UGC Regulations: 2026ರ ಯುಜಿಸಿ ನಿಯಮಾವಳಿ ಜಾರಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ
UGC Regulations: ಸುಪ್ರೀಂ ಕೋರ್ಟ್ ವಿಶ್ವವಿದ್ಯಾಲಯ ಅನುದಾನ ಆಯೋಗದ (UGC) ನಿಯಮಗಳನ್ನು ತಾತ್ಕಾಲಿಕವಾಗಿ ತಡೆಹಿಡಿದಿದೆ. ಈ ನಿಯಮಾವಳಿಯನ್ನು ಜನವರಿ 23, 2026ರಂದು ಹೊರಡಿಸಲಾಗಿತ್ತು. ಇದನ್ನು ಹಲವು ಅರ್ಜಿದಾರರು ಪ್ರಶ್ನಿಸಿದ್ದರು. ನಿಯಮಾವಳಿ ಅನಿಯಂತ್ರಿತ, ಹೊರಗಿಡುವ, ತಾರತಮ್ಯವಾಗಿದೆ. ಜೊತೆಗೆ ಭಾರತದ ಸಂವಿಧಾನ ಹಾಗೂ ವಿಶ್ವವಿದ್ಯಾಲಯ ಅನುದಾನ ಆಯೋಗ ಕಾಯ್ದೆ, 1956ರ ವಿಧಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು.
ಈ ವಾದಗಳನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಅಂತಿಮ ತೀರ್ಪು ಹೊರಬರುವವರೆಗೆ ಈ ನಿಯಮಾವಳಿಯ ಜಾರಿಗೆ ತಡೆ ನೀಡುವಂತೆ ಮಹತ್ವದ ಆದೇಶ ಹೊರಡಿಸಿದೆ. ಅಧಿಸೂಚನೆಗೊಂಡಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ ವಿರೋಧಿ ನಿಯಮಗಳ ಜಾರಿಗೆ ಸುಪ್ರೀಂ ಕೋರ್ಟ್ ಜನವರಿ 29ರ ಗುರುವಾರ ತಾತ್ಕಾಲಿಕ ತಡೆ ನೀಡಿದೆ. ಈ ಮಾರ್ಗಸೂಚಿಗಳು ಸ್ಪಷ್ಟವಾಗಿಲ್ಲ, ದುರುಪಯೋಗಕ್ಕೆ ಒಳಗಾಗುವ ಸಾಧ್ಯತೆ ಇದೆ ಎಂಬ ಕಳವಳವನ್ನು ನ್ಯಾಯಾಲಯ ವ್ಯಕ್ತಪಡಿಸಿದೆ.

ಈ ಕುರಿತು ಕೇಂದ್ರ ಸರ್ಕಾರ ಹಾಗೂ ಯುಜಿಸಿಗೆ ನ್ಯಾಯಾಲಯವು ನೋಟಿಸ್ ಜಾರಿ ಮಾಡಿದ್ದು, ಮುಂದಿನ ಆದೇಶದವರೆಗೆ ಹೊಸ ನಿಯಮಗಳು ತಡೆಹಿಡಿಯಲ್ಪಟ್ಟಿರುತ್ತವೆ ಎಂದು ಸ್ಪಷ್ಟಪಡಿಸಿದೆ. ಈ ತಿಂಗಳ ಆರಂಭದಲ್ಲೇ ಯುಜಿಸಿ ಈ ಹೊಸ ನಿಯಮಗಳನ್ನು ಪ್ರಕಟಿಸಿದ್ದು, ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆ ಸಮಿತಿ ರಚನೆ ಕಡ್ಡಾಯಗೊಳಿಸಿತ್ತು. ತಾರತಮ್ಯದ ಸಂಬಂಧಿತ ದೂರುಗಳನ್ನು ಪರಿಶೀಲಿಸುವುದು ಹಾಗೂ ಸೇರ್ಪಡೆಯನ್ನು ಉತ್ತೇಜಿಸುವುದು ಈ ಸಮಿತಿಯ ಮುಖ್ಯ ಉದ್ದೇಶವಾಗಿದೆ.
ನಿಯಮಗಳ ಪ್ರಕಾರ ಸಮಿತಿಗಳು ಇತರ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಅಂಗವಿಕಲರು ಮತ್ತು ಮಹಿಳೆಯರ ಸದಸ್ಯರನ್ನು ಒಳಗೊಂಡಿರಬೇಕು ಎಂಬ ನಿಯಮವಿತ್ತು. ಈ ಕ್ರಮವು ಹಲವಾರು ರಾಜ್ಯಗಳಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆಗೆ ಕಾರಣವಾಗಿದೆ. ನಿಯಮಗಳನ್ನು ದುರುಪಯೋಗ ಪಡಿಸಿಕೊಳ್ಳಬಹುದು ಎನ್ನುವ ಆರೋಪಗಳು ಕೇಳಿಬಂದಿವೆ.
ಈ ನಿಯಮಗಳು ದುರುಪಯೋಗಕ್ಕೆ ಒಳಗಾಗಬಹುದು ಎಂದು ಆರೋಪಿಸಿ ಹಲವು ರಾಜ್ಯಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಮಾರ್ಗಸೂಚಿಗಳು ಸಮಾಜವನ್ನು ವಿಭಜಿಸುವ ಸಾಧ್ಯತೆಯಿದೆ ಮತ್ತು ಗಂಭೀರ ಪರಿಣಾಮ ಬೀರಬಹುದು. ಇದೇ ಕಾರಣಕ್ಕೆ ಈ ವಿಷಯದಲ್ಲಿ ಹಸ್ತಕ್ಷೇಪ ಅಗತ್ಯ. 2012ರಲ್ಲಿ ಜಾರಿಯಲ್ಲಿದ್ದ ಮಾರ್ಗಸೂಚಿಗಳು ಸಲಹಾ ಸ್ವರೂಪದ್ದಾಗಿದ್ದು, ಅವು ಮುಂದುವರಿಯುತ್ತವೆ ಎಂದು ನ್ಯಾಯಾಲಯ ಹೇಳಿದೆ.
ನ್ಯಾಯಲಯದ ಆದೇಶದಲ್ಲಿ ಏನಿದೆ?: ಸಾಮಾನ್ಯ ವರ್ಗಗಳ ವಿರುದ್ಧ ತಾರತಮ್ಯ ಉಂಟಾಗುವ ಸಾಧ್ಯತೆ ಇದೆ ಎಂಬ ಆಕ್ಷೇಪದ ಹಿನ್ನೆಲೆಯಲ್ಲಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ವೇಳೆ, ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿತು.
ನಿಯಮಾವಳಿಯನ್ನು ಪ್ರಖ್ಯಾತ ನ್ಯಾಯಶಾಸ್ತ್ರಜ್ಞರನ್ನು ಒಳಗೊಂಡ ಸಮಿತಿಯ ಮೂಲಕ ಮರುಪರಿಶೀಲನೆ ಮಾಡಬೇಕು ಎಂದು ನ್ಯಾಯಾಲಯ ಚೂಚನೆ ನೀಡಿದೆ. ವಿಚಾರಣೆ ಸಮಯದಲ್ಲಿ, ನಿಯಮಗಳು ಸ್ಪಷ್ಟತೆ ಕೊರತೆಯಿಂದ ದುರುದ್ದೇಶಪೂರಿತ ಬಳಕೆಗೆ ದಾರಿ ಮಾಡಿಕೊಡುವ ಅಪಾಯವಿದೆ ಎಂದು ಪೀಠ ಉಲ್ಲೇಖ ಮಾಡಿದೆ.
ಈ ಸಂಬಂಧ ಮೃತ್ಯುಂಜಯ್ ತಿವಾರಿ, ವಕೀಲ ವಿನೀತ್ ಜಿಂದಾಲ್ ಮತ್ತು ರಾಹುಲ್ ದಿವಾನ್ ಸಲ್ಲಿಕೆ ಮಾಡಿದ್ದ ಮೂರು ರಿಟ್ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಅರ್ಜಿಗಳ ಕುರಿತು ಕೇಂದ್ರ ಸರ್ಕಾರ ಮತ್ತು ಯುಜಿಸಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಮಾರ್ಚ್ 19ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚನೆ ನೀಡಿದೆ. ಅಂತಿಮ ವಿಚಾರಣೆ ನಡೆಯುವವರೆಗೆ ಯುಜಿಸಿ ಇಕ್ವಿಟಿ ನಿಯಮಗಳು-2026 ಜಾರಿಗೆ ತಡೆ ವಿಧಿಸಲಾಗಿದ್ದು, ಈ ಅವಧಿಯಲ್ಲಿ 2012ರ ಯುಜಿಸಿ ನಿಯಮಗಳು ಜಾರಿಯಲ್ಲಿರುತ್ತವೆ ಎಂದು ಸುಪ್ರೀಂ ಆದೇಶಿಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications