Get Updates
Get notified of breaking news, exclusive insights, and must-see stories!

UGC Regulations: 2026ರ ಯುಜಿಸಿ ನಿಯಮಾವಳಿ ಜಾರಿಗೆ ಸುಪ್ರೀಂ ಕೋರ್ಟ್‌ ತಾತ್ಕಾಲಿಕ ತಡೆ

UGC Regulations: ಸುಪ್ರೀಂ ಕೋರ್ಟ್ ವಿಶ್ವವಿದ್ಯಾಲಯ ಅನುದಾನ ಆಯೋಗದ (UGC) ನಿಯಮಗಳನ್ನು ತಾತ್ಕಾಲಿಕವಾಗಿ ತಡೆಹಿಡಿದಿದೆ. ಈ ನಿಯಮಾವಳಿಯನ್ನು ಜನವರಿ 23, 2026ರಂದು ಹೊರಡಿಸಲಾಗಿತ್ತು. ಇದನ್ನು ಹಲವು ಅರ್ಜಿದಾರರು ಪ್ರಶ್ನಿಸಿದ್ದರು. ನಿಯಮಾವಳಿ ಅನಿಯಂತ್ರಿತ, ಹೊರಗಿಡುವ, ತಾರತಮ್ಯವಾಗಿದೆ. ಜೊತೆಗೆ ಭಾರತದ ಸಂವಿಧಾನ ಹಾಗೂ ವಿಶ್ವವಿದ್ಯಾಲಯ ಅನುದಾನ ಆಯೋಗ ಕಾಯ್ದೆ, 1956ರ ವಿಧಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು.

ಈ ವಾದಗಳನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್‌, ಅಂತಿಮ ತೀರ್ಪು ಹೊರಬರುವವರೆಗೆ ಈ ನಿಯಮಾವಳಿಯ ಜಾರಿಗೆ ತಡೆ ನೀಡುವಂತೆ ಮಹತ್ವದ ಆದೇಶ ಹೊರಡಿಸಿದೆ. ಅಧಿಸೂಚನೆಗೊಂಡಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ ವಿರೋಧಿ ನಿಯಮಗಳ ಜಾರಿಗೆ ಸುಪ್ರೀಂ ಕೋರ್ಟ್‌ ಜನವರಿ 29ರ ಗುರುವಾರ ತಾತ್ಕಾಲಿಕ ತಡೆ ನೀಡಿದೆ. ಈ ಮಾರ್ಗಸೂಚಿಗಳು ಸ್ಪಷ್ಟವಾಗಿಲ್ಲ, ದುರುಪಯೋಗಕ್ಕೆ ಒಳಗಾಗುವ ಸಾಧ್ಯತೆ ಇದೆ ಎಂಬ ಕಳವಳವನ್ನು ನ್ಯಾಯಾಲಯ ವ್ಯಕ್ತಪಡಿಸಿದೆ.

UGC

ಈ ಕುರಿತು ಕೇಂದ್ರ ಸರ್ಕಾರ ಹಾಗೂ ಯುಜಿಸಿಗೆ ನ್ಯಾಯಾಲಯವು ನೋಟಿಸ್‌ ಜಾರಿ ಮಾಡಿದ್ದು, ಮುಂದಿನ ಆದೇಶದವರೆಗೆ ಹೊಸ ನಿಯಮಗಳು ತಡೆಹಿಡಿಯಲ್ಪಟ್ಟಿರುತ್ತವೆ ಎಂದು ಸ್ಪಷ್ಟಪಡಿಸಿದೆ. ಈ ತಿಂಗಳ ಆರಂಭದಲ್ಲೇ ಯುಜಿಸಿ ಈ ಹೊಸ ನಿಯಮಗಳನ್ನು ಪ್ರಕಟಿಸಿದ್ದು, ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆ ಸಮಿತಿ ರಚನೆ ಕಡ್ಡಾಯಗೊಳಿಸಿತ್ತು. ತಾರತಮ್ಯದ ಸಂಬಂಧಿತ ದೂರುಗಳನ್ನು ಪರಿಶೀಲಿಸುವುದು ಹಾಗೂ ಸೇರ್ಪಡೆಯನ್ನು ಉತ್ತೇಜಿಸುವುದು ಈ ಸಮಿತಿಯ ಮುಖ್ಯ ಉದ್ದೇಶವಾಗಿದೆ.

ನಿಯಮಗಳ ಪ್ರಕಾರ ಸಮಿತಿಗಳು ಇತರ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಅಂಗವಿಕಲರು ಮತ್ತು ಮಹಿಳೆಯರ ಸದಸ್ಯರನ್ನು ಒಳಗೊಂಡಿರಬೇಕು ಎಂಬ ನಿಯಮವಿತ್ತು. ಈ ಕ್ರಮವು ಹಲವಾರು ರಾಜ್ಯಗಳಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆಗೆ ಕಾರಣವಾಗಿದೆ. ನಿಯಮಗಳನ್ನು ದುರುಪಯೋಗ ಪಡಿಸಿಕೊಳ್ಳಬಹುದು ಎನ್ನುವ ಆರೋಪಗಳು ಕೇಳಿಬಂದಿವೆ.

ಈ ನಿಯಮಗಳು ದುರುಪಯೋಗಕ್ಕೆ ಒಳಗಾಗಬಹುದು ಎಂದು ಆರೋಪಿಸಿ ಹಲವು ರಾಜ್ಯಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಈ ಮಾರ್ಗಸೂಚಿಗಳು ಸಮಾಜವನ್ನು ವಿಭಜಿಸುವ ಸಾಧ್ಯತೆಯಿದೆ ಮತ್ತು ಗಂಭೀರ ಪರಿಣಾಮ ಬೀರಬಹುದು. ಇದೇ ಕಾರಣಕ್ಕೆ ಈ ವಿಷಯದಲ್ಲಿ ಹಸ್ತಕ್ಷೇಪ ಅಗತ್ಯ. 2012ರಲ್ಲಿ ಜಾರಿಯಲ್ಲಿದ್ದ ಮಾರ್ಗಸೂಚಿಗಳು ಸಲಹಾ ಸ್ವರೂಪದ್ದಾಗಿದ್ದು, ಅವು ಮುಂದುವರಿಯುತ್ತವೆ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಲಯದ ಆದೇಶದಲ್ಲಿ ಏನಿದೆ?: ಸಾಮಾನ್ಯ ವರ್ಗಗಳ ವಿರುದ್ಧ ತಾರತಮ್ಯ ಉಂಟಾಗುವ ಸಾಧ್ಯತೆ ಇದೆ ಎಂಬ ಆಕ್ಷೇಪದ ಹಿನ್ನೆಲೆಯಲ್ಲಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ವೇಳೆ, ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿತು.

ನಿಯಮಾವಳಿಯನ್ನು ಪ್ರಖ್ಯಾತ ನ್ಯಾಯಶಾಸ್ತ್ರಜ್ಞರನ್ನು ಒಳಗೊಂಡ ಸಮಿತಿಯ ಮೂಲಕ ಮರುಪರಿಶೀಲನೆ ಮಾಡಬೇಕು ಎಂದು ನ್ಯಾಯಾಲಯ ಚೂಚನೆ ನೀಡಿದೆ. ವಿಚಾರಣೆ ಸಮಯದಲ್ಲಿ, ನಿಯಮಗಳು ಸ್ಪಷ್ಟತೆ ಕೊರತೆಯಿಂದ ದುರುದ್ದೇಶಪೂರಿತ ಬಳಕೆಗೆ ದಾರಿ ಮಾಡಿಕೊಡುವ ಅಪಾಯವಿದೆ ಎಂದು ಪೀಠ ಉಲ್ಲೇಖ ಮಾಡಿದೆ.

ಈ ಸಂಬಂಧ ಮೃತ್ಯುಂಜಯ್ ತಿವಾರಿ, ವಕೀಲ ವಿನೀತ್ ಜಿಂದಾಲ್ ಮತ್ತು ರಾಹುಲ್ ದಿವಾನ್ ಸಲ್ಲಿಕೆ ಮಾಡಿದ್ದ ಮೂರು ರಿಟ್ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಅರ್ಜಿಗಳ ಕುರಿತು ಕೇಂದ್ರ ಸರ್ಕಾರ ಮತ್ತು ಯುಜಿಸಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಮಾರ್ಚ್ 19ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚನೆ ನೀಡಿದೆ. ಅಂತಿಮ ವಿಚಾರಣೆ ನಡೆಯುವವರೆಗೆ ಯುಜಿಸಿ ಇಕ್ವಿಟಿ ನಿಯಮಗಳು-2026 ಜಾರಿಗೆ ತಡೆ ವಿಧಿಸಲಾಗಿದ್ದು, ಈ ಅವಧಿಯಲ್ಲಿ 2012ರ ಯುಜಿಸಿ ನಿಯಮಗಳು ಜಾರಿಯಲ್ಲಿರುತ್ತವೆ ಎಂದು ಸುಪ್ರೀಂ ಆದೇಶಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+