ಪ್ರತಿ 10 ವರ್ಷಗಳಿಗೊಮ್ಮೆ ಆಧಾರ್ ನವೀಕರಣ ಕಡ್ಡಾಯ
ನವದೆಹಲಿ, ನವೆಂಬರ್ 10: ಕೇಂದ್ರ ಸರ್ಕಾರವು ಹೊರಡಿಸಿದ ಹೊಸ ಮಾರ್ಗಸೂಚಿಯಂತೆ ಇನ್ನೂ ಮೇಲೆ ದೇಶದಲ್ಲಿ ಆಧಾರ್ ಕಾರ್ಡ್ನ್ನು ಪ್ರತಿ 10 ವರ್ಷಗಳಿಗೊಮ್ಮೆ ನವೀಕರಣ ಮಾಡುವುದು ಕಡ್ಡಾಯವಾಗಿರುತ್ತದೆ.
ಆಧಾರ್ನಲ್ಲಿ ವಂಚನೆಯನ್ನು ತಡೆಯುವ ಪ್ರಯತ್ನದ ಭಾಗವಾಗಿ ಅಧಿಕಾರಿಗಳು ತಮ್ಮ ಪೂರಕ ದಾಖಲೆಗಳನ್ನು ಬಳಸಿಕೊಂಡು ಪ್ರತಿ 10 ವರ್ಷಗಳಿಗೊಮ್ಮೆ ಆಧಾರ್ ಕಾರ್ಡ್ನಲ್ಲಿರುವ ಮಾಹಿತಿಯನ್ನು ನವೀಕರಿಸುವುದನ್ನು ಕಡ್ಡಾಯಗೊಳಿಸಿಸಲಾಗಿದೆ. ಈ ನೀತಿಯನ್ನು ತಕ್ಷಣವೇ ಜಾರಿಗೆ ಬರುವಂತೆ ಭಾರತದಲ್ಲಿನ ಎಲ್ಲಾ ಆಧಾರ್ ಕಾರ್ಡ್ ಹೊಂದಿರುವ ಜನರಿಗೆ ಕಡ್ಡಾಯಗೊಳಿಸಲಾಗಿದೆ. ಈ ಮೂಲಕ ಆಧಾರ್ ಕಾರ್ಡ್ ಅನ್ನು ಆರಂಭಿಕ ದಾಖಲಾತಿ ದಿನಾಂಕದಿಂದ 10 ವರ್ಷಗಳ ನಂತರ ನವೀಕರಿಸಬೇಕಾಗುತ್ತದೆ.
ಕೇಂದ್ರದ ಅಧಿಕೃತ ದಾಖಲೆ ಪ್ರಕಾರ, ಆಧಾರ್ ಸಂಖ್ಯೆ ಹೊಂದಿರುವವರು, ಆಧಾರ್ಗಾಗಿ ದಾಖಲಾತಿ ದಿನಾಂಕದಿಂದ ಪ್ರತಿ 10 ವರ್ಷಗಳು ಪೂರ್ಣಗೊಂಡ ನಂತರ, ಗುರುತಿನ ಪುರಾವೆ (ಪಿಒಐ) ಮತ್ತು ವಿಳಾಸದ ಪುರಾವೆಯನ್ನು ಸಲ್ಲಿಸುವ ಮೂಲಕ ಆಧಾರ್ನಲ್ಲಿ ತಮ್ಮ ಪೂರಕ ದಾಖಲೆಗಳನ್ನು ಒಮ್ಮೆಯಾದರೂ ನವೀಕರಿಸಬೇಕು ಎಂದು ತಿಳಿಸಿದೆ.

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಇದೇ ರೀತಿಯ ನಿಯಮವನ್ನು ಈ ಹಿಂದೆ ಹೇಳಿತ್ತು. ನಾಗರಿಕರು ತಮ್ಮ ಆಧಾರ್ ಮಾಹಿತಿಯನ್ನು ನಿಯಮಿತವಾಗಿ ನವೀಕರಿಸಲು ಮುಂದಾಗುತ್ತಿದ್ದರು. ಇದೀಗ ಆಧಾರ್ ವಂಚನೆಯನ್ನು ತಡೆಯುವ ಭಾಗವಾಗಿ ಕೇಂದ್ರವು ಈ ನಿಯಮವನ್ನು ಕಡ್ಡಾಯಗೊಳಿಸಿದೆ. ಯುಐಡಿಎಐ ತನ್ನ ಸಲಹೆಯಲ್ಲಿ 10 ವರ್ಷಗಳ ಹಿಂದೆ ತಮ್ಮ ಆಧಾರ್ ಅನ್ನು ಪಡೆದಿರುವ ವ್ಯಕ್ತಿಯನ್ನು ದಾಖಲೆಗಳನ್ನು ಅಪ್ಡೇಟ್ ಮಾಡುವಂತೆ ಸೂಚಿಸಲಾಗುತ್ತದೆ ಎಂದು ತಿಳಿಸಿದೆ.
ತಮ್ಮ ಆಧಾರ್ ಕಾರ್ಡ್ಗಳನ್ನು ನವೀಕರಿಸಲು ಬಯಸುವವರು ಪರಿಶೀಲನೆಗಾಗಿ ತಮ್ಮ ಹತ್ತಿರದ ಯುಐಡಿಎಐ ಕೇಂದ್ರಕ್ಕೆ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಕೊಂಡೊಯ್ಯಬೇಕು. ಅಲ್ಲಿ ಯಾವುದೇ ವ್ಯತ್ಯಾಸಗಳಿಲ್ಲ ಎಂದು ಖಚಿತಪಡಿಸಿಕೊಳ್ಳಲು ನೀಡಲಾಗಿರುವ ಮಾಹಿತಿಯನ್ನು ಹಿಂದಿನ ದಾಖಲೆಗಳೊಂದಿಗೆ ಪರಿಶೀಲಿಸಲಾಗುತ್ತದೆ. ಜನರು ಎಂದು ಗಮನಿಸಿ ಬದಲಾವಣೆಗಳಿದ್ದಲ್ಲಿ ತಿಳಿಸಬೇಕು.

ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಮಾಹಿತಿ ನವೀಕರಣಕ್ಕೆ ಮುಂದುವರೆಯಿರಿ ಆಯ್ಕೆಯನ್ನು ಕ್ಲಿಕ್ ಮಾಡುವ ಮೂಲಕ ಆನ್ಲೈನ್ನಲ್ಲಿ ಆಧಾರ್ ಕಾರ್ಡ್ನಲ್ಲಿ ನವೀಕರಣಗಳನ್ನು ಮಾಡುವ ಆಯ್ಕೆಯೂ ಇದೆ. ಒಬ್ಬರು ತಮ್ಮ ವೈಯಕ್ತಿಕ ಮಾಹಿತಿಯನ್ನು ನವೀಕರಿಸಲು ತಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ಮತ್ತು ಒಟಿಪಿಯನ್ನು ಬಳಸಿ ಲಾಗ್ ಇನ್ ಮಾಡಬಹುದು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications