ಕೋವಿಡ್ ಹೆಚ್ಚಳ: ಯುಜಿಸಿ ನೆಟ್ 2021 ಪರೀಕ್ಷೆ ಮುಂದೂಡಿಕೆ
ನವದೆಹಲಿ, ಏಪ್ರಿಲ್ 20: ಮುಂದಿನ ತಿಂಗಳು ನಡೆಯಬೇಕಿದ್ದ ಯುಜಿಸಿ ನೆಟ್ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್ ತಿಳಿಸಿದ್ದಾರೆ. ದೇಶಾದ್ಯಂತ ಕೋವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಲಾಗಿದೆ.
ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರವಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (ಎನ್ಟಿಎ) ಯುಜಿಸಿ ನೆಟ್ ಪರೀಕ್ಷೆಗಳನ್ನು ನಡೆಸುತ್ತದೆ. ವಿಶ್ವವಿದ್ಯಾಲಯಗಳ ಸಹಾಯಕ ಪ್ರೊಫೆಸರ್ ಹುದ್ದೆಗಳ ಅರ್ಹತೆ ಮತ್ತು ಕಿರಿಯ ಸಂಶೋಧಕ ಫೆಲೋಷಿಪ್ಗಳನ್ನು (ಜೆಆರ್ಎಫ್) ನೀಡಲು ಯುಜಿಸಿ ನೆಟ್ ಪರೀಕ್ಷೆಗಳನ್ನು ನಡೆಸಲಾಗುತ್ತದೆ.
'ಯುಜಿಸಿ ನೆಟ್ ಪರೀಕ್ಷೆಗಳು ಮೇ 2 ರಿಂದ ಮೇ 17ರವರೆಗೂ ನಡೆಯಬೇಕಿತ್ತು. ಆದರೆ ಪ್ರಸ್ತುತದ ಕೋವಿಡ್-19 ಸಾಂಕ್ರಾಮಿಕದ ಸನ್ನಿವೇಶವನ್ನು ಗಮನದಲ್ಲಿಟ್ಟುಕೊಂಡು ಮತ್ತು ಅಭ್ಯರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಯ ಸುರಕ್ಷತೆ ಮತ್ತು ಹಿತವನ್ನು ಪರಿಗಣಿಸಿ ಯುಜಿಸಿ ನೆಟ್ ಡಿಸೆಂಬರ್ 2020 ಸೈಕಲ್ (ಮೇ 2021) ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ' ಎಂದು ಎನ್ಟಿಎ ತಿಳಿಸಿದೆ.

ಮುಂದಿನ ಪರೀಕ್ಷೆಯ ದಿನಾಂಕವನ್ನು ಎನ್ಟಿಎ ಇನ್ನೂ ನಿಗದಿಪಡಿಸಿಲ್ಲ. ಮುಂದಿನ ಹೊಸ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸುವುದನ್ನು 15 ದಿನ ಮೊದಲೇ ಬಹಿರಂಗಪಡಿಸಲಾಗುವುದು ಎಂದು ಅದು ತಿಳಿಸಿದೆ. ಯುಜಿಸಿ ನೆಟ್ ಮೇ ಪರೀಕ್ಷಾ ಆಕಾಂಕ್ಷಿಗಳು nta.ac.in, ugcnet.nta.nic.in ವೆಬ್ಸೈಟ್ಗಳನ್ನು ಮಾಹಿತಿಗಾಗಿ ನಿರಂತರ ಪರಿಶೀಲಿಸುತ್ತಿರಬೇಕು ಎಂದು ಸಲಹೆ ನೀಡಲಾಗಿದೆ. ಹಾಗೆಯೇ ಅಭ್ಯರ್ಥಿಗಳು ಯಾವುದೇ ಸಂದೇಹಗಳಿದ್ದರೆ 011-40759000 ಸಂಖ್ಯೆ ಅಥವಾ [email protected] ಇಮೇಲ್ ವಿಳಾಸವನ್ನು ಸಂಪರ್ಕಿಸಬಹುದು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications