನಸಾಗರ ತುಂಬುತ್ತದೆ. ಹೀಗಾಗಿ ಯುವಜನರನ್ನು ಮತ್ತಷ್ಟು ಮುಟ್ಟಲು, ರಾಜ್ಯದಲ್ಲಿ ಪಕ್ಷವು ಅಧಿಕಾರವನ್ನು ಉಳಿಸಿಕೊಳ್ಳಲು ಈ ನಡೆ ಸಹಾಯ ಮಾಡುತ್ತದೆ. ಇನ್ನು, ವರದಿಗಳ ಪ್ರಕಾರ ಈಗಾಗಲೇ ಉದಯನಿಧಿ ಸ್ಟಾಲಿನ್ ಅವರನ್ನು ಡಿಸಿಎಂ ಆಗಿ ನೇಮಕವನ್ನು ಮಾಡಲಾಗಿದ್ದು, ಮುಖ್ಯಮಂತ್ರಿಯಿಂದ ಅಂತಿಮ ಘೋಷಣೆ ಮಾತ್ರ ಉಳಿದಿದೆ ಎಂದು ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್ ಎಸ್ ಭಾರತಿ ಹೇಳಿದ್ದಾರೆ.

ಡಿಎಂಕೆಯ ಉದಯನಿಧಿ ಸ್ಟಾಲಿನ್ ಬಗ್ಗೆ ನಿಮಗೆ ತಿಳಿದಿರಬೇಕಾದ ಅಂಶಗಳು
1. ಉದಯನಿಧಿ ಸ್ಟಾಲಿನ್ ಅವರು ಡಿಎಂಕೆ ಮಹಾನ್, ಎಂ ಕರುಣಾನಿಧಿ ಅವರ ಮೊಮ್ಮಗ, ತಮಿಳುನಾಡಿನ ದೀರ್ಘಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಮತ್ತು ಸಿಎಂ ಎಂಕೆ ಸ್ಟಾಲಿನ್ ಅವರ ಮಗ.
2. ಉದಯನಿಧಿ ಸ್ಟಾಲಿನ್ ಅವರು 2021 ರಲ್ಲಿ ಚೆಪಾಕ್-ತಿರುವಲ್ಲಿಕೇಣಿ ಕ್ಷೇತ್ರದಿಂದ ವಿಧಾನಸಭೆಯ (MLA) ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
3. ಉದಯನಿಧಿ ತಮ್ಮ ಕ್ಷೇತ್ರದಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜರ್ಗಳನ್ನು ಬದಲಿಸಲು ರೋಬೋಟಿಕ್ ಒಳಚರಂಡಿ ಕ್ಲೀನರ್ಗಳನ್ನು ಪರಿಚಯಿಸಿದ್ದಾರೆ. ಇದು ಡಿಎಂಕೆ ಮಾಡಿದ ಚುನಾವಣಾ ಭರವಸೆಯಾಗಿದೆ.
4. ವಿವಾದಗಳು ನಿರಂತರವಾಗಿ ಉದಯನಿಧಿ ಸ್ಟಾಲಿನ್ ಅವರನ್ನು ಸುತ್ತುತ್ತಲೆ ಇವೆ. ಸೆಪ್ಟೆಂಬರ್ 2023 ರಲ್ಲಿ, ಅವರು ಸನಾತನ ಧರ್ಮದ ಬಗ್ಗೆ ತಮ್ಮ ಹೇಳಿಕೆ ನೀಡಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದರು. ಸನಾತನ ಧರ್ಮವನ್ನು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕರೋನವೈರಸ್ಗೆ ಹೋಲಿಸಿದರು ಮತ್ತು ಅದರ ನಿರ್ಮೂಲನೆಗೆ ಕರೆ ನೀಡಿದ್ದರು.
5. ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸುವ ಮೊದಲು, ಉದಯನಿಧಿ ಸ್ಟಾಲಿನ್ ಸಿನಿಮಾ ರಂಗದಲ್ಲಿಯೂ ಪ್ರಯತ್ನಿಸಿದ್ದರು. 2009 ರಲ್ಲಿ ಬಿಡುಗಡೆಯಾದ ತಮಿಳು ಚಲನಚಿತ್ರ ಆಧವನ್ನಲ್ಲಿ ಅತಿಥಿ ಪಾತ್ರವನ್ನು ನಿರ್ವಹಿಸಿದರು. 2012 ರಲ್ಲಿ, ಅವರು ಎಂ ರಾಜೇಶ್ ಅವರ ನಿರ್ದೇಶನದ ಒರು ಕಲ್ ಒರು ಕನ್ನಾಡಿಯಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದರು.
6. ಅತ್ಯುತ್ತಮ ನಟ ವಿಭಾಗದಲ್ಲಿ ಫಿಲ್ಮ್ಫೇರ್ ಪ್ರಶಸ್ತಿಯನ್ನು ಸಹ ಪಡೆದರು.
7. ಉದಯನಿಧಿ ಸುಮಾರು 18 ಚಲನಚಿತ್ರಗಳಲ್ಲಿ ನಟಿಸಿದ್ದಾರೆ. 2023 ರಲ್ಲಿ ಮಾರಿ ಸೆಲ್ವರಾಜ್ ನಿರ್ದೇಶನದ ಮಾಮಣ್ಣನ್, ಜಾತಿ ರಾಜಕೀಯದ ಕುರಿತಾದ ಚಲನಚಿತ್ರದೊಂದಿಗೆ ಅವರು ಕೊನೆಯ ಬಾರಿ ಕಾಣಿಸಿಕೊಂಡಿದ್ದಾರೆ. ಅನೇಕ ತಮಿಳು ಚಲನಚಿತ್ರಗಳ ನಿರ್ಮಾಪಕ ಮತ್ತು ವಿತರಕರಾಗಿಯೂ ಕೆಲಸ ಮಾಡಿದ್ದಾರೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications