Aadhaar Card: ಆಧಾರ್ ಬಗೆಗಿನ 3 ಹೊಸ ನಿಯಮ, ಕೊನೆ ಘಳಿಗೆಯಲ್ಲಿ ಪರದಾಡಬೇಡಿ..!
Aadhaar Card update news: ಭಾರತದಲ್ಲಿ ಆಧಾರ್ ಕಾರ್ಡ್ ಬಹುತೇಕ ಎಲ್ಲ ವ್ಯವಹಾರಗಳಿಗೆ, ಪ್ರಮುಖ ಗುರುತಿನ ಚೀಟಿಯಾಗಿ ಪರಿಗಣಿಸಲಾಗಿದೆ. ಈ ಆಧಾರ್ ಕಾರ್ಡ್ ನವೀಕರಣ/ಅಪ್ಡೇಟ್ ಅನ್ನು ಮತ್ತಷ್ಟು ಸರಳಗೊಳಿಸಿರುವ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಇದೇ ನವೆಂಬರ್ನಿಂದ ಮೂರು ಹೊಸ ನಿಯಮ ಜಾರಿಗೆ ತಂದಿದೆ. ಇದರಿಂದ ಸಾರ್ವಜನಿಕರು ತೊಂದರೆ ಇಲ್ಲದೇ, ಕಚೇರಿಗಳಿಗೆ ಅಲೆಯದೇ ಕೂತಲ್ಲಿಯೇ ಆಧಾರ ಕರೆಕ್ಷನ್ ಮಾಡಬಹುದಾಗಿದೆ.
ಆಧಾರ್ ಕಾರ್ಡ್ ಹೊಂದಿರುವವರು ನಿಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ ಮತ್ತು ಮೊಬೈಲ್ ಸಂಖ್ಯೆಯನ್ನು ಆನ್ಲೈನ್ನಲ್ಲಿ ಬದಲಾಯಿಸಲು ಅವಕಾಶ ನೀಡಲಾಗಿದೆ. ಜನರು ಡಿಜಿಟಲ್ ಸೇವೆಗಾಗಿ ಭೌತಿಕ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡುವುದು ತಪ್ಪುತ್ತದೆ. ನೀವು ಭೌತಿಕವಾಗಿ ಖುದ್ದು ಭೇಟಿ ನೀಡಿ ಆಧಾರ್ ಕರೆಕ್ಷನ್ ಮಾಡಿಸುವ ಅವಶ್ಯಕತೆ ಇರುವುದಿಲ್ಲ ಎಂದು ಪ್ರಾಧಿಕಾರ ತಿಳಿಸಿದೆ. ಈ ಹೊಸ ನಿಯಮ ನವೆಂಬರ್ 1ರಿಂದಲೇ ಜಾರಿಗೆ ಬಂದಿದೆ. ಈ ಕೆಳಗಿನ ಮೂರು ನಿಯಮಗಳೂ ಸೇವೆಯನ್ನು ಬಳಕೆದಾರ ಸ್ನೇಹಿಯಾಗಿವೆ ಮಾಡಿವೆ.

ಆಧಾರ್ ಅಪ್ಡೇಟ್ಸ್ ಸರಳೀಕರಣ
ಆಧಾರ್ ಹೊಂದಿರುವವರು ಹೆಸರು, ವಿಳಾಸ, ಜನ್ಮ ದಿನಾಂಕ ಮತ್ತು ಮೊಬೈಲ್ ಸಂಖ್ಯೆ ಇನ್ನಿತರ ವೈಯಕ್ತಿಕ ವಿವರಗಳನ್ನು ಸಂಪೂರ್ಣವಾಗಿ ಆನ್ಲೈನ್ನಲ್ಲಿಯೇ ಕೂತಲ್ಲೆ ಬದಲಾಯಿಸಬಹುದು, ಅಪ್ಡೇಟ್ ಮಾಡಬಹುದು. ಈ ಪ್ರಕ್ರಿಯೆ ಪಾನ್ ಕಾರ್ಡ್, ಪಾಸ್ಪೋರ್ಟ್ ಜೊತೆಗೆ ಲಿಂಕ್ ಮಾಡಲಾದ ಸರ್ಕಾರಿ ದಾಖಲೆಗಳನ್ನು ಪರಿಶೀಲಿಸುತ್ತದೆ. ಕಚೇರಿಗೆ ಅಲೆಯುವುದನ್ನು ತಪ್ಪಿಸುತ್ತದೆ. ನೀವೇನಾದರು ಬೆರಳ ಗುರುತು (ಫಿಂಗರ್ಪ್ರಿಂಟ್), ಐರಿಸ್ ಸ್ಕ್ಯಾನ್ಗಳು, ಫೋಟೋ ಬದಲಾಯಿಸಬೇಕಾದರೆ ಮಾತ್ರವೇ ಅಧಿಕೃತ ಆಧಾರ್ ಸೇವಾ ಕೇಂದ್ರಕ್ಕೆ ಭೇಟಿ ನೀಡಬೇಕಿದೆ.
ಆಧಾರ್ ಬದಲಾವಣೆಗಳಿಗೆ ಹೊಸ ಶುಲ್ಕ
UIDAI ಆಧಾರ್ ಕರಕ್ಷನ್ ಹೊಸ ಶುಲ್ಕವನ್ನು ಪರಿಚಯಿಸಿದೆ. ವಿವರ ಬದಲಾವಣೆಗೆ ರೂ. 75 ವೆಚ್ಚ, ಆದರೆ ಬಯೋಮೆಟ್ರಿಕ್ ಅಪ್ಡೇಟ್ಗೆ 125 ರೂಪಾಯಿ ಶುಲ್ಕ, ಆನ್ಲೈನ್ ದಾಖಲೆ ನವೀಕರಣಕ್ಕೆ 2026 ರ ಜೂನ್ 14ವರೆಗೆ ಉಚಿತವಾಗಿದೆ. ಬಳಿಕ ಶುಲ್ಕ ಅನ್ವಯವಾಗುತ್ತದೆ. 5-7 ರಿಂದ 15-17 ವರ್ಷ ವಯಸ್ಸಿನ ಮಕ್ಕಳು ಉಚಿತ ಬಯೋಮೆಟ್ರಿಕ್ ಅಪ್ಡೇಟ್ಗೆ ಅವಕಾಶ ಇದೆ.
ಆಧಾರ್ಗೆ ಪಾನ್ ಕಾರ್ಡ್ ಲಿಂಕ್ ಕಡ್ಡಾಯ
ನಿಮ್ಮ ಪಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಮಾಡುವುದು ಕಡ್ಡಾಯಗೊಳಿಸಲಾಗಿದೆ. ಇಲ್ಲವಾದರೆ 2026 ಜನವರಿಯಿಂದ ತಮ್ಮ ಪಾನ್ ಕಾರ್ಡ್ ನಿಷ್ಕ್ರಿಯವಾಗುವ ಸಾಧ್ಯತೆ ಇದೆ. 2025 ಡಿಸೆಂಬರ್ 31ರೊಳಗೆ ಎರಡೂ ಗುರುತಿನ ಚೀಟಿಗಳನ್ನು ಲಿಂಕ್ ಮಾಡಬೇಕು. ಬ್ಯಾಂಕ್, ಇತರ ಹಣಕಾಸು ಸಂಸ್ಥೆಗಳು OTP, ವೀಡಿಯೊ ಕರೆಗಳು ಹಾಗೂ ವೈಯಕ್ತಿಕ ಆಧಾರ್ ದೃಢೀಕರಣ ಮೂಲಕ ಸರಳವಾಗಿ ಇ-ಕೆವೈಸಿ ಆಯ್ಕೆ ಅನುಸರಿಸುವಂತೆ ತಿಳಿಸಲಾಗಿದೆ. ಈ ಎಲ್ಲ ನಿಯಮಗಳು ಕಳೆದ ನವೆಂಬರ್ 1ರಿಂದ ಜಾರಿಗೆ ಬಂದಿವೆ. ಹೆಚ್ಚಿನ ಮಾಹಿತಿಗೆ ಆನ್ಲೈನ್ನಲ್ಲಿ ಪರಿಶೀಲಿಸಿ, ಇಲ್ಲವೇ ಅಧಿಕೃತ ಆಧಾರ್ ಸೇವಾ ಕೇಂದ್ರಕ್ಕೆ ಭೇಟಿ ನೀಡಿ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications