ಉಜ್ಜಯಿನಿ ದೇವಸ್ಥಾನದಲ್ಲಿ ಗಾಳಿಗೆ ಪ್ರತಿಮೆ ನಾಶ, ಇದು ಸಿಎಂ ಚೌಹಾಣ್ ಸರ್ಕಾರ: ಕಾಂಗ್ರೆಸ್ ವ್ಯಂಗ್ಯ
ಭೋಪಾಲ್, ಮೇ 30: ಮಧ್ಯ ಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ 2022ರಲ್ಲಿ ಪ್ರಧಾನಿ ಮೋದಿಯಿಂದ ಲೋಕಾರ್ಪಣೆಗೊಂಡಿದ್ದ ಬಹುಕೋಟಿ ವೆಚ್ಚದ ಮಹಾಕಾಲ್ ಲೋಕ ಕಾರಿಡಾರ್ ಭಾನುವಾರ ಮಧ್ಯಾಹ್ನ ಬೀಸಿದ ಬಿರುಗಾಳಿಯಿಂದ ಸಪ್ತಋಷಿಗಳ ಪ್ರತಿಮೆಗಳಿಗೆ ಹಾನಿಯಾಗಿದೆ. ಇದುವೇ ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದ ಆಡಳಿತ ವೈಖರಿ ಎಂದು ಕಾಂಗ್ರೆಸ್ ಟೀಕಿಸಿದೆ.
ಕೋಟಿಗಟ್ಟಲೇ ರೂಪಾಯಿ ವೆಚ್ಚದ ಪ್ರತಿಮೆಗಳು ಕೆಲವೇ ತಿಂಗಳುಗಳ ಬಳಿಕ ಕೇವಲ ಬಿರುಗಾಳಿಗೆ ಉರುಳಿವೆ. ಪ್ರತಿಮೆಗಳ ಕೈಗಳು, ತಲೆ ಮುರಿದಿವೆ. ಈ ಸಂಬಂಧ ಮಧ್ಯಪ್ರದೇಶದ ಕಾಂಗ್ರೆಸ್ ಟ್ವೀಟ್ ಮಾಡಿದ ಬಿಜೆಪಿ ಸರ್ಕಾರವನ್ನು ಲೇವಡಿ ಮಾಡಿದೆ. ಪ್ರತಿಮೆ ಲೋಕಾರ್ಪಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಸರ್ಕಾರ ಕುರಿತು ಮಾತನಾಡಿದ್ದ ಭಾಷಣದ ವಿಡಿಯೋ ತುಣಕು ಹಂಚಿಕೊಂಡಿದೆ.

ಮಧ್ಯಪ್ರದೇಶದಲ್ಲಿನ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರ್ಕಾರದಿಂದ ಇಂತಹ ಋಷಿಮುನಿಗಳ ಪ್ರತಿಮೆ ಲೋಕಾರ್ಪಣೆ ಆಗಿದೆ. ಇಲ್ಲಿ ದಿವ್ಯ ಅಲೌಖಿಕ ದರ್ಶನ ಪಡೆದು ಸಾರ್ವಜನಿಕರು ಕಣ್ತುಂಬಿಕೊಳ್ಳಬಹುದು. ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಇಂತದೊಂದು ಭವ್ಯತೆಗೆ ಸೃಷ್ಟಿಗೆ ಶ್ರಮಿಸಿದ ಮುಖ್ಯಮಂತ್ರಿಗಳಿಗೆ ಅಭಿನಂದನೆ ತಿಳಿಸಿ ಲೋಕಾರ್ಪಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದರು.
ಭಾನುವಾರ ಬೀಸಿದ ಬಿರುಗಾಳಿ ಸಹಿತ ಮಳೆಗೆ ದೇವಸ್ಥಾನದಲ್ಲಿ ಏಳು ಪ್ರತಿಮೆಗಳಲ್ಲಿ ಆರು ಸ್ಥಳಾಂತರಗೊಂಡಿವೆ. ಅಲ್ಲದೇ ಎರಡು ಹಾನಿಗೊಳಗಾಗಿವೆ. ಇದರ ಜೊತೆಗೆ ಬಿರುಗಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಕೇವಲ ಮಳೆ ಗಾಳಿ ಹೀಗೆ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಸ್ಥಾಪಿಸಿದ್ದ ಪ್ರತಿಮೆಗಳು ಉರುಳುತ್ತವೆ ಎಂದರೆ ಬಿಜೆಪಿ ಸರ್ಕಾರದ ಯೋಜನೆ, ಆಡಳಿತ ಕುರಿತು ಸಂಶಯ ವ್ಯಕ್ತವಾಗುತ್ತದೆ ಎಂದು ಕಾಂಗ್ರೆಸ್ ಕುಟುಕಿದೆ.

ಮಹಾಕಾಳೇಶ್ವರನ ಮೇಲೆಯೂ ದಾಳಿ?
ಬಿಜೆಪಿ ಸರ್ಕಾರವು ಮಹಾಕಾಳೇಶ್ವರನ ಮೇಲೆಯೂ ದಾಳಿ ನಡೆಸಿದೆ ಎಂದು ಕುಟುಕಿರುವ ಕಾಂಗ್ರೆಸ್ ಇದು ಶಿವರಾಜ್ ಚೌಹಾಣ್ ಸರ್ಕಾರದ ಆಡಳಿತ ಎಂದು ಟ್ವೀಟ್ ಮೂಲಕ ದೂರಿದೆ.
2022 ರ ಅಕ್ಟೋಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ ಮಹಾಕಾಲ್ ಲೋಕ ದೇವಾಲಯದ ಕಾರಿಡಾರ್ನಲ್ಲಿ ಘಟನೆ ಸಂಭವಿಸಿದೆ. ದೇವಾಲಯದ ಕಾರಿಡಾರ್ನಲ್ಲಿ ಆರು ಪ್ರತಿಮೆಗಳನ್ನು ಅವುಗಳ ಪೀಠದಿಂದ ಸ್ಥಳಾಂತರಿಸಿರುವುದರಿಂದ ಯಾರಿಗೂ ಗಾಯಗಳಾಗಿಲ್ಲ.
ಇನ್ನೂ ಇದೆ ವೇಳೆ ಅಲ್ಲಿ ಸುಮಾರು 50 ಮರಗಳು ಹಾಗೂ ಹಲವು ವಿದ್ಯುತ್ ಕಂಬಗಳು ಧರೆಗುರುಳಿವೆ. ಮಹಾಕಾಲ್ ಲೋಕದಲ್ಲಿ 155 ವಿಗ್ರಹಗಳಿವೆ. ಹಾನಿಗೊಳಗಾದ ಮೂರ್ತಿಗಳನ್ನು ಗುತ್ತಿಗೆದಾರರೇ ದುರಸ್ತಿಗೊಳಿಸಿದ್ದಾರೆ. ಸಿಎಂ ಚೌಹಾಣ್ ಅವರು ಉಜ್ಜಯಿನಿ ಜಿಲ್ಲಾಧಿಕಾರಿ ಮತ್ತು ವಿಭಾಗೀಯ ಆಯುಕ್ತರಿಗೆ ಘಟನೆ ಪರಿಶೀಲನೆಗೆ ಸೂಚಿಸಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications